BJP ಶಾಸಕ ಸೋಮಶೇಖರ್‌ ನಡೆ ಯಾವ ಕಡೆ? 27ಕ್ಕೆ ನಿರ್ಧಾರ ಸಂಭವ

ಅಂದು ರಾಜ್ಯಸಭೆ ಚುನಾವಣೆ; ಯಾರ ಪರ ನಿಲ್ಲುತ್ತಾರೆ ಎಂಬ ಕುತೂಹಲ

Team Udayavani, Feb 19, 2024, 7:40 AM IST

BJP ಶಾಸಕ ಸೋಮಶೇಖರ್‌ ನಡೆ ಯಾವ ಕಡೆ? 27ಕ್ಕೆ ನಿರ್ಧಾರ ಸಂಭವ

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್‌ ನಡೆ ಯಾವ ಕಡೆಗೆ? ಪಕ್ಷ ನಿಷ್ಠೆಯೋ ಅಥವಾ ವ್ಯಕ್ತಿ ನಿಷ್ಠೆಯೋ?ರಾಜ್ಯಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ಈಗ ನಾಯಕರನ್ನು ಕಾಡುತ್ತಿರುವ ಪ್ರಶ್ನೆ ಇದು. ಸ್ವತಃ ಸೋಮಶೇಖರ್‌ ಅವರ ಇತ್ತೀಚಿನ ನಡೆಯೇ ಈ ಅನುಮಾನಕ್ಕೆ ಕಾರಣ.

ಒಂದೆಡೆ ಬಿಜೆಪಿ ನಾಯಕರೊಂದಿಗೆ ಅಂತರ ಕಾಯ್ದುಕೊಳ್ಳುತ್ತಾರೆ. ಮತ್ತೊಂದೆಡೆ ಕಾಂಗ್ರೆಸ್‌ ನಾಯಕರನ್ನು ಹೊಗಳಿ ಅಟ್ಟಕ್ಕೇರಿಸುತ್ತಾರೆ. ಇನ್ನೊಂದೆಡೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ “ಕೈ’ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಬಹಿರಂಗವಾಗಿಯೇ ಭಾಗವಹಿಸುತ್ತಾರೆ.
ಇದೆಲ್ಲದರ ನಡುವೆ ಇನ್ನೂ ಒಂದು ಹೆಜ್ಜೆ ಮುಂದೆಹೋಗಿ, ಭಾನುವಾರ ಹಮ್ಮಿಕೊಂಡಿದ್ದ “ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸೋಮಶೇಖರ್‌, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮತ್ತು ಅವರ ಸಹೋದರನೂ ಆದ ಸಂಸದ ಡಿ.ಕೆ. ಸುರೇಶ್‌ ಅವರನ್ನು ಹಾಡಿ ಹೊಗಳಿದ್ದಾರೆ. “ಡಿಸಿಎಂ ನನ್ನ ಮತ್ತು ಜನರ ಮನವಿಗಳಿಗೆ ಸ್ಪಂದಿಸಿದ್ದಾರೆ. ಸಂಸದ ಡಿ.ಕೆ. ಸುರೇಶ್‌ ಕೂಡ ಆನೇಕಲ್‌ ಸುತ್ತಮುತ್ತ ಉತ್ತಮ ಕೆಲಸ ಮಾಡಿದ್ದು, 110 ಹಳ್ಳಿಗಳಿಗೆ ಕುಡಿಯುವ ನೀರು ಕೊಡುವ ಕೆಲಸ ಮಾಡುತ್ತಿದ್ದಾರೆ’ ಎಂದು ಶ್ಲಾ ಸಿದ್ದಾರೆ. ಅಷ್ಟೇ ಅಲ್ಲ, ನಂತರ ಡಿ.ಕೆ. ಶಿವಕುಮಾರ್‌ ಜತೆ ಮಂಗಳೂರಿಗೆ ಹಾರಿದ ಸೋಮಶೇಖರ್‌, ಅಲ್ಲಿ ಏರ್ಪಡಿಸಿದ್ದ ಕರ್ನಾಟಕ ಬ್ಯಾಂಕ್‌ನ ಶತಮಾನೋತ್ಸವ ಕಾರ್ಯಕ್ರಮದಲ್ಲೂ ಡಿಸಿಎಂ ಜತೆ ಭಾಗವಹಿಸಿದ್ದಾರೆ.

