ಗೃಹಲಕ್ಷ್ಮೀ ಬೇಕೇ? ಎಪಿಎಲ್‌ ಕಾರ್ಡ್‌ ಅಪ್‌ಡೇಟ್‌ ಮಾಡಿಸಿ

ಕಾರ್ಡ್‌ ರದ್ದಾಗಿದ್ದರೆ ಕೆವೈಸಿ ಅಪ್‌ ಡೇಟ್‌ ಮಾಡಲು ಅವಕಾಶ

Team Udayavani, Aug 1, 2023, 7:10 AM IST

ಗೃಹಲಕ್ಷ್ಮೀ ಬೇಕೇ? ಎಪಿಎಲ್‌ ಕಾರ್ಡ್‌ ಅಪ್‌ಡೇಟ್‌ ಮಾಡಿಸಿ

ಬೆಂಗಳೂರು: ರಾಜ್ಯದ ಅಂತ್ಯೋದಯ, ಬಿಪಿಎಲ್‌ ಪಡಿತರ ಚೀಟಿದಾರರೊಂದಿಗೆ ಎಪಿಎಲ್‌ ಕಾರ್ಡ್‌ದಾರರಿಗೂ ಸರ್ಕಾರ “ಗೃಹಲಕ್ಷ್ಮೀ’ ಭಾಗ್ಯ ಕಲ್ಪಿಸಿದೆ. ಬಹುತೇಕ ಎಪಿಎಲ್‌ ಕಾರ್ಡ್‌ಗಳೇ ಅಮಾನತು ಅಥವಾ ರದ್ದುಗೊಂಡಿರುವುದರಿಂದ ಆತಂಕದಲ್ಲಿದ್ದಾರೆ. ಆದರೆ, ಆ ವರ್ಗದ ಆತಂಕವನ್ನೂ ದೂರಮಾಡುವ ನಿಟ್ಟಿನಲ್ಲಿ ಸರ್ಕಾರ ಎಪಿಎಲ್‌ ಕಾರ್ಡ್‌ಗಳನ್ನು ಆಯಾ ನ್ಯಾಯಬೆಲೆ ಅಂಗಡಿಗಳ ವ್ಯಾಪ್ತಿಯಲ್ಲೇ ಅಪ್‌ಡೇಟ್‌ ಮಾಡಲು ಅವಕಾಶ ನೀಡಿದೆ.

2020-21ರಲ್ಲಿ “ಒಂದು ದೇಶ- ಒಂದು ಪಡಿತರ ಚೀಟಿ’ ಅಡಿ ಪಡಿತರ ಚೀಟಿಗಳನ್ನು ಅಪ್‌ಡೇಟ್‌ ಮಾಡಿ, ಹೊಸದಾಗಿ ಕಾರ್ಡ್‌ ಸಂಖ್ಯೆಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ನಿಯಮಿತವಾಗಿ ಪಡಿತರ ತೆಗೆದುಕೊಳ್ಳುವ ಅಂತ್ಯೋದಯ, ಬಿಪಿಎಲ್‌ ಕಾರ್ಡ್‌ದಾರರು ಆಯಾ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಬೆರಳಿನ ಗುರುತು ನೀಡಿ, ಆಧಾರ್‌ ಸಂಖ್ಯೆ ಜೋಡಣೆ ಮಾಡಿಸಿದ್ದಾರೆ. ಎಪಿಎಲ್‌ನವರು ನ್ಯಾಯಬೆಲೆ ಅಂಗಡಿಗಳ ಹತ್ತಿರ ಸುಳಿಯಲೇ ಇಲ್ಲ. ಹಾಗಾಗಿ, ಅಪ್‌ಡೇಟ್‌ ಆಗದೆ ಉಳಿದಿವೆ.

“ಎಪಿಎಲ್‌ ಸೇರಿದಂತೆ ಯಾರೂ ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ. ಬೆರಳಿನ ಗುರುತು ಮತ್ತು ಆಧಾರ್‌ ಸಂಖ್ಯೆ, ಮೊಬೈಲ್‌ ಸಂಖ್ಯೆಯೊಂದಿಗೆ ಎಲ್ಲ ಕಾರ್ಡ್‌ಗಳನ್ನೂ ಸಕ್ರಿಯಗೊಳಿಸಲು ಅವಕಾಶ ಇದೆ. ಆಯಾ ನ್ಯಾಯಬೆಲೆ ಅಂಗಡಿ ಅಥವಾ ತಾಲ್ಲೂಕು ಕಚೇರಿಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆ ಮುಗಿಸಬಹುದು ಎಂದು ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಹೆಸರು ಹೇಳಲಿಚ್ಛಿಸದ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಸ್ಪಷ್ಟಪಡಿಸಿದ್ದಾರೆ.

ಅಂತ್ಯೋದಯ ಮತ್ತು ಆದ್ಯತಾ ಕುಟುಂಬ (ಬಿಪಿಎಲ್‌ ಕಾರ್ಡ್‌ದಾರರು)ಗಳಲ್ಲೂ ಕೆಲ ಫ‌ಲಾನುಭವಿಗಳು ಬ್ಯಾಂಕ್‌ ಖಾತೆ ಸಂಖ್ಯೆ ಹೊಂದಿದ್ದರೂ, ಅವುಗಳು ಸಕ್ರಿಯವಾಗಿಲ್ಲ. ಈಗ ಕೆವೈಸಿ ಮೂಲಕ ಸಕ್ರಿಯಗೊಳಿಸುವ ಪ್ರಕ್ರಿಯೆ ನಡೆದಿದೆ. ಅಲ್ಲಿ ಅಂತಹ ಯಾವುದೇ ಸಮಸ್ಯೆ ಆಗಿಲ್ಲ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

