Valmiki Corp Scam: ಮೂರು ಐಎಎಸ್‌ಗಳಿಗೆ ಇ.ಡಿ. ನೋಟಿಸ್‌?

ಅಕ್ರಮ ಹಣ ವರ್ಗ ಅಧಿಕಾರಿಗಳಿಗೆ ಗೊತ್ತಾಗಲಿಲ್ಲವೇ? ಇ.ಡಿ. ಪ್ರಶ್ನೆ ; ಸದ್ಯದಲ್ಲೇ ವಿಚಾರಣೆ ಆರಂಭ ಸಾಧ್ಯತೆ

Team Udayavani, Jul 25, 2024, 7:10 AM IST

Valmiki Corp Scam: ಮೂರು ಐಎಎಸ್‌ಗಳಿಗೆ ಇ.ಡಿ. ನೋಟಿಸ್‌?

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೋಟ್ಯಂತರ ರೂ. ಹಗರಣದ ಸಂಬಂಧ ಮೂವರು ಐಎಎಸ್‌ ಅಧಿಕಾರಿಗಳಿಗೆ ಜಾರಿ ನಿರ್ದೇಶನಾಲಯ (ಇ.ಡಿ.) ತನಿಖೆ ಭೀತಿ ಎದುರಾಗಿದ್ದು, ಶೀಘ್ರದಲ್ಲೇ ನೋಟಿಸ್‌ ನೀಡಿ ವಿಚಾರಣೆ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕ ರಣದ ಇ.ಡಿ. ತನಿಖೆಯು ಬಗೆದಷ್ಟು ಆಳಕ್ಕೆ ಹೋಗುತ್ತಿದೆ. ಇದೀಗ ಹಣಕಾಸು ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ಐಎಎಸ್‌ ಅಧಿಕಾರಿಗಳಿಗೆ ನೋಟಿಸ್‌ ನೀಡಿ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಲು ಇ.ಡಿ. ಸದ್ದಿಲ್ಲದೆ ಸಿದ್ಧತೆ ನಡೆಸುತ್ತಿದೆ ಎನ್ನಲಾಗಿದೆ.

ಮಾಜಿ ಸಚಿವ ಬಿ. ನಾಗೇಂದ್ರ, ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್‌ ಹಾಗೂ ನಿಗಮದ ಕೆಲವು ಅಧಿಕಾರಿಗಳು ವಿಚಾರಣೆ ವೇಳೆ ಕೊಟ್ಟ ಮಾಹಿತಿ ಆಧರಿಸಿ ಇ.ಡಿ. ತನಿಖೆ ಮುಂದುವರಿಸಿತ್ತು. ಈ ವೇಳೆ ಹಣಕಾಸು ಇಲಾಖೆಯಿಂದ ವಾಲ್ಮೀಕಿ ನಿಗಮಕ್ಕೆ ದುಡ್ಡು ಒದಗಿಸಲು ಅನುಮತಿ ಕೊಟ್ಟಿರುವುದು ಸೇರಿದಂತೆ ದೊಡ್ಡ ಮೊತ್ತದ ಹಣ ವರ್ಗಾವಣೆ ನಡೆಸಿ ಅಕ್ರಮ ಎಸಗಿರುವುದು ಈ ಮೂವರು ಐಎಎಸ್‌ ಅಧಿಕಾರಿಗಳ ಗಮನಕ್ಕೆ ಬಂದಿರಲಿಲ್ಲವೇ ಎಂಬಿತ್ಯಾದಿ ಅನುಮಾನಗಳು ಹುಟ್ಟಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿಚಾರಣೆ ನಡೆಸಿ ನಿಗಮದ ದೊಡ್ಡ ಮೊತ್ತದ ದುಡ್ಡಿನ ರಹಸ್ಯ ಕೆದಕಲು ಇ.ಡಿ. ಮುಂದಾಗಿದೆ ಎನ್ನಲಾಗಿದೆ.

