ದೇಶದ ಸ್ವಾತಂತ್ರ್ಯಕ್ಕೆ ಸಿದ್ದರಾಮಯ್ಯ‌ ಕೊಡುಗೆ ಏನು?: ಸಾರಾ ಮಹೇಶ್ ವಾಗ್ದಾಳಿ

ಸಚಿವ ಅಶ್ವತ್ಥ ನಾರಾಯಣ್ ಭ್ರಮೆಯಲ್ಲಿದ್ದಾರೆ

Team Udayavani, Aug 12, 2022, 12:59 PM IST

sa ra mahesh

ಮೈಸೂರು: ದೇಶದ ಸ್ವಾತಂತ್ರ್ಯಕ್ಕೆ ನಿಮ್ಮ ಕೊಡುಗೆ ಏನು? ಸ್ವಾತಂತ್ರ್ಯ ಚಳವಳಿಯಲ್ಲಿ ನೀವೇನಾದರು ಭಾಗಿಯಾಗಿದ್ದೀರಾ ?ನಿಮ್ಮ ಕೊಡುಗೆ ಬಗ್ಗೆ ಏನಾದರೂ ಪುಸ್ತಕ ಬರೆದಿದ್ದೀರಾ? ಎಂದು ಶಾಸಕ ಸಾರಾ ಮಹೇಶ್ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.ವಾಗ್ದಾಳಿ

ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕೆ ಜೆಡಿಎಸ್ ಕೊಡುಗೆ ಏನು ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ಪ್ರತಿಕ್ರಿಯಿಸಿ, ಜೆಡಿಎಸ್ ನಲ್ಲಿದ್ದಾಗ ಹಣಕಾಸು ಸಚಿವರಾಗಿ ಏಳು ಬಾರಿ ಬಜೆಟ್ ಮಂಡಿಸಿದ್ರೀ, ಡಿಸಿಎಂ ಆಗಿದ್ರೀ. ಮೈಸೂರು ಜಿಲ್ಲೆಗೆ ನಿಮ್ಮ ಕೊಡುಗೆ ಏನು ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೋಟೆಲ್ ನಲ್ಲಿದ್ದುಕೊಂಡು ಆಡಳಿತ ನಡೆಸುತ್ತಿದ್ದರು ಎಂದು ಟೀಕಿಸಿರುವ ಸಚಿವ ಡಾ.ಅಶ್ವತ್ಥ ನಾರಾಯಣ್ ಹೇಳಿಕೆಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಸಿಎಂ ಅವರ ಅಧಿಕೃತ ನಿವಾಸ ಖಾಲಿ‌ ಇರಲಿಲ್ಲ.ಹಾಗಾಗಿ ಕುಮಾರಸ್ವಾಮಿ ಮಧ್ಯಾಹ್ನದ ವೇಳೆ ವಿಧಾನಸೌಧಕ್ಕೆ ಸನಿಹದಲ್ಲಿದ್ದ ಖಾಸಗಿ ಹೋಟೆಲ್ ನಲ್ಲಿ ಊಟಕ್ಕೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದರು. ಆಡಳಿತದ ಹಿತ ದೃಷ್ಟಿಯಿಂದ ಕುಮಾರಸ್ವಾಮಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡುತ್ತಿದ್ದರು. ಆದರೆ ಇದೇ ವಿಚಾರ ಮುಂದಿಟ್ಟುಕೊಂಡು ಸಚಿವ ಅಶ್ವತ್ಥ ನಾರಾಯಣ್ ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಹಾಗಾದರೆ ನಿಮ್ಮ ಪಕ್ಷದ ಮುಖಂಡರುಗಳೇನು ಗುಡಿಸಲಿನಲ್ಲಿ ಇದ್ದಾರಾ ಎಂದು‌ ಪ್ರಶ್ನಿಸಿದರು.

ಒಕ್ಕಲಿಗ ಸಮಾಜದ ದೊಡ್ಡ ಲೀಡರ್ ಆಗಬೇಕೆಂದುಕೊಂಡು ಸಚಿವ ಅಶ್ವತ್ಥ ನಾರಾಯಣ್ ಕುಮಾರಸ್ವಾಮಿ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಆದರೆ ಇದು ಸಾಧ್ಯವಾಗುವುದಿಲ್ಲ.ಕುಮಾರಸ್ವಾಮಿ ಒಕ್ಕಲಿಗ ಸಮುದಾಯ ಮಾತ್ರವಲ್ಲದೇ ಎಲ್ಲಾ ಸಮುದಾಯಗಳಿಗೂ ನಾಯಕರಾಗಿದ್ದಾರೆ.
ಕುಮಾರಸ್ವಾಮಿ ಟೀಕಿಸಿದರೆ ದೊಡ್ಡ ನಾಯಕನಾಗುತ್ತೇನೆಂದು ಸಚಿವ ಅಶ್ವತ್ಥ ನಾರಾಯಣ್ , ಆರ್.ಅಶೋಕ್ ಗೆ ಪರ್ಯಾಯವಾಗಿ ನಾಯಕನಾಗುವ ಭ್ರಮೆಯಲ್ಲಿದ್ದಾರೆ ಎಂದು ಟೀಕಿಸಿದರು.

