Valmiki:ಚಂದ್ರಶೇಖರ್‌ ಆ*ತ್ಮಹತ್ಯೆಗೆ ಅಧಿಕಾರಿಗಳಿಂದ ಒತ್ತಡವೇ ಕಾರಣ

ಪದ್ಮನಾಭ್‌, ಪರಶುರಾಮ್‌ ವಿರುದ್ಧ 300 ಪುಟಗಳ ಆರೋಪಪಟ್ಟಿ

Team Udayavani, Aug 23, 2024, 6:26 AM IST

CID

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದ ಅಂದಿನ ವ್ಯವಸ್ಥಾಪಕ ಜೆ.ಬಿ. ಪದ್ಮನಾಭ್‌ ಮತ್ತು ಲೆಕ್ಕಾಧೀಕ್ಷಕ ಪರುಶರಾಮ್‌ ದುರ್ಗಣ್ಣನವರ್‌ ಅವರಿಂದ ತೀವ್ರ ಒತ್ತಡ ಹಾಗೂ ಇಡೀ ಪ್ರಕರಣದ ಹೊಣೆ ಹೊರಿಸುವುದಾಗಿ ಬ್ಲ್ಯಾಕ್‌ಮೇಲ್ ಮಾಡಿರುವುದೇ ನಿಗಮದ ಅಧೀಕ್ಷಕ ಪಿ. ಚಂದ್ರಶೇಖರ್‌ ಆತ್ಮಹತ್ಯೆಗೆ ಕಾರಣ ಎಂದು ಸಿಐಡಿ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಚಂದ್ರಶೇಖರ್‌ ಆತ್ಮಹತ್ಯೆ ಪ್ರಕರಣದ ಸಂಬಂಧ ತನಿಖೆ ನಡೆಸುತ್ತಿರುವ ಸಿಐಡಿ ಎಸ್‌ಐಟಿ ಗುರುವಾರ ಶಿವಮೊಗ್ಗದ ಸೆಶನ್ಸ್‌ ಕೋರ್ಟ್‌ಗೆ ಸಲ್ಲಿಸಿರುವ 300 ಪುಟಗಳ ಪ್ರಾಥಮಿಕ ಆರೋಪಪಟ್ಟಿಯಲ್ಲಿ ಈ ಅಂಶವನ್ನು ಉಲ್ಲೇಖೀಸಿದೆ. ಚಂದ್ರಶೇಖರ್‌ ಈ ಇಬ್ಬರು ಅಧಿಕಾರಿ ಗಳು ಹಾಗೂ ಇತರರ ವಿರುದ್ಧ 187.33 ಕೋಟಿ ರೂ. ವಂಚಿಸಿರುವ ಕುರಿತು ಆರೋಪಿಸಿ, ಮೇ 28ರಂದು ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಅಧಿಕಾರಿಗಳಿಂದ ಒತ್ತಡವೇ ಕಾರಣ
ಈ ಸಂಬಂಧ ಶಿವಮೊಗ್ಗದ ವಿನೋಬಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ವೇಳೆ ನಿಗಮದಲ್ಲಿ ನೂರಾರು ಕೋಟಿ ರೂ. ವಂಚನೆ ಸಂಬಂಧ ಬೆಂಗಳೂರು ಸೇರಿ ವಿವಿಧೆಡೆ 8 ಪ್ರಕರಣಗಳು ದಾಖಲಾಗಿದ್ದವು. ಈಗ ಈ 8 ಪ್ರಕರಣಗಳ ಪೈಕಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಸದ್ಯ ಪ್ರಾಥಮಿಕ ಆರೋಪಪಟ್ಟಿ ಸಲ್ಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ. ಸದ್ಯ ಈ ಇಬ್ಬರು ಆರೋಪಿ ಅಧಿಕಾರಿಗಳು ಬಂಧನಕ್ಕೊಳಗಾಗಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