ಹಗರಣದ ಮಾಹಿತಿ ಕಲೆ ಹಾಕುತ್ತಿರುವ ಸಿಬಿಐ
ಇಡಿ ತನಿಖೆಯ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ಹಗರಣದ ಇಂಚಿಂಚೂ ಮಾಹಿತಿ ಹಾಗೂ ದಾಖಲೆ ಕಲೆ ಹಾಕಲು ಪ್ರಾರಂಭಿಸಿದ್ದಾರೆ. ನಿಗಮದಿಂದ ಬ್ಯಾಂಕ್‌ಗೆ ಹಣ ವರ್ಗಾವಣೆ ಮಾಡಲು ಸಹಕರಿಸಿದ ಬ್ಯಾಂಕ್‌ ಸಿಬಂದಿಯ ವಿರುದ್ಧ ಸಿಬಿಐ ಸಾಕ್ಷ್ಯ ಸಂಗ್ರಹಿಸಿದೆ. ಕೆಲವು ಹಿರಿಯ ಪೊಲೀಸ್‌ ಅಧಿಕಾರಿಗಳಿಂದ ಗೌಪ್ಯವಾಗಿ ಸಿಬಿಐ ಮಾಹಿತಿ ಕಲೆ ಹಾಕುತ್ತಿದೆ ಎನ್ನಲಾಗಿದೆ. ಬ್ಯಾಂಕ್‌ ಅವ್ಯವಹಾರದ ತನಿಖೆ ನಡೆಸಿದ ಬಳಿಕ ಹಗರಣದಲ್ಲಿ ಶಾಮೀಲಾದ ಮಾಜಿ ಸಚಿವ ನಾಗೇಂದ್ರ ಸೇರಿ ಇತರ ಆರೋಪಿಗಳನ್ನು ಸಿಬಿಐ ವಿಚಾರಣೆಗೆ ಒಳಪಡಿಸುವ ಸಾಧ್ಯತೆಗಳಿವೆ. ಹಗರಣದಲ್ಲಿ ಶಾಮೀಲಾದ ಕೆಲವರಿಗೆ ಇಡಿ ಬೆನ್ನಲ್ಲೇ ಸಿಬಿಐ ಭೀತಿಯೂ ಎದುರಾಗಿದೆ.

ಬ್ಯಾಂಕ್‌ ಅವ್ಯವಹಾರದ ಬಗ್ಗೆ ಯೂನಿಯನ್‌ ಬ್ಯಾಂಕ್‌ ಆಫ್ ಇಂಡಿಯಾದ ಡಿಜಿಎಂ ಜೆ. ಮಹೇಶ್‌ ಸಿಬಿಐಗೆ ದೂರು ನೀಡಿದ್ದರು. ಫೆ. 21ರಿಂದ ಮೇ 6ರವರೆಗೆ ಬ್ಯಾಂಕ್‌ನಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಿಬಿಐಗೆ ಒದಗಿಸಿದ್ದರು. ಯೂನಿಯನ್‌ ಬ್ಯಾಂಕ್‌ ಆಫ್ ಇಂಡಿಯಾದ ಎಂಜಿ ರಸ್ತೆ ಶಾಖೆಯ ಮುಖ್ಯ ವ್ಯವಸ್ಥಾಪಕಿಯರಾದ ಶುಚಿಸ್ಮಿತಾ ರಾವುಲ್‌ (ಎ1), ಡಿ.ದೀಪಾ (ಎ2), ಬ್ಯಾಂಕ್‌ನ ಕ್ರೆಡಿಟ್‌ ಆಫೀಸರ್‌ ವಿ.ಕೃಷ್ಣಮೂರ್ತಿ (ಎ3) ವಿರುದ್ಧ ಸಿಬಿಐ ಎಫ್ಐಆರ್‌ ದಾಖಲಿಸಿಕೊಂಡಿತ್ತು.

ಬೆಳವಣಿಗೆಗಳೇನು?
-ವಾಲ್ಮೀಕಿ ನಿಗಮ ಅಧ್ಯಕ್ಷ ದದ್ದಲ್‌,ಮಾಜಿ ಸಚಿವ ನಾಗೇಂದ್ರ ವಿಚಾರಣೆ ವೇಳೆ ಹಲವು ಮಾಹಿತಿ ಬಹಿರಂಗ?
-ಹಣಕಾಸು, ಸಮಾಜ ಕಲ್ಯಾಣ ಇಲಾಖೆಯ ಐಎಎಸ್‌ ಅಧಿಕಾರಿಗಳಿಗೆ ನೋಟಿಸ್‌ ಸಾಧ್ಯತೆ
-ಅಧಿಕಾರಿಗಳ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಲು ಇ.ಡಿ.ಯಿಂದ ಸದ್ದಿಲ್ಲದೇ ಸಿದ್ಧತೆ

ಟಾಪ್ ನ್ಯೂಸ್

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.