ಅಶ್ವತ್ಥ ನಾರಾಯಣ ಒಳ್ಳೆಯ ಸ್ನೇಹಿತ. ನಾನೂ ಬಿಜೆಪಿಯಲ್ಲಿ ಇದ್ದವನು. ರಾಜ್ಯ, ರಾಷ್ಟ್ರೀಯ ನಾಯಕರು ಬಂದರೂ ಕಾರ್ಯಕರ್ತನ ಮನೆಯಲ್ಲಿ ಉಳಿದುಕೊಳ್ಳುತ್ತಿದ್ದರು. ನಮ್ಮದು ಸಮ್ಮಿಶ್ರ ಸರ್ಕಾರ ಇತ್ತು.ಆಗಿನ ಮಾಜಿ ಮುಖ್ಯಮಂತ್ರಿ ಮನೆ ಖಾಲಿ ಮಾಡಿರಲಿಲ್ಲ.ಕುಮಾರಸ್ವಾಮಿ ಅವರ ಮನೆ ಜೆ.ಪಿ.ನಗರದಲ್ಲಿದೆ. ಆದ್ದರಿಂದ ಕುಮಾರಸ್ವಾಮಿ ಹೋಟೆಲ್‌ನಲ್ಲಿದ್ದರು. ನಿಮ್ಮವರು ಗುಡಿಸಲಿನಲ್ಲಿ ಇದ್ರಾ?ನಮ್ಮಲ್ಲೂ ಮಾತನಾಡುವವರು ಇದ್ದಾರೆ ಎಂದರು.

ದೇವೇಗೌಡರು ಇತಿಮಿತಿಯಲ್ಲಿ ಮಾತನಾಡಿ ಎಂದು ಹೇಳಿದ್ದಾರೆ.  ಆರ್.ಅಶೋಕ್ ಅವರನ್ನು ಓವರ್ ಟೇಕ್ ಮಾಡಿ ಒಕ್ಕಲಿಗ ಸಮಾಜದ ಲೀಡರ್ ಎಂದು ತೋರಿಸಿಕೊಳ್ಳಲು ಹೊರಟಿದ್ದೀರಾ ? ಮೈತ್ರಿ ಸರ್ಕಾರ ಬೀಳಲು ಕಾಂಗ್ರೆಸ್ ನಾಯಕರು ಎಷ್ಟು ಕಾರಣವೋ ನೀವು ಅಷ್ಟೇ ಮುಖ್ಯ.  ರಾಜಕಾರಣದಲ್ಲಿ ನೂರಕ್ಕೆ ನೂರು ಯಾರೂ ಸರಿ ಇಲ್ಲ. ನನ್ನನ್ನೂ ಸೇರಿದಂತೆ ಯಾರೂ ಸರಿಯಿಲ್ಲ.ಕುಮಾರಸ್ವಾಮಿ ಏನು, ನೀನೇನು ಅನ್ನೋದು ರಾಜ್ಯದ ಜನಕ್ಕೆ ಗೊತ್ತಿದೆ.  ಎರಡೂ ರಾಷ್ಟ್ರೀಯ ಪಕ್ಷದವರು ಪ್ರಾದೇಶಿಕ ಪಕ್ಷ ಇರಬಾರದು ಎಂದು ಏನೇನು ಮಾಡಿದ್ದೀರಿ ಅನ್ನೋದು ನಮಗೂ ಗೊತ್ತಿದೆ ಎಂದರು.