300 ಪುಟ, 36 ಸಾಕ್ಷಿ, 67 ಸಾಕ್ಷ್ಯ ಸಂಗ್ರಹ: 300 ಪುಟಗಳ ಪ್ರಾಥಮಿಕ ಆರೋಪಪಟ್ಟಿಯಲ್ಲಿ ಚಂದ್ರಶೇಖರ್‌ ಅವರ ಪತ್ನಿ ಕವಿತಾ, ನಿಗಮದ ಎಲ್ಲ ಹಂತದ ಅಧಿಕಾರಿಗಳು, ಬ್ಯಾಂಕ್‌ನ ಅಧಿಕಾರಿಗಳ ಸಹಿತ ಸುಮಾರು 36 ಮಂದಿ ಸಾಕ್ಷಿಗಳ ಹೇಳಿಕೆ ಹಾಗೂ ಆರೋಪಿಗಳು ಅಕ್ರಮವಾಗಿ ಹಣ ವರ್ಗಾವಣೆಗೆ ಸೂಚಿಸಿರುವ ಕುರಿತ ದಾಖಲೆಗಳು, ಬ್ಯಾಂಕ್‌ನಲ್ಲಿ ದೊರೆತ ನಕಲಿ ಖಾತೆಗಳು ವಿವರ ಸೇರಿ ಸುಮಾರು 67 ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ಇತರ ಸಾಕ್ಷಿಗಳ ಹೇಳಿಕೆ ಹಾಗೂ ಸಾಕ್ಷ್ಯ ಸಂಗ್ರಹ ಬಾಕಿ ಇದೆ ಎಂದು ಮೂಲಗಳು ತಿಳಿಸಿವೆ.
ಇದೇ ಹಗರಣ ಪ್ರಕರಣ ಸಂಬಂಧ ಹೈಗ್ರೌಂಡ್ಸ್‌ ಠಾಣೆಯಲ್ಲಿ ಎಂ.ಜಿ. ರಸ್ತೆಯಲ್ಲಿರುವ ಯೂನಿಯನ್‌ ಬ್ಯಾಂಕ್‌ನ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಅಲ್ಲದೆ ಬೇರೆ ಬೇರೆ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಈ ಸಂಬಂಧ ಇದುವರೆಗೆ 14ಕ್ಕೂ ಅಧಿಕ ಮಂದಿಯನ್ನು ಎಸ್‌ಐಟಿ ಬಂಧಿಸಿದೆ. ಇನ್ನು ಇ.ಡಿ. ಅಧಿಕಾರಿಗಳು ಸಚಿವರಾಗಿದ್ದ ನಾಗೇಂದ್ರ ಅವರನ್ನು ಬಂಧಿಸಿದ್ದಾರೆ. ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಗೋವಾಕ್ಕೆ ಕರೆದೊಯ್ದಿದ್ದ ಆರೋಪಿಗಳು?
ಚಂದ್ರಶೇಖರ್‌ ಆರೋಪಿಗಳ ಬೆದರಿಕೆಗೆ ಬಗ್ಗಿರಲಿಲ್ಲ. ಹೀಗಾಗಿ ಆರೋಪಿಗಳು ಕೆಲವು ಸಬೂಬು ಹೇಳಿ ಚಂದ್ರಶೇಖರ್‌ ಅವರನ್ನು ಗೋವಾಕ್ಕೆ ಕರೆದೊಯ್ದಿದ್ದರು ಎಂದು ಹೇಳಲಾಗಿದೆ. ಅಲ್ಲದೆ 5 ಲಕ್ಷ ರೂ.ಅಧಿಕ ಹಣ ನೀಡುವುದಾಗಿ ಆಮಿಷವೊಡ್ಡಿ, ಈ ವಿಚಾರವನ್ನು ಯಾರೊಂದಿಗೂ ಬಾಯಿ ಬಿಡದಂತೆ ಎಚ್ಚರಿಕೆ ನೀಡಿದ್ದರು. ಆದರೆ ಚಂದ್ರಶೇಖರ್‌ ಒಪ್ಪಿಕೊಂಡಿರಲಿಲ್ಲ. ಅನಂತರ ಆರೋಪಿಗಳು ಅಂದಿನ ಸಚಿವ ನಾಗೇಂದ್ರ ಅವರ ಆಪ್ತರು ಹಾಗೂ ಬೇರೆ ಬೇರೆ ಮಾರ್ಗಗಳ ಮೂಲಕ ಚಂದ್ರಶೇಖರ್‌ ಮೇಲೆ ಒತ್ತಡ ಹಾಕಿದ್ದರು ಎಂದು ಹೇಳಲಾಗಿದೆ. ಈ ಎಲ್ಲ ಕಾರಣಗಳಿಂದ ತೀವ್ರ ಮಾನಸಿಕ ಒತ್ತಡಕ್ಕೊಳಗಾದ ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.