ಬೆಳಗಾವಿಯ ಸೋಲಿಗೆ ತನಿಖೆ ಮಾಡುತ್ತೇವೆ..: ಬಿ.ಎಸ್‌. ಯಡಿಯೂರಪ್ಪ


Team Udayavani, Dec 16, 2021, 6:38 AM IST

ಬೆಳಗಾವಿಯ ಸೋಲಿಗೆ ತನಿಖೆ ಮಾಡುತ್ತೇವೆ..: ಬಿ.ಎಸ್‌. ಯಡಿಯೂರಪ್ಪ

ವಿಧಾನ ಪರಿಷತ್‌ಗೆ ನಡೆದ ಚುನಾವಣೆಯ ಫ‌ಲಿತಾಂಶ ಪ್ರಕಟವಾಗಿದೆ. ಬಿಜೆಪಿ 11 ಸ್ಥಾನಗಳು ಲಭ್ಯವಾಗಿವೆ. ಈ ಬಗ್ಗೆ ಉದಯವಾಣಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮೈಸೂರು ಮತ್ತು ಬೆಳಗಾವಿಯಲ್ಲಿ ಪಕ್ಷ ಸೋಲುಂಡಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ಫಲಿತಾಂಶ ಸಮಾಧಾನ ತಂದಿದೆಯಾ?
ಕನಿಷ್ಠ 15 ಕ್ಷೇತ್ರ ಗೆಲ್ಲುವ ವಿಶ್ವಾಸ ಇತ್ತು. ಅದರೆ ಮೈಸೂರಿನಲ್ಲಿ ಸೋಲಾಯಿತು. ಬೆಳಗಾವಿಯಲ್ಲಿಯೂ ನಮ್ಮ ಆಭ್ಯರ್ಥಿ ಸೋಲು ಕಂಡಿದ್ದಾರೆ.

ನಿರೀಕ್ಷಿತ ಕ್ಷೇತ್ರಗಳಲ್ಲಿ ಸೋಲಿಗೆ ಯಾರು ಕಾರಣ ?
ಮೈಸೂರಿನಲ್ಲಿ ಎಲ್ಲ ಪ್ರಯತ್ನಗಳ ಹೊರತಾ ಗಿಯೂ ಹಿನ್ನಡೆಯಾಯಿತು. ಬಹಳ ನೋವಿನ ವಿಷಯವೆಂದರೆ ಬೆಳಗಾವಿಯಲ್ಲಿ ನಾವು ಎಂಎಲ್‌ಎಗಳು, ಮಂತ್ರಿಗಳು, ಎಂಪಿಗಳು ಇದ್ದರೂ ಹಿನ್ನಡೆ ಆಗಿ ರುವುದು. ಪಕ್ಷದ ಅಭ್ಯರ್ಥಿ ಕವಟಗಿಮಠ ಅವರಿಗೆ ಸೋಲು ಅಯಿತೆಂದರೆ ಈ ಬಗ್ಗೆ ಕೂಲಂಕಷ ತನಿಖೆ ನಡೆಸಿ ಯಾರು ಪಕ್ಷದ ವಿರುದ್ಧ ಕೆಲಸ ಮಾಡಿದ್ದಾರೆ ಅವರ ಮೇಲೆ ಪಕ್ಷದ ನಾಯಕರು ಕ್ರಮ ಕೈಗೊಳ್ಳುವ ಕುರಿತು ತೀರ್ಮಾನ ಮಾಡುತ್ತೇವೆ.

ಜಾರಕಿಹೊಳಿ ಸಹೋದರರು ನಿಮ್ಮ ಪಕ್ಷದ ಶಾಸಕರಾಗಿದ್ದಾರೆ. ಅವರು ತಮ್ಮ ಸಹೋದರನ ಪರ ಕೆಲಸ ಮಾಡಿದ್ದಾರೆ ಅನಿಸುತ್ತಿದೆಯಾ?
ಸಹಜವಾಗಿ ಎಲ್ಲರಿಗೂ ಹಾಗೇ ಅನಿಸುತ್ತದೆ. ಲಖನ್‌ ಜಾರಕಿಹೊಳಿ ಅಭ್ಯರ್ಥಿಯಾದಾಗಲೇ ಈ ರೀತಿಯ ಆತಂಕ ಇತ್ತು. ಆದರೂ ನಾವು ಪಕ್ಷದ ಆಭ್ಯರ್ಥಿಯನ್ನು ಗೆಲ್ಲಿಸಿ ಕೊಂಡು ಬರಲು ಅವಕಾಶ ಇತ್ತು. ಆದರೂ ಯಾಕೆ ಹಿನ್ನಡೆಯಾಯಿತು ಅಂತ ತಿಳಿದುಕೊಳ್ಳುತ್ತೇವೆ.