ಮನೆಗಳು ಕುಸಿದರೂ ಎಷ್ಟು ಜನಕ್ಕೆ ಪರಿಹಾರ ಸಿಕ್ಕಿದೆ.100 ಕೋಟಿ ರೂಪಾಯಿ ಸಾಲ ಮನ್ನಾ ಅನುದಾನ ಬಿಡುಗಡೆ ಆಗಿದ್ದರೂ ರೈತರಿಗೆ ಹಣ ತಲುಪಿಲ್ಲ. ನಾವು ಇದೆಲ್ಲವನ್ನೂ ಮಾತನಾಡುತ್ತಿದ್ದೀವಾ ?ಉನ್ನತ ಶಿಕ್ಷಣ ಸಚಿವರಾಗಿ ಇದೇನಾ ನಿಮ್ಮ ಸಂಸ್ಕಾರ ?ಟೀಕೆ ಮಾಡಬೇಡಿ ಎಂದು ಹೇಳಲ್ಲ. ಟೀಕೆ, ಭಾಷೆ ಮಾದರಿಯಾಗಿರಬೇಕು ಎಂದರು.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ದ ಹಲವು ಆರೋಪ ವಿಚಾರ ಕುರಿತು ಪ್ರತಿಕ್ರಿಯಿಸಿ, ಆರೋಪದ ತನಿಖೆಯ ಭಾಗವಾಗಿ ಕೆಲವು ದಾಖಲೆಗಳನ್ನು ಕೇಳಿದ್ದಾರೆ. ಆ.19 ರಂದು ಬೆಳಗ್ಗೆ 11.30ಕ್ಕೆ ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ದಾಖಲೆಗಳನ್ನು ಸಲ್ಲಿಸುತ್ತೇನೆ.ತಾವೇ ತಪ್ಪು ಮಾಡಿ ಮೈಸೂರು ಜನರನ್ನು ಅನಗತ್ಯವಾಗಿ ಕೆಣಕಿದರೆ ಏನಾಗುತ್ತದೆ ಎಂಬುದಕ್ಕೆ ಈ ಪ್ರಕರಣವೇ ಉದಾಹರಣೆಯಾಗಿದೆ. ಸತ್ಯ ಮೇವ ಜಯತೇ ಎನ್ನುವ ಮಾತು ಈಗ ನಿಜವಾಗಿದೆ. ಇಷ್ಟೊತ್ತಿಗಾಗಲೇ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯನ್ನು ಸಸ್ಪೆಂಡ್ ಮಾಡಬೇಕಾಗಿತ್ತು. ಈಗಲಾದರೂ ತನಿಖೆ ಚುರುಕುಗೊಂಡಿರುವುದು ಸಂತೋಷ‌ ಎಂದರು.

ಎಸಿಬಿ ರದ್ದುಗೊಳಿಸಿ ಲೋಕಾಯುಕ್ಕೆ ಮಾನ್ಯತೆ ನೀಡಿರುವ ನ್ಯಾಯಾಲಯದ ಆದೇಶವನ್ನು ಸ್ವಾಗತಿಸುತ್ತೇನೆ.ಲೋಕಾಯುಕ್ತಕ್ಕೆ ಕೇವಲ ಮಾನ್ಯತೆ ಕೊಟ್ಟಿರುವುದು ಪೂರ್ಣ ಸಮಾಧಾನ ತಂದಿಲ್ಲ. ಲೋಕಾಯುಕ್ತಕ್ಕೆ ಪರಿಣಾಮಕಾರಿ ಆಗಿರುವ ಅಧಿಕಾರಿಗಳನ್ನು ನೇಮಕ ಮಾಡುವ ಅಗತ್ಯವಿದೆ ಎಂದರು.

