School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್ ಆಧಾರಿತ ಹಾಜರಾತಿ?
Team Udayavani, Sep 22, 2024, 7:30 AM IST
ಬೆಂಗಳೂರು: ಸರಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳ ಹಾಜರಾತಿ ದಾಖಲಾತಿಗೆ ಆ್ಯಪ್ ಆಧಾರಿತ ವಿಧಾನ ಅಳವಡಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮುಂದಾಗಿದ್ದು, ಈ ಬಗ್ಗೆ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಿದೆ. ಸರಕಾರ ಇದಕ್ಕೆ ಸಮ್ಮತಿಸಿದರೆ ಶೀಘ್ರ ಶಾಲೆಗಳಲ್ಲಿ ಶಿಕ್ಷಕರು ಹಾಜರಿ ಕರೆಯುವ ಸಂಪ್ರದಾಯ ಹೋಗಿ ಆ್ಯಪ್ ಮೂಲಕ ಮಕ್ಕಳ ಹಾಜರಿ ಗುರುತು ಮಾಡುವ ಪದ್ಧತಿ ಬರಲಿದೆ.
ಸದ್ಯ ಪ್ರತೀ ಜಿಲ್ಲೆಯ ತಲಾ ಒಂದು ಸರಕಾರಿ ಶಾಲೆಯಲ್ಲಿ ಈ ವಿಧಾನ ಪ್ರಾಯೋಗಿಕವಾಗಿ ಜಾರಿಯಲ್ಲಿದ್ದು, ಯಶಸ್ಸು ಕಂಡಿದೆ. ಆದ್ದರಿಂದ ರಾಜ್ಯಾದ್ಯಂತ ವಿಸ್ತರಿಸಲು ಇಲಾಖೆ ಉತ್ಸುಕವಾಗಿದೆ. ಶಾಲೆಗಳಲ್ಲಿ ಆ್ಯಪ್ ಮೂಲಕ ಹಾಜರಿ ಗುರುತು ಮಾಡುವುದರಿಂದ ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಹೆಚ್ಚಳ ಆಗಲಿದೆ. ಶಿಕ್ಷಣದ ಗುಣಮಟ್ಟವೂ ಸುಧಾರಿಸ ಲಿದೆ ಎಂದು ಇಲಾಖೆಯ ಅಧಿಕಾರಿ ಗಳು ಹೇಳಿದ್ದಾರೆ.
ಶಿಕ್ಷಕರಿಗೂ? ಶಿಕ್ಷಕರ ಹಾಜರಾತಿಯನ್ನು ಕೂಡ ಆ್ಯಪ್ ಅಥವಾ ಬಯೋಮೆಟ್ರಿಕ್ ಮೂಲಕ ಸಂಗ್ರಹಿಸಬೇಕು ಮತ್ತು ಅವರಿಗೂ ಜಿಯೋ ಫೆನ್ಸಿಂಗ್ ವ್ಯವಸ್ಥೆ ಜಾರಿಗೊಳಿಸಬೇಕು ಎಂಬ ಬಗ್ಗೆಯೂ ಶಿಕ್ಷಣ ಇಲಾಖೆಯಲ್ಲಿ ಚರ್ಚೆ ನಡೆಯುತ್ತಿದೆ.
