State Politics: ನಮ್ಮಲ್ಲಿ ಒಳಜಗಳ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ


Team Udayavani, May 14, 2024, 2:25 PM IST

1-cm-mysore

ಮೈಸೂರು: ನಮ್ಮಲ್ಲಿ ಒಳಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ  ಜಗಳವಾಗಿ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ನಾಯಕರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ರಾಜಕೀಯವಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದರು.

ಉತ್ತಮ ವಾತಾವರಣ

ಪರಿಷತ್ ಚುನಾವಣೆಯ ವಾತಾವರಣ ಉತ್ತಮವಾಗಿದ್ದು, ಈ ಬಾರಿ ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಅದಕ್ಕಾಗಿ ಅಭ್ಯರ್ಥಿಗಳನ್ನು ಆರು ತಿಂಗಳು ಮುಂಚಿತವಾಗಿಯೇ ಆಯ್ಕೆ ಮಾಡಲಾಗಿತ್ತು. ಅಭ್ಯರ್ಥಿಗಳಿಗೆ ಸಮಯ ಸಿಕ್ಕು, ಮತದಾರರನ್ನು ಭೇಟಿಯಾಗಲು ಅವಕಾಶ ದೊರೆಯಿತು ಎಂದರು.

ಪರಿಣಾಮ ಬೀರುವುದಿಲ್ಲ: ಮೈತ್ರಿ ಪರಿಣಾಮ ಚುನಾವಣೆಯ ಮೇಲೆ ಆಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಲೋಕಸಭೆ ಚುನಾವಣೆಯಲ್ಲಿಯೂ ಕೆಡಿಎಎ ಬಿಜೆಪಿ ಮೈತ್ರಿ  ಮಾಡಿಕೊಂಡಿದ್ದು, ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.

ಸಾಧನೆಗಳ ತುಲನೆ ಮಾಡುವ ಶಕ್ತಿ ಮತದಾರರಿಗಿದೆ

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆಗೆ ಉತ್ತರ ನೀಡಿ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರು ರಾಜಕೀಯವಾಗಿ ಪ್ರಬುದ್ಧರಾಗಿರುವವರು ಯಾವುದು ಸರಿ, ತಪ್ಪು ಎನ್ನುವ ಬಗ್ಗೆ ಅರಿವು ಹೊಂದಿದವರು. ಕೇಂದ್ರ ಸರ್ಕಾರದ ಸಾಧನೆಗಳು  ಹಾಗೂ ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ತುಲನೆ ಮಾಡುವ ಶಕ್ತಿ ಅವರಿಗಿದೆ ಎಂದರು.

ಬೇರೆ ರಾಜ್ಯಗಳ ಚುನಾವಣೆಯ ಪ್ರಚಾರಕ್ಕೆ ತೆರಳುವ ಬಗ್ಗೆ ಮಾತನಾಡಿ ಪ್ರಚಾರಕ್ಕೆ ಆಹ್ವಾನ ಬಂದಿದೆ ಎಂದರು.

ಹಿಟ್ ಅಂಡ್ ರನ್ ಕೇಸ್

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭ್ರಷ್ಟಾಚಾರದ ಬಗ್ಗೆ ತಮ್ಮ ಬಳಿ ಪೆನ್ ಡ್ರೈವ್ ಇದ್ದು, ತನಿಖೆ ಮಾಡಿಸುವ ತಾಕತ್ತು ಸರ್ಕಾರಕ್ಕಿದೆ ಎಂದರೆ ಬಿಡುಗಡೆ ಮಾಡುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿಯವರದ್ದು ಸದಾ ಹಿಟ್ ಅಂಡ್ ರನ್ ಕೇಸ್ ಎಂದು ಹೇಳಿದರು.

ಅವರ ಸರ್ಕಾರವನ್ನು ಮೊದಲು ಉಳಿಸಿಕೊಳ್ಳಲಿ

ಮಹಾರಾಷ್ಟ್ರ ಸಿಎಂ ಕರ್ನಾಟಕ ಸರ್ಕಾರ ಪತನವಾಗುವ ಬಗ್ಗೆ ಮಾತನಾಡಿ ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ಬದಲು ಅವರ ಸರ್ಕಾರವನ್ನು ಮೊದಲು ಉಳಿಸಿಕೊಳ್ಳಲಿ ಎಂದರು.

