ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ: ಎಸ್.ಟಿ.ಸೋಮಶೇಖರ್
Team Udayavani, Jul 15, 2019, 3:04 AM IST
ಬೆಂಗಳೂರು: ಮಂಬೈನಲ್ಲಿರುವ ಶಾಸಕರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಅತೃಪ್ತ ಶಾಸಕರು ಹೇಳಿಕೊಂಡಿದ್ದಾರೆ. ಭಾನುವಾರ ಸಂಜೆ ಮಾಧ್ಯಮಗಳ ಮುಂದೆ ಎಲ್ಲರೂ ಹಾಜರಾಗಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ಮುಂಬೈನಲ್ಲಿರುವ ಹನ್ನೆರಡು ಶಾಸಕರಲ್ಲಿ ಯಾವುದೇ ಒಡಕಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಎಂಟಿಬಿ ನಾಗರಾಜ್ ಅವರೂ ಮುಂಬೈಗೆ ಬಂದು ನಮ್ಮನ್ನು ಸೇರಿಕೊಂಡಿದ್ದಾರೆ.
ಶನಿವಾರ ಕಾಂಗ್ರೆಸ್ ನಾಯಕರು ಅವರ ಮನವೊಲಿಕೆಗೆ ನಿರಂತರ ಪ್ರಯತ್ನ ನಡೆಸಿದರೂ ಅವರು ಮುಂಬೈಗೆ ಆಗಮಿಸಿದ್ದಾರೆ. ನಾವು ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ. ಯಾವುದೇ ನಾಯಕರು ಬಂದರೂ ನಾವು ಭೇಟಿಯಾಗುವುದಿಲ್ಲ ಎಂದು ಹೇಳಿದರು.
ಡಾ.ಸುಧಾಕರ್ ಅವರು ರಾಜೀನಾಮೆ ನೀಡಿದ ಮೇಲೆ ಅವರ ಮೇಲೆ ಹಲ್ಲೆಯಾಗಿದೆ. ಅವರು ದೆಹಲಿಗೆ ತೆರಳಿದ್ದು, ಅವರೂ ನಮ್ಮೊಂದಿಗಿದ್ದಾರೆ. ಯಾವುದೇ ಕಾರಣಕ್ಕೂ ನಾವು ವಾಪಸ್ ತೆರಳುವ ಪ್ರಶ್ನೆಯೇ ಇಲ್ಲ ಎಂದರು.
ಎಂಟಿಬಿ ನಾಗರಾಜ್ ಮಾತನಾಡಿ, “ನನ್ನೊಂದಿಗೆ ಮುಂಬೈಗೆ ಯಾವುದೇ ಬಿಜೆಪಿ ನಾಯಕರು ಬಂದಿಲ್ಲ. ನನ್ನೊಂದಿಗೆ ಅಶೋಕ್ ಬಂದಿದ್ದು ಸುಳ್ಳು. ನಮ್ಮಲ್ಲಿ ಯಾವುದೇ ಗುಂಪುಗಾರಿಕೆಯಿಲ್ಲ. ಅಶೋಕ್ ವಿಮಾನ ನಿಲ್ದಾಣಕ್ಕೆ ಬಂದಿರುವುದಕ್ಕೂ, ನನಗೂ ಸಂಬಂಧವಿಲ್ಲ’ ಎಂದು ಹೇಳಿದರು.
ಈಗಾಗಲೇ ನಾವು ರಾಜೀನಾಮೆ ಸಲ್ಲಿಸಿರುವುದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿರುವ ಅವರು, ಡಾ.ಸುಧಾಕರ್ ಬಂದ ಮೇಲೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.