ಯೋಜನೆ ಕುರಿತು
ಚುನಾವಣೆ ಪೂರ್ವ ಕಾಂಗ್ರೆಸ್‌ ಘೋಷಿಸಿದಂತೆ ಅಧಿಕಾರಕ್ಕೆ ಬರುತ್ತಿದ್ದಂತೆ ರಾಜ್ಯದ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ ತಲಾ ಎರಡು ಸಾವಿರ ರೂ. ಪಾವತಿಸುವ “ಗೃಹಲಕ್ಷ್ಮೀ’ ಯೋಜನೆಗೆ ಹೆಸರು ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಅಂತ್ಯೋದಯ, ಬಿಪಿಎಲ್‌ ಮಾತ್ರವಲ್ಲ; ಎಪಿಎಲ್‌ ಪಡಿತರ ಚೀಟಿ ಹೊಂದಿದವರಿಗೂ ಈ ಸೌಲಭ್ಯ ಕಲ್ಪಿಸಲಾಗುತ್ತಿದೆ.

ಸಮಸ್ಯೆ ಆಗಿದ್ದು ಎಲ್ಲಿ?
ಸಾಮಾನ್ಯವಾಗಿ ಈ ವರ್ಗಗಳು ಪಡಿತರಕ್ಕಾಗಿ ಕಾರ್ಡ್‌ ಹೊಂದುವುದು ತುಂಬಾ ವಿರಳ (ಈಗ ಪಡಿತರವನ್ನೂ ನೀಡುತ್ತಿಲ್ಲ). ಮುಖ್ಯವಾಗಿ ವಿಳಾಸ ಗುರುತಿಗಾಗಿ ಹೊಂದಿರುತ್ತಾರೆ. ನಾಲ್ಕಾರು ವರ್ಷಗಳಿಂದ ಎಪಿಎಲ್‌ ಕಾರ್ಡ್‌ದಾರರು ನ್ಯಾಯಬೆಲೆ ಅಂಗಡಿಗಳ ಕಡೆಗೆ ಬಂದಿದ್ದೇ ಇಲ್ಲ. ಹಾಗಾಗಿ, ಆ ವರ್ಗಗಳ ಕೆವೈಸಿ ಲಭ್ಯವಾಗಿಲ್ಲ. ಪರಿಣಾಮ ಅಮಾನತುಗೊಂಡಿವೆ. ಹಲವು ರದ್ದು ಕೂಡ ಆಗಿವೆ. ಗೃಹಲಕ್ಷ್ಮೀ ಯೋಜನೆ ಘೋಷಿಸಿದ ಬೆನ್ನಲ್ಲೇ ಎಪಿಎಲ್‌ ಕಾರ್ಡ್‌ಗಳಿಗೆ ಮಹತ್ವ ಬಂದಿದ್ದು, ಸೇವಾ ಕೇಂದ್ರಗಳಿಗೆ ನೋಂದಣಿಗಾಗಿ ಧಾವಿಸುತ್ತಿದ್ದಾರೆ. ಆದರೆ, ಅಲ್ಲಿ ರದ್ದುಗೊಂಡಿರುವುದು ಅಥವಾ ಅಮಾನತುಗೊಂಡಿರುವುದನ್ನು ತಿಳಿದು ನಿರಾಸೆ ಉಂಟಾಗುತ್ತಿದೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಸುಮಾರು 25 ಲಕ್ಷ ಎಪಿಎಲ್‌ ಕಾರ್ಡ್‌ ಹೊಂದಿರುವ ಕುಟುಂಬಗಳಿದ್ದು, ಅಂದಾಜು 86 ಲಕ್ಷ ಸದಸ್ಯರಿದ್ದಾರೆ. ಇದರಲ್ಲಿ ಹಲವರು ಈಗ ತಾಲ್ಲೂಕು ಕಚೇರಿಗಳಿಗೆ ಅಪ್‌ಡೇಟ್‌ ಮಾಡಲು ಧಾವಿಸುತ್ತಿದ್ದಾರೆ. ಇನ್ನೂ ಕೆಲವರಿಗೆ ಇದರ ಬಗ್ಗೆ ಮಾಹಿತಿಯೂ ಇಲ್ಲ.

ಕೆಲವರು ಸಕಾಲದಲ್ಲಿ ಅಪ್‌ಡೇಟ್‌ ಮಾಡಿಕೊಳ್ಳದೆ ಇರುವುದರಿಂದ ಅಂತಹ ಎಪಿಎಲ್‌ ಕಾರ್ಡ್‌ಗಳು ಅಮಾನತುಗೊಂಡಿರುವುದು ನಿಜ. ಅವುಗಳನ್ನು ಮತ್ತೆ ಸಕ್ರಿಯಗೊಳಿಸಲು ಸರ್ಕಾರದ ಮಟ್ಟದಲ್ಲಿ ಪರಿಶೀಲಿಸಿ, ಕ್ರಮ ಕೈಗೊಳ್ಳಲಾಗುತ್ತದೆ. ಆತಂಕಪಡುವ ಅಗತ್ಯವಿಲ್ಲ.
– ಎಂ. ಕನಗವಳ್ಳಿ, ಆಯುಕ್ತರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರ

ಟಾಪ್ ನ್ಯೂಸ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

1-asdsad

Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

12

Manipal: ಪಾರ್ಕಿಂಗ್‌ ತಾಣವಾಗುತ್ತಿರುವ ಬಸ್‌ ನಿಲ್ದಾಣಗಳು!

11(1)

Hiriydaka: ಹಳೆ ಕಟ್ಟಡಗಳ ತೆರವಿಗೆ ದಿನ ನಿಗದಿ

1-asdsad

Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.