ಮುನಿರತ್ನ ವಿರುದ್ಧ ವೋಟರ್‌ ಐಡಿ ಪ್ರಕರಣ: ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ದೂರು


Team Udayavani, Oct 20, 2024, 11:21 AM IST

ಮುನಿರತ್ನ ವಿರುದ್ಧ ವೋಟರ್‌ ಐಡಿ ಪ್ರಕರಣ: ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ದೂರು

ಬೆಂಗಳೂರು: ಆರ್‌.ಆರ್‌.ನಗರ ಶಾಸಕ ಮುನಿರತ್ನ ವಿರುದ್ಧದ ನಕಲಿ ವೋಟರ್‌ ಐಡಿ ಪ್ರಕರಣದ ತನಿಖೆ ವೇಳೆ ಹೈಕೋರ್ಟ್‌ ಆದೇಶ ಉಲ್ಲಂ ಸಿ ಕರ್ತವ್ಯಲೋಪ ಎಸಗಿದ ತನಿಖಾಧಿಕಾರಿಗಳು ಹಾಗೂ ಅಂದಿನ ಡಿಸಿಪಿ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಮಾಜಿ ವಿಧಾನ ಪರಿಷತ್‌ ಸದಸ್ಯ ಪಿ.ಎಂ.ಮುನಿರಾಜುಗೌಡ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದಾರೆ.

ಶನಿವಾರ ತಮ್ಮ ವಕೀಲರ ಜತೆಗೆ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಅವರನ್ನು ಭೇಟಿಯಾಗಿ ದೂರು ನೀಡಿದ ಮುನಿರಾಜುಗೌಡ, ದೂರಿನ ಜತೆಗೆ ಕೆಲವು ದಾಖಲೆಗಳನ್ನು ನೀಡಿದರು. ನಕಲಿ ವೋಟರ್‌ ಐಟಿ ಹಗರಣ ಸಂಬಂಧ ಜಾಲಹಳ್ಳಿ ಪೊಲೀಸ್‌ ಠಾಣೆಯಲ್ಲಿ 2018ರಲ್ಲಿ 2 ಪ್ರಕರಣಗಳು ದಾಖಲಾಗಿವೆ. ಅಪರಾಧ ಸಂಖ್ಯೆ 55ರ ಪ್ರಕರಣದ ಕಡತ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಅದಕ್ಕೆ ಜೋಡಣೆಯಾಗಿರುವ ಅಪರಾಧ ಸಂಖ್ಯೆ 54ರ ಪ್ರಕರಣದ ಕಡತವನ್ನು ಜಾಲಹಳ್ಳಿ ಠಾಣೆ ಇನ್‌ಸ್ಪೆಕ್ಟರ್‌ಗಳು ಮತ್ತು ಪೂರ್ವ ವಿಭಾಗದ ಡಿಸಿಪಿಗಳು ಸೇರಿ ಮುನಿರತ್ನ ಅವರನ್ನು ಬಂಧನದಿಂದ ಪಾರು ಮಾಡಲು ನ್ಯಾಯಾಲಯವನ್ನು ಯಾಮಾರಿಸಿ ಪ್ರಕರಣವನ್ನು ಅಂತ್ಯಗೊಳಿಸಿದ್ದಾರೆ. ಜತೆಗೆ ಆರೋಪಿಗಳನ್ನು ಬಚಾವ್‌ ಮಾಡಲು ಅಪರಾಧ ಸಂಖ್ಯೆ 54ರ ಪ್ರಕರಣದ ಕಡತವನ್ನು ವಿಚಾರಣಾಧಿಕಾರದ ವ್ಯಾಪ್ತಿಯೇ ಇರದ 8ನೇ ಎಸಿಎಂಎಂ ನ್ಯಾಯಾಲಯದಲ್ಲಿ ಉಳಿಸಿ¨ªಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ನ್ಯಾಯಾಲಯಕ್ಕೆ ಸುಳ್ಳು ವರದಿ ಸಲ್ಲಿಕೆ: ಅಲ್ಲದೆ, ಅಪರಾಧ ಸಂಖ್ಯೆ 54 ಮತ್ತು 55ರ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಪ್ಪಿಸಲು ಕೋರಿ ಸಲ್ಲಿಸಲಾಗಿದ್ದ ರಿಟ್‌ ಅರ್ಜಿ ಸಂಬಂಧ ಹೈಕೋರ್ಟ್‌, ಈ ಪ್ರಕರಣಗಳ ಮುಂದುವರಿದ ತನಿಖೆ ಮಾಡಿ ಆರೋಪ ಪಟ್ಟಿ ಸಲ್ಲಿಸುವಂತೆ ಆದೇಶಿಸಿದೆ. ಆದರೆ, ತನಿಖಾಧಿಕಾರಿಗಳು ಆರೋಪಿ ಮುನಿರತ್ನ ಮತ್ತು ಇತರೆ ಆರೋಪಿಗಳು ಹೇಳಿದಂತೆ ಕೇಳಿಕೊಂಡು ತನಿಖೆಯನ್ನೇ ಮಾಡಿಲ್ಲ. ಜಾಲಹಳ್ಳಿಯ ಈಗಿನ ಠಾಣಾಧಿಕಾರಿ ಸಿದ್ಧೇಗೌಡ ಅಪರಾಧ ಸಂಖ್ಯೆ 54ರ ಪ್ರಕರಣದ ತನಿಖೆ ಮುಗಿದಿದೆ ಎಂದು 2024 ಆ.5ರಂದು 8ನೇ ಎಸಿಎಂಎಂ ನ್ಯಾಯಾಲಯಕ್ಕೆ ಸುಳ್ಳು ವರದಿ ಸಲ್ಲಿಸಿದ್ದಾರೆ.