“ಭಿನ್ನ ನಡೆ’ ಇದೇ ಮೊದಲಲ್ಲ
ಮಾಜಿ ಸಚಿವರ ಈ “ಭಿನ್ನ ನಡೆ’ ಇದೇ ಮೊದಲಲ್ಲ. ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಬಜೆಟ್‌ ಮಂಡನೆ ವೇಳೆ ಪ್ರತಿಪಕ್ಷಗಳು ಬಹಿಷ್ಕರಿಸಿ ಹೊರನಡೆದು ಪ್ರತಿಭಟನೆಗಿಳಿದರು. ಸೋಮಶೇಖರ್‌ ಕೂಡ ಅವರೊಂದಿಗೆ ಹೊರನಡೆದರು. ಆದರೆ ಬಿಜೆಪಿ-ಜೆಡಿಎಸ್‌ ಪ್ರತಿಭಟನೆಯೊಂದಿಗೆ ಗುರುತಿಸಿಕೊಳ್ಳಲಿಲ್ಲ. ಇದಕ್ಕೂ ಹಿಂದೆ ಅಂದರೆ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯ ನಂತರ ಹಮ್ಮಿಕೊಂಡಿದ್ದ ಔತಣಕೂಟಕ್ಕೇ ತೆರಳಿ ಹುಬ್ಬೇರಿಸುವಂತೆ ಮಾಡಿದ್ದರು. ಆಗ ಅವರು, “ಊಟಕ್ಕೆ ಕರೆದಿದ್ದರು, ಹೋಗಿದ್ದೆ ಅಷ್ಟೇ. ಸಭೆಗೆ ಹೋಗಿರಲಿಲ್ಲ’ ಅಂತ ಸಮಜಾಯಿಷಿ ನೀಡಿದ್ದರು.

ಇನ್ನು ಅದೇ ಬೆಳಗಾವಿ ಅಧಿವೇಶನದಲ್ಲಿ ಎರಡು ಸಂದರ್ಭಗಳಲ್ಲಿ ಪ್ರತಿಪಕ್ಷ ಕಲಾಪಗಳನ್ನು ಬಹಿಷ್ಕರಿಸಿತ್ತು. ಆದರೆ, ಸೋಮಶೇಖರ್‌ ಮಾತ್ರ ಬಿಜೆಪಿ ನಾಯಕರನ್ನು ಹಿಂಬಾಲಿಸದೆ, ಆಡಳಿತ ಪಕ್ಷದ ನುಡಿಗಳಿಗೆ “ಕಿವಿ’ ಆಗಿದ್ದರು. ಮತ್ತೂಂದು ಪ್ರಸಂಗದಲ್ಲಿ ಬಾವಿಗಿಳಿದು ಧರಣಿ ನಡೆಸಲು ಪ್ರತಿಪಕ್ಷಗಳು ಮುಂದಾದಾಗಲೂ ತಮ್ಮ ಆಸನ ಬಿಟ್ಟು ಕದಲದ ಮಾಜಿ ಸಚಿವರು, ಭಿನ್ನವಾಗಿ ಗುರುತಿಸಿಕೊಂಡಿದ್ದರು.