ಟಾಪ್ ನ್ಯೂಸ್

krishna-byre-gowda

Krishna Byre Gowda ಮಳೆಗಾಲದ ದುರಂತ ತಡೆಯಲು ಸರಕಾರ ಚಿಂತನೆ

Heavy Rain ಮುನ್ನೆಚ್ಚರಿಕೆ ಕ್ರಮಕ್ಕೆ ಸಂಸದ ಕ್ಯಾ| ಚೌಟ ಸೂಚನೆ

Heavy Rain ಮುನ್ನೆಚ್ಚರಿಕೆ ಕ್ರಮಕ್ಕೆ ಸಂಸದ ಕ್ಯಾ| ಚೌಟ ಸೂಚನೆ

Subrahmanya: ಯುವಕನನ್ನು ಎಳೆದಾಡಿದ ದೇಗುಲದ ಆನೆ

Subrahmanya: ಯುವಕನನ್ನು ಎಳೆದಾಡಿದ ದೇಗುಲದ ಆನೆ

Udupi ಮನೆಯಲ್ಲಿದ್ದ ಚಿನ್ನಾಭರಣ ನಾಪತ್ತೆ: ದೂರು ದಾಖಲು

Udupi ಮನೆಯಲ್ಲಿದ್ದ ಚಿನ್ನಾಭರಣ ನಾಪತ್ತೆ: ದೂರು ದಾಖಲು

Bantwal ಇಳಿಯುತ್ತಿದ್ದ ವೇಳೆ ಚಲಾಯಿಸಿದ ಬಸ್‌: ಗಾಯ

Bantwal ಇಳಿಯುತ್ತಿದ್ದ ವೇಳೆ ಚಲಾಯಿಸಿದ ಬಸ್‌: ಗಾಯ

T20 WorldCup 2024: ಅಫ್ಘಾನಿಸ್ಥಾನ vs ದಕ್ಷಿಣ ಆಫ್ರಿಕಾ : ವಿಶ್ವದ ಕಣ್ಣು ಅಫ್ಘಾನ್‌ ಮೇಲೆ!

T20 WorldCup 2024: ಅಫ್ಘಾನಿಸ್ಥಾನ vs ದಕ್ಷಿಣ ಆಫ್ರಿಕಾ : ವಿಶ್ವದ ಕಣ್ಣು ಅಫ್ಘಾನ್‌ ಮೇಲೆ!

Mangaluru ಪೊಲೀಸರಿಗೆ ಸವಾಲಾದ ದರೋಡೆ ಪ್ರಕರಣ

Mangaluru ಪೊಲೀಸರಿಗೆ ಸವಾಲಾದ ದರೋಡೆ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮಗೆ ನ್ಯಾಯ ಸಿಗುವ ಭರವಸೆಯಿದೆ.. ದರ್ಶನ್ ಬಗ್ಗೆ ಮೌನ ಮುರಿದ ಪತ್ನಿ ವಿಜಯಲಕ್ಷ್ಮೀ

ನಮಗೆ ನ್ಯಾಯ ಸಿಗುವ ಭರವಸೆಯಿದೆ.. ದರ್ಶನ್ ಬಗ್ಗೆ ಮೌನ ಮುರಿದ ಪತ್ನಿ ವಿಜಯಲಕ್ಷ್ಮೀ

ISRO ಅಧ್ಯಕ್ಷರಿಗೆ ಧಾರವಾಡ ಕೃಷಿ ವಿವಿ ಗೌರವ ಡಾಕ್ಟರೇಟ್

ISRO ಅಧ್ಯಕ್ಷರಿಗೆ ಧಾರವಾಡ ಕೃಷಿ ವಿವಿ ಗೌರವ ಡಾಕ್ಟರೇಟ್

Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು

Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು

Kalaburagi: ಮಹಿಳೆಯರ ಮೇಲಿನ ದೌರ್ಜನ್ಯ, ಹಿಂಸೆ ತಡೆಗೆ ಮಹಿಳಾ ಅಯೋಗದ ಸೆಲ್: ಡಾ|ನಾಗಲಕ್ಷ್ಮಿ

Kalaburagi: ಮಹಿಳೆಯರ ಮೇಲಿನ ದೌರ್ಜನ್ಯ, ಹಿಂಸೆ ತಡೆಗೆ ಮಹಿಳಾ ಅಯೋಗದ ಸೆಲ್: ಡಾ।ನಾಗಲಕ್ಷ್ಮಿ

Prajwal Revanna ಗೆ ಮತ್ತೆ ಜೈಲು… ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Prajwal Revanna ಗೆ ಜೈಲೇ ಗತಿ… ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

krishna-byre-gowda

Krishna Byre Gowda ಮಳೆಗಾಲದ ದುರಂತ ತಡೆಯಲು ಸರಕಾರ ಚಿಂತನೆ

Heavy Rain ಮುನ್ನೆಚ್ಚರಿಕೆ ಕ್ರಮಕ್ಕೆ ಸಂಸದ ಕ್ಯಾ| ಚೌಟ ಸೂಚನೆ

Heavy Rain ಮುನ್ನೆಚ್ಚರಿಕೆ ಕ್ರಮಕ್ಕೆ ಸಂಸದ ಕ್ಯಾ| ಚೌಟ ಸೂಚನೆ

Subrahmanya: ಯುವಕನನ್ನು ಎಳೆದಾಡಿದ ದೇಗುಲದ ಆನೆ

Subrahmanya: ಯುವಕನನ್ನು ಎಳೆದಾಡಿದ ದೇಗುಲದ ಆನೆ

Udupi ಮನೆಯಲ್ಲಿದ್ದ ಚಿನ್ನಾಭರಣ ನಾಪತ್ತೆ: ದೂರು ದಾಖಲು

Udupi ಮನೆಯಲ್ಲಿದ್ದ ಚಿನ್ನಾಭರಣ ನಾಪತ್ತೆ: ದೂರು ದಾಖಲು

Bantwal ಇಳಿಯುತ್ತಿದ್ದ ವೇಳೆ ಚಲಾಯಿಸಿದ ಬಸ್‌: ಗಾಯ

Bantwal ಇಳಿಯುತ್ತಿದ್ದ ವೇಳೆ ಚಲಾಯಿಸಿದ ಬಸ್‌: ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.