ಜೆಡಿಎಸ್‌ ಸಹಕಾರ ಮುಂದೆಯೂ ಕೇಳುವಿರಾ?
ಜೆಡಿಎಸ್‌ ಆಭ್ಯರ್ಥಿ ಇಲ್ಲದ ಕಡೆ ಸಹಕಾರ ನೀಡುವಂತೆ ವೈಯಕ್ತಿಕವಾಗಿ ಕೇಳಿದ್ದೆ, ಬೆಂಬಲ ಕೊಟ್ಟಿಲ್ಲ ಎನ್ನಲಾರೆ. ಕೆಲವು ಕಡೆಗಳಲ್ಲಿ ಬೆಂಬಲಿಸಿರಬಹುದು. ಹಿಂದೆಯೂ ಸಹಕಾರ ಕೇಳಿದ್ದೆವು. ಮುಂದೆ ಕೇಳುವ ಬಗ್ಗೆ ಈಗಲೇ ಏನು ಹೇಳಲಾರೆ. ಪಕ್ಷದ ಅಧ್ಯಕ್ಷರು ಹಾಗೂ ಸಿಎಂ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದೇವೆ.

ಲಖನ್‌ ಬೆಂಬಲ ನೀಡಿದರೆ ಸಭಾಪತಿ ಸ್ಥಾನ ಪಡೆಯುತ್ತೀರಾ?
ಈ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ. ಪಕ್ಷದ ಅಧ್ಯಕ್ಷರು ಹಾಗೂ ಸಿಎಂ ಜತೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ.

ಸಂಪುಟ ವಿಸ್ತರಣೆ ಮಾಡ ಬೇಕೆಂಬ ಬೇಡಿಕೆ ಬಗ್ಗೆ?
ಈ ವಿಚಾರದಲ್ಲಿ ಮುಖ್ಯಮಂತ್ರಿಗಳ ಮನಸಿನಲ್ಲಿ ಏನಿದೆಯೋ ಗೊತ್ತಿಲ್ಲ. ಜತೆಗೆ ಕೇಂದ್ರದ ನಾಯಕರ ಜತೆಗೂ ಸಮಾಲೋಚನೆ ಮಾಡಬೇಕಾಗುತ್ತದೆ. ಖಾಲಿ ಇರುವ ಸ್ಥಾನಗಳನ್ನು ಆದಷ್ಟು ಬೇಗ ಭರ್ತಿ ಮಾಡಬೇಕು.

ಕಾಂಗ್ರೆಸ್‌ನವರು ಶೇ. 40 ಸರಕಾರ ಆಂತ ಆರೋಪಿಸುತ್ತಿದ್ದಾರೆ?
ಭ್ರಷ್ಟಾಚಾರ ಇಲ್ಲವೇ ಇಲ್ಲ ಎನ್ನಲಾರೆ. ತಡೆಯುವ ಬಗ್ಗೆ ಏನು ಮಾಡಬೇಕೋ ಆದನ್ನು ಮಾಡಬೇಕು. ಶೇ. 5 ಇದೆಯೋ, ಶೇ. 10 ಇದೆಯೋ ಗೊತ್ತಿಲ್ಲ. ಭ್ರಷ್ಟಾಚಾರ ಇಲ್ಲದೇ ಅಭಿವೃದ್ಧಿ ಕಾಮಗಾರಿಗಳಿಗೆ ಗಮನ ಕೊಡುವ ಕೆಲಸ ಆಗಬೇಕು. ಶೇ. 40, 50 ಪರ್ಸೆಂಟ್‌ ಎನ್ನುವುದಕ್ಕೆ ಯಾವುದೇ ಆಧಾರವಿಲ್ಲ.

 ವಿಜಯೇಂದ್ರರಿಗೆ ಮಂತ್ರಿ ಮಾಡಬೇಕೆಂಬ ಬೇಡಿಕೆ ?
ಈ ವಿಚಾರದಲ್ಲಿ ಒತ್ತಡ ಹೇರುವುದಿಲ್ಲ. ಮುಖ್ಯಮಂತ್ರಿ ಹಾಗೂ ಕೇಂದ್ರದ ನಾಯಕರು ತೀರ್ಮಾನ ಮಾಡುತ್ತಾರೆ.

ಚುನಾವಣೆ ಬಳಿಕ ರಾಜ್ಯ ಪ್ರವಾಸ ಮಾಡುವೆ ಎಂದಿದ್ದಿರಿ; ಯಾವಾಗ ಮಾಡುತ್ತೀರಿ ?
ಒಂದು ತಿಂಗಳು ಎಲ್ಲೂ ಹೋಗುವುದಿಲ್ಲ. ಅಧಿವೇಶನ ಮುಗಿದ ಮೇಲೆ ಒಂದು ವಾರ ಬೇರೆಕಡೆ ಹೋಗುತ್ತಿದ್ದೇನೆ.
ಬಳಿಕ ಪ್ರತೀ ಜಿಲ್ಲೆಗೆ ತೆರಳಿ ಪಕ್ಷದ ಸಂಘಟನೆಯನ್ನು ಬಲಪಡಿಸುವ ದೃಷ್ಟಿಯಿಂದ ಪ್ರವಾಸ ಮಾಡುತ್ತೇನೆ.
ಮುಂದಿನ ಚುನಾ ವಣೆಯಲ್ಲಿ 140 ಸ್ಥಾನ ನಾವು ಗೆಲ್ಲಲೇ ಬೇಕು. ಕಾರ್ಯ ಕರ್ತರಲ್ಲಿ ವಿಶ್ವಾಸ ಮೂಡಿಸುವ ಕೆಲಸ
ಮಾಡುತ್ತೇನೆ.

-  ಶಂಕರ ಪಾಗೋಜಿ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.