Wild Elephant  ಕಾಟ ತಡೆಗೆ ಭದ್ರಾ ಅಭಯಾರಣ್ಯದಲ್ಲಿ ಆನೆ ಬಿಡಾರ


Team Udayavani, Oct 5, 2024, 1:31 AM IST

aane

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಹಾಗೂ ಕಾಡುಪ್ರಾಣಿ ಮಾನವ ಸಂಘರ್ಷ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಆನೆ ಬಿಡಾರ ನಿರ್ಮಾಣ ಮಾಡಬೇಕೆಂಬ ಕೂಗಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಜಿಲ್ಲೆಯಲ್ಲಿ ಆನೆ ಬಿಡಾರ ನಿರ್ಮಾಣ ಕನಸಿಗೆ ಬಲ ತುಂಬಿದ್ದಾರೆ.

ಜಿಲ್ಲೆಯ ಭದ್ರಾ ಅಭಯಾರಣ್ಯ ವ್ಯಾಪ್ತಿ ಯಲ್ಲಿ ಆನೆ ಬಿಡಾರ ನಿರ್ಮಿಸಲು ಅರಣ್ಯ ಇಲಾಖೆ 8 ಸ್ಥಳಗಳನ್ನು ಗುರುತಿಸಿತ್ತು. ಸದ್ಯ ಮೂರು ಸ್ಥಳಗಳನ್ನು ಅಂತಿಮ ಮಾಡಿ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಮುತ್ತೋಡಿ ಅಭಯಾರಣ್ಯದ ನೇಚರ್‌ ಕ್ಯಾಂಪ್‌ನ ಎರಡು ಸ್ಥಳಗಳು ಹಾಗೂ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಒಂದು ಸ್ಥಳವನ್ನು ಅಂತಿಮಗೊಳಿಸಲಾಗಿದೆ.

ಆನೆ ಬಿಡಾರ ನಿರ್ಮಾಣಕ್ಕೆ ಅಂದಾಜು ಎರಡು ಕೋಟಿ ರೂ. ವೆಚ್ಚವಾಗಲಿದ್ದು, ಕನಿಷ್ಟ ಪಕ್ಷ ಐದು ಎಕರೆ ಜಾಗದ ಆವಶ್ಯಕತೆ ಇದೆ. ಅರಣ್ಯ ಇಲಾಖೆ ರಾಜ್ಯ ಸರಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಯಲ್ಲಿರುವ ಮೂರು ಸ್ಥಳಗಳಿಗೆ ಹುಲಿ ಪ್ರಾಜೆಕ್ಟ್‌ನ ಎಸಿಎಫ್‌ ಆರ್‌. ಮನೋಜ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇವರ ತೀರ್ಮಾನದ ಬಳಿಕ ಸ್ಥಳ ನಿಗದಿಯಾಗಲಿದೆ.

ಜಿಲ್ಲೆಯ ಮೂಡಿಗೆರೆ, ಚಿಕ್ಕಮಗಳೂರು, ನರಸಿಂಹರಾಜಪುರ ತಾಲೂಕು ವ್ಯಾಪ್ತಿಯಲ್ಲಿ ಮಾನವ ಮತ್ತು ಕಾಡುಪ್ರಾಣಿಗಳ ಸಂಘರ್ಷ ಅಧಿಕವಾಗಿದ್ದು, ಕಾಡಾನೆಗಳ ಉಪಟಳ ವಿಪರೀತವಾಗಿದೆ. ಸಕಲೇಶಪುರದಿಂದ ಆಗಮಿಸುವ ಆನೆಗಳು ಇಲ್ಲಿನ ಕಾಫಿ ತೋಟಗಳಲ್ಲಿ ಬೀಡುಬಿಟ್ಟು ತೋಟಗಳನ್ನು ನಾಶಪಡಿಸುವುದಲ್ಲದೆ ಕಳೆದ ಕೆಲವು ವರ್ಷಗಳಲ್ಲಿ ಅನೇಕರ ಜೀವವನ್ನು ಬಲಿ ಪಡೆದುಕೊಂಡಿವೆ. ಕಾಡಾನೆಗಳ ನಿಯಂತ್ರಣಕ್ಕೆ ಆನೆ ಬಿಡಾರ à ಭಾಗಕ್ಕೆ ಅಗತ್ಯವಾಗಿದೆ. ಕಾಡಿನಿಂದ ನಾಡಿನತ್ತ ನುಗ್ಗುವ ಆನೆಗಳಿಗೆ ಕಡಿವಾಣ ಹಾಕಲು ಆನೆ ಬಿಡಾರ ಅತ್ಯಂತ ಮಹತ್ವ ಪಡೆದುಕೊಂಡಿದೆ.

ಟಾಪ್ ನ್ಯೂಸ್

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

Kapu

Navarathiri: ಉಚ್ಚಿಲ ದಸರಾ: ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

krishna bhaire

FIR ದಾಖಲಾದ ಬಿಜೆಪಿಯವರು ರಾಜೀನಾಮೆ ನೀಡಲಿ: ಕೃಷ್ಣ ಭೈರೇಗೌಡ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Madikeri

Madikeri: ಕುಶಾಲನಗರದಲ್ಲಿ ಕೊಡಲಿಯಿಂದ ಕಡಿದು ಇಬ್ಬರ ಕೊ*ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್‌: ಕಾಡಾನೆಗಳ ದರ್ಶನ

1-asdd

PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ

Exam 2

SSLC; ಮಧ್ಯ ವಾರ್ಷಿಕ ಪರೀಕ್ಷಾ ಫ‌ಲಿತಾಂಶ ಅ. 25 ಕ್ಕೆ

1-aranya

Forest Act ತಿದ್ದುಪಡಿ ಸೇರಿ ಬೇಡಿಕೆ ಈಡೇರಿಕೆಗೆ ಇಂದು ಸಭೆ

krishna bhaire

FIR ದಾಖಲಾದ ಬಿಜೆಪಿಯವರು ರಾಜೀನಾಮೆ ನೀಡಲಿ: ಕೃಷ್ಣ ಭೈರೇಗೌಡ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

1-aaaa

Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್‌: ಕಾಡಾನೆಗಳ ದರ್ಶನ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

1-asdd

PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.