Rahul Gandhi ಆಕಸ್ಮಿಕವಾಗಿ ಸಿಕ್ಕಿದರೆ ಓಡಿಹೋಗಲು ಆಗುತ್ತದೆಯೇ: ಪರಂ


Team Udayavani, Sep 12, 2024, 12:36 AM IST

Rahul Gandhi ಆಕಸ್ಮಿಕವಾಗಿ ಸಿಕ್ಕಿದರೆ ಓಡಿಹೋಗಲು ಆಗುತ್ತದೆಯೇ: ಪರಂ

ಬೆಂಗಳೂರು: ಅಮೆರಿಕದಲ್ಲಿ ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್‌ ಹಾಗೂ ರಾಹುಲ್‌ ಗಾಂಧಿ ಭೇಟಿಯಾಗಿದ್ದಾರೆ, ಹೀಗೆ ಆಕಸ್ಮಿಕವಾಗಿ ಸಿಕ್ಕಿದರು ಅಂತ ಓಡಿ ಹೋಗಲು ಆಗುತ್ತದೆಯೇ? ಎಂದು ಗೃಹಸಚಿವ ಡಾ| ಜಿ. ಪರಮೇಶ್ವರ್‌ ಪ್ರಶ್ನಿಸಿದರು.

ಅಮೆರಿಕದಲ್ಲಿ ರಾಹುಲ್‌ ಮತ್ತು ಡಿಕೆಶಿ ಭೇಟಿಯಾದ ಬಗ್ಗೆ ವಿಚಾರದ ಬಗ್ಗೆ ಬುಧವಾರ ಸುದ್ದಿಗಾರರು ಕೇಳಿದಾಗ, “ನಾನೂ ಸಾಮಾಜಿಕ ಜಾಲತಾಣದಲ್ಲಿ ನೋಡಿದೆ. ನನಗೂ ನೋಡಿ ಸಂತೋಷವಾಯಿತು. ಡಿಕೆಶಿ ಕುಟುಂಬ ಸಮೇತ ಹೋಗಿದ್ದಾರೆ. ಒಂದೇ ಹೊಟೇಲ್‌ನಲ್ಲಿ ಸಿಕ್ಕಿದ್ದಾರೆ. ಹೀಗೆ ಆಕಸ್ಮಿಕವಾಗಿ ಸಿಕ್ಕಿದಾಗ ಓಡಿ ಹೋಗಲು ಆಗುತ್ತಾ? ಮುಖಾಮುಖಿಯಾದ ಪರಸ್ಪರ ಮಾತನಾಡಿದ್ದಾರಷ್ಟೇ’ ಎಂದರು.

ರಾಜಕಾರಣದ ಬಗ್ಗೆ ಚರ್ಚಿಸಿಲ್ಲ: ಸಚಿವ ಲಾಡ್‌
ಡಿ.ಕೆ. ಶಿವಕುಮಾರ್‌ ನಮ್ಮ ನಾಯಕರು. ಅಮೆರಿಕದಲ್ಲಿ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿದ್ದರಲ್ಲಿ ಕುತೂಹಲ ಏನೂ ಇಲ್ಲ. ಅವರಿಬ್ಬರು ಅಲ್ಲಿ ರಾಜ್ಯ ರಾಜಕಾರಣ ಬಗ್ಗೆ ಚರ್ಚೆ ಮಾಡಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ಹೇಳಿದರು.

ಧಾರವಾಡದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದಿವೆ ಎನ್ನಲಾದ ಹಗರಣಗಳ ಕುರಿತು ತನಿಖೆಗಾಗಿ ಸಮನ್ವಯ ಸಮಿತಿ ರಚಿಸಿದ್ದು, ನನ್ನನ್ನೂ ಸದಸ್ಯನನ್ನಾಗಿಸಿದ್ದಾರೆ. 2 ತಿಂಗಳಲ್ಲಿ ಹಗರಣಗಳ ತನಿಖೆ ನಡೆಸಿ ವರದಿ ನೀಡುವಂತೆ ಮುಖ್ಯಮಂತ್ರಿ ತಾಕೀತು ಮಾಡಿದ್ದಾರೆ ಎಂದು ತಿಳಿಸಿದರು.

ಸಿಎಂ ಬದಲಾವಣೆ ಹೇಳಿಕೆ ಬಗ್ಗೆ ಡಿಕೆಶಿ 
ಕ್ರಮ ಕೈಗೊಳ್ಳುತ್ತಾರೆ: ಪರಮೇಶ್ವರ್‌
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಚರ್ಚೆ ಅನಗತ್ಯ ಎನ್ನುವುದು ನನ್ನ ವೈಯಕ್ತಿಕ ಭಾವನೆ. ಹೇಳಿಕೆ ಕೊಟ್ಟವರ ಬಗ್ಗೆ ಅಧ್ಯಕ್ಷರು ಗಮನಹರಿಸಲಿದ್ದಾರೆ. ಅಧ್ಯಕ್ಷರು ಅಮೆರಿಕದಿಂದ ಬರಲಿ. ಏನು ಕ್ರಮ ತೆಗೆದುಕೊಳ್ಳುತ್ತಾರೋ ನೋಡೋಣ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ ಸುದ್ದಿಗಾರರಿಗೆ ತಿಳಿಸಿದರು.

ಸಿಎಂ ಸ್ಥಾನದ ಬಗ್ಗೆ ಅನಗತ್ಯ ಚರ್ಚೆಯಾಗುತ್ತಿದೆ. ಆಡಳಿತ ಮಾಡಬೇಕು, ಕೊಟ್ಟ ಭರವಸೆ ಈಡೇರಿಸಬೇಕು. ಇದು ನಮ್ಮ ಆದ್ಯತೆ. ಈ ಮಧ್ಯೆ ಬಿಜೆಪಿ ದ್ವೇಷದ ರಾಜಕೀಯ ಮಾಡುತ್ತಿದೆ. ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆದಿದೆ, ಗ್ಯಾರಂಟಿ ಅನುಷ್ಠಾನ ಬೇಡ ಅಂತ ಮಾಡುತ್ತಿದ್ದಾರೆ. ಇದನ್ನು ಬದಿಗೊತ್ತಿ ನಾವು ಕೆಲಸ ಮಾಡಬೇಕಿದೆ ಎಂದರು.

ಮುಂದಿನ ಸಿಎಂ ಪರಂ!
ಪರಮೇಶ್ವರ್‌ ಮುಂದಿನ ಸಿಎಂ ಅಂತ ಬೆಂಬಲಿಗರು ಘೋಷಣೆ ಕೂಗಿದ ಪ್ರಸಂಗ ಸದಾಶಿವನಗರದಲ್ಲಿರುವ ಗೃಹಸಚಿವರ ನಿವಾಸದ ಬಳಿ ನಡೆಯಿತು. ಆಗ ಪರಮೇಶ್ವರ “ಸುಮ್ಮನೆ ಇರ್ರೀ’ ಎಂದು ಗದರಿದರು.

ಟಾಪ್ ನ್ಯೂಸ್

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.