ಈ ಮೂಲಕ ಆರೋಪಿ ಮುನಿರತ್ನ ಹಾಗೂ ಇತರೆ ಆರೋಪಿಗಳನ್ನು ಪಾರು ಮಾಡಲು ಪ್ರಯತ್ನಿಸಿ ಕರ್ತವ್ಯಲೋಪ ಎಸಗಿದ್ದಾರೆ. ಹೀಗಾಗಿ ಈ ಪ್ರಕರಣದಲ್ಲಿ ತನಿಖೆ ಮಾಡಿರುವ ಪಿಐ ಹಾಗೂ ಪಿಎಸ್‌ಐಗಳು ಹಾಗೂ ಪ್ರಕರಣದ ಉಸ್ತುವಾರಿ ವಹಿಸಿದ್ದ ಪೂರ್ವ ವಿಭಾಗದ ಎಲ್ಲಾ ಡಿಸಿಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು.

ಈ ಎರಡೂ ಪ್ರಕರಣಗಳ ತನಿಖೆಗಾಗಿ ಹಿರಿಯ ಮತ್ತು ಪ್ರಾಮಾಣಿಕ ಐಪಿಎಸ್‌ ಅಧಿಕಾರಿ ನೇತೃತ್ವದಲ್ಲಿ ಪ್ರತ್ಯೇಕ ಎಸ್‌ಐಟಿ ರಚಿಸಬೇಕು. ಅಂತೆಯೆ ಈ ಎರಡೂ ಪ್ರಕರಣಗಳಲ್ಲಿ ಪ್ರತ್ಯಕ್ಷ್ಯ ಸಾಕ್ಷಿಗಳಾದ ನಾನು ಮತ್ತು ಮಂಜುನಾಥ ರೆಡ್ಡಿ, ಪ್ರದೀಪ್‌ ಮುಳ್ಳೂರ್‌, ಮಂಜುನಾಥ, ಆನಂದ ಕುಮಾರ್‌, ಸಂತೋಷ್‌ ಕುಮಾರ್‌, ಪುರಷೋತ್ತಮ್‌ ಅವರ ಹೇಳಿಕೆಗಳನ್ನು ಕೂಡಲೇ ದಾಖಲಿಸಿ ನ್ಯಾಯಾಲಯಕ್ಕೆ ಸಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

 

 

ಟಾಪ್ ನ್ಯೂಸ್

Maharashtra polls: BJP releases first list; Tickets for Fadnavis, Rane and many others

Maha Election: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ; ಫಡ್ನವೀಸ್‌, ರಾಣೆ ಸೇರಿ ಹಲವರಿಗೆ‌ ಟಿಕೆಟ್

WTC 2024: How is the Test Championship standings after India’s defeat?

WTC 2025: ಭಾರತದ ಸೋಲಿನ ಬಳಿಕ ಹೇಗಿದೆ ಟೆಸ್ಟ್‌ ಚಾಂಪಿಯನ್‌ ಶಿಪ್‌ ಅಂಕಪಟ್ಟಿ

8

BBK11: ಆತ ಹೀರೋ, ಸಿಂಹವಲ್ಲ ಅವನು ಇಲಿ.. ಜಗದೀಶ್‌ ಬಗ್ಗೆ ರಂಜಿತ್‌ ಮಾತು

Threat Mail: Bomb threat to Belgaum airport

Threat Mail: ಬೆಳಗಾವಿಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

How is the iPhone 16 Pro Max operating? Detailed information is here

iPhone 16 Pro Max ಕಾರ್ಯಾಚರಣೆ ಹೇಗಿದೆ? ಸವಿವರ ಮಾಹಿತಿ ಮಾಹಿತಿ ಇಲ್ಲಿದೆ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

By election: ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

15

Deepavali: ದೀಪಾವಳಿಗೆ ಹಸುರೇತರ ಪಟಾಕಿ ಪೂರ್ಣ ನಿಷೇಧ

HDK (4)

H.D. Kumaraswamy: 2028ರೊಳಗೆ ನಾನು ಸಿಎಂ ಆಗುತ್ತೇನೆ…

1-eeewqe

ED ಯಿಂದ ದಾಖಲೆ ಪರಿಶೀಲನೆ; ಲೋಕಾದಿಂದ ಸಂಸದನ ವಿಚಾರಣೆ: ಇಂದೂ ತನಿಖೆ ಮುಂದುವರಿಕೆ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Maharashtra polls: BJP releases first list; Tickets for Fadnavis, Rane and many others

Maha Election: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ; ಫಡ್ನವೀಸ್‌, ರಾಣೆ ಸೇರಿ ಹಲವರಿಗೆ‌ ಟಿಕೆಟ್

6

Belthangady: ರಾಷ್ಟ್ರೀಯ ಹೆದ್ದಾರಿ ಗುಂಡಿಗೆ ತೇಪೆ

WTC 2024: How is the Test Championship standings after India’s defeat?

WTC 2025: ಭಾರತದ ಸೋಲಿನ ಬಳಿಕ ಹೇಗಿದೆ ಟೆಸ್ಟ್‌ ಚಾಂಪಿಯನ್‌ ಶಿಪ್‌ ಅಂಕಪಟ್ಟಿ

8

BBK11: ಆತ ಹೀರೋ, ಸಿಂಹವಲ್ಲ ಅವನು ಇಲಿ.. ಜಗದೀಶ್‌ ಬಗ್ಗೆ ರಂಜಿತ್‌ ಮಾತು

5

Gundlupete: ಎರಡು ಬೈಕ್ ಗಳ ನಡುವೆ ಅಪಘಾತ; ಇಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.