Valmiki Corporation scam; ಹಲವೆಡೆ ನಾಗೇಂದ್ರ ಆಪ್ತರ ಮನೆ ಮೇಲೆ ಇಡಿ ದಾಳಿ
ಜಾರ್ಜ್ ಶೀಟ್ ಸಲ್ಲಿಕೆಗೆ ಸಮಯ ಹತ್ತಿರ ಬಂದಿರುವುದರಿಂದ ಚುರುಕಾಗಿರುವ ಇಡಿ
Team Udayavani, Aug 28, 2024, 12:13 PM IST
ಬಳ್ಳಾರಿ : ವಾಲ್ಮಿಕಿ ಅಭಿವೃದ್ಧಿ ನಿಗಮ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಬಳ್ಳಾರಿ, ಕೊಪ್ಪಳ ರಾಯಚೂರಿನಲ್ಲಿ ಇಡಿ ಅಧಿಕಾರಿಗಳು ಬುಧವಾರ ಬೆಳಗ್ಗೆ(ಆ 28) ದಾಳಿ ನಡೆಸಿದ್ದಾರೆ. ಬಳ್ಳಾರಿಯ ವಿವಿಧೆಡೆ ಮತ್ತೊಮ್ಮೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆ ಮೇಲೆ ದಾಳಿ ನಡೆಸಲಾಗಿದೆ.
ನಾಗೇಂದ್ರ ಸಂಬಂಧಿ ಎರ್ರಿಸ್ವಾಮಿ ಮನೆ ಸೇರಿದಂತೆ ಕೆಲ ಆಪ್ತ ಸಹಾಯಕರು ಮತ್ತು ಆಪ್ತರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಜಾರ್ಜ್ ಶೀಟ್ ಸಲ್ಲಿಕೆಗೆ ಸಮಯ ಹತ್ತಿರ ಬಂದಿರುವುದರಿಂದ ಇಡಿ ದಾಳಿ ನಡೆದಿದ್ದು, ಬೆಂಗಳೂರಿನಿಂದ ಎರಡು ಕಾರುಗಳಲ್ಲಿ ಬಂದಿರುವ ಮೂವರು ಇಡಿ ಅಧಿಕಾರಿಗಳು, ಇಬ್ಬರು ಭದ್ರತಾ ಸಿಬಂದಿಗಳು ಪರಿಶೀಲನೆ ನಡೆಸಿದ್ದಾರೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಆರ್ ಟಿಒ ಕಚೇರಿ ಬಳಿಯ ಎರ್ರಿಸ್ವಾಮಿ ನಿವಾಸಕ್ಕೆ ಬಂದಿದ್ದ ಇಡಿ ಅಧಿಕಾರಿಗಳು, ಮೊದಲು ಮನೆಯ ಮುಂದಿನ ರಸ್ತೆಯಲ್ಲಿ ಅತ್ತ ಇತ್ತ ಸಂಚರಿಸಿ, ಪರಿಶೀಲಿಸಿದ ಬಳಿಕ ಮನೆಗೆ ದಾಳಿ ನಡೆಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.