ಪ್ರಸ್ತುತ 1ರಿಂದ 9ನೇ ತರಗತಿಯವರೆಗೆ ಮಕ್ಕಳನ್ನು ಅನುತ್ತೀರ್ಣಗೊಳಿಸುವಂತಿಲ್ಲ. ಆದರೆ 10ನೇ ತರಗತಿ ಯಲ್ಲಿ ಶೇ. 75ರಷ್ಟು ಹಾಜರಾತಿ ಇಲ್ಲದಿದ್ದರೆ ಮಕ್ಕಳು ಪರೀಕ್ಷೆಗೆ ಕುಳಿತುಕೊಳ್ಳುವಂತಿಲ್ಲ. 9ನೇ ತರಗತಿಯ ತನಕ ಕಟ್ಟುನಿಟ್ಟಿನ ಹಾಜರಾತಿ ಕ್ರಮಗಳಿಲ್ಲದ ಹಿನ್ನೆಲೆ ಯಲ್ಲಿ ಶಾಲೆಗೆ ಬರಲು ಉದಾಸೀನ ಮಾಡುವ ಮಕ್ಕಳು 10ನೇ ತರಗತಿಯಲ್ಲಿಯೂ ಅದೇ ಧೋರಣೆ ಮುಂದುವರಿಸುತ್ತಾರೆ. ಇದರಿಂದ ಕೊನೆಗೆ ಸಾವಿರಾರು ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆ ಬರೆಯುವುದರಿಂದ ವಂಚಿತರಾಗುತ್ತಾರೆ. ಆದ್ದರಿಂದ ಕಿರಿಯ ತರಗತಿಗಳಲ್ಲೇ ಮಕ್ಕಳಲ್ಲಿ ಹಾಜರಾತಿ ಅಗತ್ಯದ ಬಗ್ಗೆ ಅರಿವು ಮತ್ತು ಕಟ್ಟು ನಿಟ್ಟಿನ ಭಾವನೆ ಮೂಡಿಸಲು ಆ್ಯಪ್ ಮೂಲಕ ಹಾಜರಿ ಗುರುತು ಮಾಡುವ ಕ್ರಮ ಉಪಯುಕ್ತವಾಗಲಿದೆ ಎಂದು ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು ಹೇಳುತ್ತಾರೆ.
ನೈಜ ಸಮಯದಲ್ಲಿ ಹಾಜರಾತಿ
ಸದ್ಯ ಜಾರಿಯಲ್ಲಿರುವ ವಿದ್ಯಾರ್ಥಿ ಸಾಧನಾ ನಿಗಾ ವ್ಯವಸ್ಥೆ (ಎಸ್ಟಿಟಿಎಸ್)ಯಲ್ಲಿ ಸಾಕಷ್ಟು ನ್ಯೂನತೆಗಳಿವೆ. ಶಾಲೆಯಲ್ಲಿ ದಾಖಲಾತಿ ಆಗಿರುವ ವಿದ್ಯಾರ್ಥಿಗಳ ಸಂಖ್ಯೆಗೂ ಶಾಲೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಗೂ ವ್ಯತ್ಯಾಸ ಕಂಡುಬರುತ್ತಿವೆ. ಆ್ಯಪ್ ಆಧಾರಿತ ಹಾಜರಿಯಲ್ಲಿ ನಾವು ನೈಜ ಸಮಯದಲ್ಲಿ ವಿದ್ಯಾರ್ಥಿಗಳ ಹಾಜರಿಯನ್ನು ಪಡೆಯಬಹುದು ಎಂದು ಅಧಿಕಾರಿಗಳು ಹೇಳುತ್ತಾರೆ.
ಆ್ಯಪ್ ಆಧಾರಿತ ಹಾಜರಾತಿ ಪ್ರಯೋಗ ಯಶಸ್ವಿಯಾಗಿದೆ. ಈ ಪದ್ಧತಿಯಲ್ಲಿ ಶತ ಪ್ರತಿಶತ ನಿಖರತೆ ಸಾಧ್ಯ. ಈ ಯೋಜನೆ ಜಾರಿಗೊಳಿಸಲು ಶಿಕ್ಷಣ ಸಚಿವರು ವಿಶೇಷ ಮುತುವರ್ಜಿ ವಹಿಸಿದ್ದಾರೆ. ಸರಕಾರ ಒಪ್ಪಿಕೊಂಡರೆ ಶೀಘ್ರವೇ ರಾಜ್ಯಾದ್ಯಂತ ಎಲ್ಲ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಯೋಜನೆ ಜಾರಿಗೆ ಬರಲಿದೆ.
-ರಿತೇಶ್ ಕುಮಾರ್ ಸಿಂಗ್, ಪ್ರಧಾನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ
Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!
World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ?
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.