ವೀರಪ್ಪ ಮೊಯಿಲಿಗೆ ಕೋವಿಡ್ ಪಾಸಿಟಿವ್: ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕ
Team Udayavani, Jan 13, 2022, 8:49 AM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನ ಹಿರಿಯ ನಾಯಕ ವೀರಪ್ಪ ಮೊಯಿಲಿ ಅವರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ. ಈ ಬಗ್ಗೆ ವೀರಪ್ಪ ಮೊಯಿಲಿ ಅವರು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.
“ಇಂದು ಸಂಜೆ ನನಗೆ ಕೋವಿಡ್ ಸೋಂಕು ದೃಢವಾಗಿದೆ. ಕೆಮ್ಮು ಮತ್ತು ಜ್ವರದ ರೋಗಲಕ್ಷಣಗಳನ್ನು ಹೊಂದಿದ್ದೇನೆ. ನಾನು ಸಂಪೂರ್ಣವಾಗಿ ಲಸಿಕೆಯನ್ನು ಪಡೆದಿದ್ದರಿಂದ ಹೆಚ್ಚು ತೀವ್ರವಾದ ಅನಾರೋಗ್ಯದಿಂದ ನನ್ನನ್ನು ರಕ್ಷಿಸುತ್ತಿದೆ. ನಾನು ಸದ್ಯ ಹೋಮ್ ಕ್ವಾರಂಟೈನ್ ನಲ್ಲಿದ್ದೇನೆ ಮತ್ತು ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರನ್ನು ಪರೀಕ್ಷಿಸಲು ವಿನಂತಿಸುತ್ತೇನೆ” ಎಂದು ಮೊಯಿಲಿ ಬುಧವಾರ ರಾತ್ರಿ ಟ್ವೀಟ್ ಮಾಡಿದ್ದಾರೆ.
ವೀರಪ್ಪ ಮೊಯಿಲಿ ಅವರು ಮೇಕೆದಾಟು ಪಾದಯಾತ್ರೆಯ ಮೊದಲ ದಿನ ಭಾಗವಹಿಸಿದ್ದರು. ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ನಾಯಕರ ಪೈಕಿ ಕೋವಿಡ್ ಸೋಂಕಿಗೊಳಗಾದವರ ಸಂಖ್ಯೆ ನಾಲ್ಕಕ್ಕೇರಿದೆ.
ಇದನ್ನೂ ಓದಿ:ಕೋವಿಡ್: ಆಸ್ಪತ್ರೆ ದಾಖಲಾತಿ ಕಡಿಮೆ ! ಹೋಂ ಐಸೋಲೇಶನ್ನಲ್ಲಿ ಶೇ. 93 ಸೋಂಕಿತರು
ಮಾಜಿ ಸಚಿವ ಎಚ್ ಎಂ ರೇವಣ್ಣ, ಎಂಎಲ್ ಸಿ ಸಿಎಂ ಇಬ್ರಾಹಿಂ ಅವರಿಗೂ ಕೋವಿಡ್ ಸೋಂಕು ದೃಢವಾಗಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಶಾಸಕ ಎನ್ ಎಚ್ ಶಿವಶಂಕರ ರೆಡ್ಡಿಗೂ ಬುಧವಾರ ಕೋವಿಡ್ ಸೋಂಕು ದೃಢವಾಗಿದೆ.
ಪಾದಯಾತೆಗೆ ತಡೆ: ಮೇಕೆದಾಟು ಪಾದಯಾತ್ರೆ ವಿಚಾರದಲ್ಲಿ ಹೈಕೋರ್ಟ್ ಛೀಮಾರಿ ಹಾಕಿದ ಬೆನ್ನಲ್ಲೇ ರಾಜ್ಯ ಸರ್ಕಾರ ಯಾತ್ರೆಗೆ ನಿರ್ಬಂಧ ಹೇರಿದೆ. ಈ ಸಂಬಂಧ ಬುಧವಾರ ರಾತ್ರಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಪಾದಯಾತ್ರೆಯಲ್ಲಿ ವಾಹನ ಸಂಚಾರ ಹಾಗೂ ಜನರು ಪಾಲ್ಗೊಳ್ಳುವುದನ್ನು ತತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ
Dr G Parameshwar: ಸೆನ್ ಠಾಣೆಗಳಿಗೂ ಎಸ್ಪಿ ಕೇಡರ್: ಗೃಹ ಸಚಿವ
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.