ಪಕ್ಷ ನಿಷ್ಠೆಯೋ, ವ್ಯಕ್ತಿ ನಿಷ್ಠೆಯೋ?
ಈ ಬೆಳವಣಿಗೆಗಳ ನಡುವೆ, ಇದೇ 27ರಂದು ರಾಜ್ಯಸಭೆ ಚುನಾವಣೆ ನಡೆಯಲಿದೆ. ಆ ವೇಳೆ ಶಾಸಕರು ತಾವು ಚಲಾಯಿಸುತ್ತಿರುವ ಮತವನ್ನು ಪ್ರದರ್ಶನ ಮಾಡಬೇಕಾಗುತ್ತದೆ. ಹಾಗಿದ್ದರೆ, ಸೋಮಶೇಖರ್‌ ಯಾವ ಅಭ್ಯರ್ಥಿಗೆ ಮತ ಚಲಾಯಿಸುತ್ತಾರೆ? ಪಕ್ಷ ನಿಷ್ಠೆ ಮೆರೆಯುತ್ತಾರಾ ಅಥವಾ ವ್ಯಕ್ತಿ ನಿಷ್ಠೆಗೆ ನಿಲ್ಲುತ್ತಾರಾ? ಇದಾವುದೂ ಬೇಡ ಅಂತ ಅಡ್ಡ ಮತದಾನ ಮಾಡಿ ಕುತೂಹಲ ಮುಂದುವರಿಯುವಂತೆ ಮಾಡುತ್ತಾರಾ ಕಾದುನೋಡಬೇಕಿದೆ.

ಮಂಗಳೂರಿನಲ್ಲೂ ಡಿಕೆಶಿ ಜತೆಗೆ ಸೋಮಶೇಖರ್‌
ಮಂಗಳೂರು: ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್‌ ಮಂಗಳೂರಿನಲ್ಲೂ ರವಿವಾರ ಕಾಣಿಸಿ ಕೊಂಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರೊಂದಿಗೇ ಆಗಮಿಸಿದ್ದರು ಎಂದು ತಿಳಿದುಬಂದಿದೆ.

ಕರ್ಣಾಟಕ ಬ್ಯಾಂಕ್‌ ಶತಮಾನೋತ್ಸವ ಅಚರಣೆ ವೇಳೆ ಕಾಣಿಸಿಕೊಂಡ ಶಾಸಕ ಸೋಮಶೇಖರ್‌ ಶತಮಾನೋತ್ಸವ ಕಟ್ಟಡ ಉದ್ಘಾಟನೆ ವೇಳೆ ಡಿಕೆಶಿ ಜತೆಗಿದ್ದರು. ಬಳಿಕ ನಡೆದ ಸಭಾಕಾರ್ಯಕ್ರಮದ ಸಂದರ್ಭ ಸಭೆಯಲ್ಲಿ ಕುಳಿತಿದ್ದರು. ಸೋಮಶೇಖರ್‌ ಬಂದಿರುವುದನ್ನು ಡಿಕೆಶಿ ಅವರೂ ಉಲ್ಲೇಖಿಸಿದರು.

ಕೆಲವು ತಿಂಗಳಿನಿಂದಲೇ ಸೋಮಶೇಖರ್‌ ಬಿಜೆಪಿ ಜತೆ ವಿರಸ ಹೊಂದುತ್ತಿದ್ದು, ಕಾಂಗ್ರೆಸ್‌ ಹಾಗೂ ಡಿಕೆಶಿ ಜತೆ ಒಲವು ತೋರುತ್ತಿದ್ದು, ಈಚೆಗಷ್ಟೇ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ ಅನ್ನೂ ಸ್ವಾಗತಿಸಿದ್ದರು. ಮಂಗಳೂರಿಗೆ ಡಿಕೆಶಿ ಅವರೊಂದಿಗೆ ವಿಮಾನದಲ್ಲಿ ಆಗಮಿಸಿದ್ದ ಅವರು ಬಳಿಕ ಕಾರಿನಲ್ಲೂ ಜತೆಯಾಗಿ ತೆರಳಿದರೆಂದು ಮೂಲಗಳು ತಿಳಿಸಿವೆ.

 

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.