Wheeling: ಮೇಲ್ಸೇತುವೆಯಿಂದ ಎರಡು ಸ್ಕೂಟಿಗಳನ್ನು ಎಸೆದು ಪುಂಡರಿಗೆ ಶಾಸ್ತಿ!
Team Udayavani, Aug 18, 2024, 6:30 AM IST
ನೆಲಮಂಗಲ: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕೂಟಿಗಳಲ್ಲಿ ವ್ಹೀಲಿಂಗ್ ಮಾಡುತ್ತಾ ಪ್ರಯಾಣಿಕರಲ್ಲಿ ಭೀತಿ ಸೃಷ್ಟಿಸಿದ್ದ ಪುಂಡರನ್ನು ಅಡ್ಡಗಟ್ಟಿದ ಸಾರ್ವಜನಿಕರು ಹಾಗೂ ಹೆದ್ದಾರಿ ಪ್ರಯಾಣಿಕರು ಪುಂಡರ ಎರಡು ದ್ವಿಚಕ್ರ ವಾಹನಗಳನ್ನು ಜಖಂಗೊಳಿಸಿ, ಮೇಲ್ಸೇತುವೆಯಿಂದ ಕೆಳಗಡೆ ಎಸೆದು ಬುದ್ಧಿ ಕಲಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಯ ವೀಡಿಯೋ ವೈರಲ್ ಆಗಿದೆ. ಆ. 15ರಂದು ಬೆಂಗಳೂರಿನಿಂದ ತುಮಕೂರು ಕಡೆಗಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಕಲಿ ನಂಬರ್ ಪ್ಲೇಟ್ನ ಎರಡು ಸ್ಕೂಟಿಗಳಲ್ಲಿ ನಾಲ್ವರು ಪುಂಡರು ವ್ಹೀಲಿಂಗ್ ಮಾಡುತ್ತಿದ್ದರು. ಅಡಕಮಾರನಹಳ್ಳಿ ಸಮೀಪದ ಹೆದ್ದಾರಿ ಮೇಲ್ಸೇತುವೆ ಬಳಿ ಕೆಲವು ಹೆದ್ದಾರಿ ಪ್ರಯಾಣಿಕರು ಅಡ್ಡಗಟ್ಟಿ ಪ್ರಶ್ನಿಸುತ್ತಿದ್ದಂತೆ ಪುಂಡರು ವಾಹನ ಬಿಟ್ಟು ಪರಾರಿಯಾದರು.
ಅವರಿಗೆ ಪಾಠ ಕಲಿಸುವ ಉದ್ದೇಶದಿಂದ ಹೆದ್ದಾರಿ ಪ್ರಯಾಣಿಕರು, ಸಾರ್ವಜನಿಕರು ಮೇಲ್ಸೇತುವೆ ಮೇಲಿಂದ ಸ್ಕೂಟಿಗಳನ್ನು ಕೆಳಗೆ ಎಸೆದರು. ಶೋಕಿಗಾಗಿ ವ್ಹೀಲಿಂಗ್ ಮಾಡುವವರಿಗೆ ಈ ಘಟನೆ ಎಚ್ಚರಿಕೆಯ ಘಂಟೆಯಾಗಿದೆ. ನೆಲಮಂಗಲ ಸಂಚಾರ ಪೊಲೀಸ್ ಠಾಣೆ ಅಧಿಕಾರಿಗಳು ಮತ್ತು ಸಿಬಂದಿ ಸ್ಕೂಟಿಗಳನ್ನು ವಶಕ್ಕೆ ಪಡೆದುಕೊಂಡು ತನಿಖೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.