![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Aug 12, 2019, 3:00 AM IST
ಶ್ರೀರಂಗಪಟ್ಟಣ: ಕೆಆರ್ಎಸ್ನಿಂದ 1.5 ಲಕ್ಷ ಕ್ಯೂಸೆಕ್ ನೀರು ಹೊರ ಬಿಟ್ಟ ಹಿನ್ನೆಲೆಯಲ್ಲಿ ಮೈಸೂರು ಮಹಾರಾಜರ ಸಂಸ್ಥಾನಕ್ಕೆ ಸೇರಿದ ಜೋಡಿಕುದುರೆ ಮಂಟಪ, ಪಶ್ಚಿಮವಾಹಿನಿಯ ಶ್ರಾದ್ಧ ಪೂಜಾ ಕಾರ್ಯ ನಡೆಸುವ ಸ್ಥಳ, ದೊಡ್ಡ ಗೋಸಾಯಿಘಟ್ಟದ ಕಾಶಿ ವಿಶ್ವೇಶ್ವರ ಸ್ವಾಮಿ ದೇವಾಲಯ ಹಾಗೂ ಈಶ್ವರ ದೇವಾಲಯಗಳು ಸಂಪೂರ್ಣ ಜಲಾವೃತವಾಗಿವೆ.
ಹೀಗಾಗಿ, ಪೂಜಾ ಕಾರ್ಯಕ್ಕೆ ಬರುವ ಭಕ್ತರು ಹಾಗೂ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ. ಮೈಸೂರು -ಬೆಂಗಳೂರು ಹೆದ್ದಾರಿ ಬಳಿ ಇರುವ ಸಾಯಿ ಮಂದಿರ, ಗಂಜಾಂನ ಪ್ರಸಿದ್ದ ಅಧಿದೇವತೆ ನಿಮಿಷಾಂಬ ದೇವಾಲಯ, ವೆಲ್ಲೆಸ್ಲಿ ಸೇತುವೆ ರಸ್ತೆಯ ಬಳಿಯಲ್ಲಿರುವ ರಾಮಕೃಷ್ಣಾಶ್ರಮ ಹಾಗೂ ಆಂಜನೇಯ ದೇವಾಲಯಗಳಿಗೆ ಕಾವೇರಿಯ ನೀರು ನುಗ್ಗಿದೆ.
ರಂಗನತಿಟ್ಟು ಪಕ್ಷಿಧಾಮ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಆದರೆ, ಪಕ್ಷಿಗಳಿಗೆ ಯಾವುದೇ ಹಾನಿಯಾಗಿಲ್ಲ. ದೊಡ್ಡೇಗೌಡನ ಕೊಪ್ಪಲು ಗ್ರಾಮದ ಬಳಿಯ ಕಾವೇರಿ ನಡುಗಡ್ಡೆಯಲ್ಲಿರುವ ಗೌತಮಕ್ಷೇತ್ರದ ಶ್ರೀ ಗಜಾನನ ಸ್ವಾಮೀಜಿ ಹಾಗೂ 7 ಮಂದಿ ಸಹಚರರನ್ನು ಮನವೊಲಿಸಿ ಆಶ್ರಮದಿಂದ ಹೊರಕ್ಕೆ ಕರೆತರಲಾಗಿದೆ.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.