ಟಾಪ್ ನ್ಯೂಸ್

Pratapgarh; ಪಂಚಾಯತ್ ನಲ್ಲಿ ಪರಿಹಾರ ಸಿಗದ ಪ್ರಕರಣ ಬೇಧಿಸಿದ ಎಮ್ಮೆ! ವಿಚಿತ್ರವಾದರೂ ಸತ್ಯ

Pratapgarh; ಪಂಚಾಯತ್ ನಲ್ಲಿ ಪರಿಹಾರ ಸಿಗದ ಪ್ರಕರಣ ಬೇಧಿಸಿದ ಎಮ್ಮೆ! ವಿಚಿತ್ರವಾದರೂ ಸತ್ಯ

1-rev

Kerala; ಮಿದುಳು ತಿನ್ನುವ ಅಮೀಬಾ ಸೋಂಕಿನ ನಾಲ್ಕನೇ ಪ್ರಕರಣ ಪತ್ತೆ

ಇನ್ನು ಮೂರೂವರೆ ನಿಮಿಷಕ್ಕೊಂದು ಮೆಟ್ರೋ: ರೈಲುಗಳ ಸಂಖ್ಯೆ 9ರಿಂದ 15ಕೆ ಏರಿಕೆ

ಇನ್ನು ಮೂರೂವರೆ ನಿಮಿಷಕ್ಕೊಂದು ಮೆಟ್ರೋ: ರೈಲುಗಳ ಸಂಖ್ಯೆ 9ರಿಂದ 15ಕ್ಕೆ ಏರಿಕೆ

1-shetl

Badminton: ವಿಶ್ವದ 4ನೇ ಶ್ರೇಯಾಂಕದ ಆಂಟೊನ್ಸೆನ್ ಗೆ ಶಾಕ್ ನೀಡಿದ ಪ್ರಿಯಾಂಶು ರಾಜಾವತ್

sanjay-raut

Lalu Yadav ಹೇಳಿದ್ದು ಸರಿ; ಅಲೆಗಳು ಇನ್ನೂ ರಾಹುಲ್ ಪರವಿದೆ: ಸಂಜಯ್ ರಾವತ್

BSP president Armstrong case; Chennai police arrested 8 suspects

BSP ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣ; 8 ಶಂಕಿತರನ್ನು ಬಂಧಿಸಿದ ತಮಿಳುನಾಡು ಪೊಲೀಸ್

Ludhiana; Shiv Sena leader attacked by Nihang Sikhs in the middle of the day. Video

Ludhiana;ಶಿವಸೇನಾ ನಾಯಕನ ಮೇಲೆ ಹಾಡಹಗಲೇ ನಡುರಸ್ತೆಯಲ್ಲಿ ನಿಹಾಂಗ್ ಸಿಖ್ಖರಿಂದ ದಾಳಿ| Video


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-SC-Meeting

Government Decision; ದಲಿತ ವಿದ್ಯಾರ್ಥಿಗಳಿಗೆ ಬಂಪರ್‌: 15,000 ಸ್ಟೈ ಫಂಡ್‌

Link Aadhaar ಕೃಷಿಕರ ಪಂಪ್‌ಸೆಟ್‌ಗಳಿಗೆ ಆಧಾರ್‌ ಜೋಡಣೆ ಕಡ್ಡಾಯ

Link Aadhaar ಕೃಷಿಕರ ಪಂಪ್‌ಸೆಟ್‌ಗಳಿಗೆ ಆಧಾರ್‌ ಜೋಡಣೆ ಕಡ್ಡಾಯ

State Government ಎಸ್‌ಸಿ, ಎಸ್‌ಟಿ ಕಾಸು ಮತ್ತೆ ಗ್ಯಾರಂಟಿಗೆ!

State Government ಎಸ್‌ಸಿ, ಎಸ್‌ಟಿ ಕಾಸು ಮತ್ತೆ ಗ್ಯಾರಂಟಿಗೆ!

SIT

Valmiki ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರಗೆ ಎಸ್‌ಐಟಿ ಬುಲಾವ್‌

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Pratapgarh; ಪಂಚಾಯತ್ ನಲ್ಲಿ ಪರಿಹಾರ ಸಿಗದ ಪ್ರಕರಣ ಬೇಧಿಸಿದ ಎಮ್ಮೆ! ವಿಚಿತ್ರವಾದರೂ ಸತ್ಯ

Pratapgarh; ಪಂಚಾಯತ್ ನಲ್ಲಿ ಪರಿಹಾರ ಸಿಗದ ಪ್ರಕರಣ ಬೇಧಿಸಿದ ಎಮ್ಮೆ! ವಿಚಿತ್ರವಾದರೂ ಸತ್ಯ

1-rev

Kerala; ಮಿದುಳು ತಿನ್ನುವ ಅಮೀಬಾ ಸೋಂಕಿನ ನಾಲ್ಕನೇ ಪ್ರಕರಣ ಪತ್ತೆ

buda

Bellary; ಬುಡಾ ಬಗ್ಗೆ ಲೋಕಾಯುಕ್ತಕ್ಕೆ ದೂರು ಕೊಡುತ್ತೇನೆ: ಎನ್.ಪ್ರತಾಪ ರೆಡ್ಡಿ

ಇನ್ನು ಮೂರೂವರೆ ನಿಮಿಷಕ್ಕೊಂದು ಮೆಟ್ರೋ: ರೈಲುಗಳ ಸಂಖ್ಯೆ 9ರಿಂದ 15ಕೆ ಏರಿಕೆ

ಇನ್ನು ಮೂರೂವರೆ ನಿಮಿಷಕ್ಕೊಂದು ಮೆಟ್ರೋ: ರೈಲುಗಳ ಸಂಖ್ಯೆ 9ರಿಂದ 15ಕ್ಕೆ ಏರಿಕೆ

1-shetl

Badminton: ವಿಶ್ವದ 4ನೇ ಶ್ರೇಯಾಂಕದ ಆಂಟೊನ್ಸೆನ್ ಗೆ ಶಾಕ್ ನೀಡಿದ ಪ್ರಿಯಾಂಶು ರಾಜಾವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.