World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

ಉಡುಪಿ ಜಿಲ್ಲೆ 234 ಕಿ.ಮೀ. ಮಾನವ ಸರಪಳಿ; ಅತೀ ಉದ್ದದ್ದು ಎಂಬ ಹೆಗ್ಗಳಿಕೆ

Team Udayavani, Sep 22, 2024, 6:55 AM IST

1-qwewqwqe

ಬೆಂಗಳೂರು: ಪ್ರಜಾ ಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲ ಪಡಿಸುವ ಉದ್ದೇಶದಿಂದ ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರವು ಪ್ರಜಾಪ್ರಭುತ್ವ ದಿನಾ ಚರಣೆ ಅಂಗವಾಗಿ ಇತ್ತೀಚೆಗೆ ರಾಜ್ಯವ್ಯಾಪಿ ಹಮ್ಮಿ ಕೊಂಡಿದ್ದ ಮಾನವ ಸರಪಳಿ ಕಾರ್ಯಕ್ರಮ ವಿಶ್ವದಾಖಲೆ ಪುಟ ಸೇರು ವುದರ ಜತೆಗೆ ದೇಶಕ್ಕೆ ಹೊಸ ಸಂದೇಶವನ್ನು ರವಾನಿಸುವಲ್ಲಿ ಯಶಸ್ವಿಯಾಗಿದೆ.

ಸಂವಿಧಾನದ ಆಶಯಗಳನ್ನು ಗಟ್ಟಿ ಗೊಳಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ಮಾನವ ಸರಪಳಿ ಕಾರ್ಯಕ್ಕೆ ಇಡೀ ದೇಶ ಹೆಮ್ಮೆಪಟ್ಟಿದ್ದು, ಆ ಮೂಲಕ ಸರಕಾರದ ಉದ್ದೇಶ ಸಾರ್ಥಕವಾಗಿದೆ. ಒಂದಾಗಿ ಬಾಳುವ ಮಂತ್ರವನ್ನು ಪಠಿಸುವುದರ ಜತೆಗೆ ವೈವಿಧ್ಯ ದಲ್ಲಿ ಏಕತೆಯ ಸಂದೇಶ ವನ್ನು ಇಡೀ ಮನು ಕುಲಕ್ಕೆ ಸಾರಿದೆ.

ಸೆ. 15ರಂದು ಬೀದರ್‌ನಿಂದ ಚಾಮ ರಾಜ ನಗರದವರೆಗೆ ಮಾನವ ಸರಪಳಿ ಸೃಷ್ಟಿಯಾಗಿ ಕುವೆಂಪು ಅವರ “ಮನುಷ್ಯ ಜಾತಿ ತಾನೊಂದೇ ವಲಂ’ ಸಂದೇಶವನ್ನು ಇಡೀ ವಿಶ್ವಕ್ಕೆ ನೆನಪಿಸಿತು. ಸುಮಾರು 2,500 ಕಿ.ಮೀ. ಮಾನವ ಸರಪಳಿ ನಿರ್ಮಿಸಿ “ನಾವೆಲ್ಲರೂ ಒಂದೇ’ ಎಂಬ ಸಂದೇಶವನ್ನು ಎಲ್ಲೆಡೆ ಪಸರಿಸಲಾಯಿತು.

ಶಾಲಾ ಕಾಲೇಜು ಮಕ್ಕಳಿಂದ ಹಿಡಿದು ಹಿರಿಯರವರೆಗೆ 25 ಲಕ್ಷಕ್ಕೂ ಹೆಚ್ಚು ಮಂದಿ ಮಾನವ ಸರಪಳಿಯಲ್ಲಿ ಭಾಗವಹಿಸಿ ವಿಶ್ವದಾಖಲೆ ಪುಟ ಸೇರುವಂತೆ ಮಾಡಿದರು.

ಸರಕಾರಕ್ಕೆ ವಿಶ್ವ ದಾಖಲೆ ಆರಂಭಿಕ ಪುರಸ್ಕಾರ
ಮಾನವ ಸರಪಳಿ ಹಬ್ಬದಲ್ಲಿ ಸಮಾಜ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಶಿಕ್ಷಣ ಇಲಾಖೆ ಸಹಿತ 8 ಇಲಾಖೆಗಳು ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದವು. ಉಳಿದ 25ಕ್ಕೂ ಹೆಚ್ಚು ಇಲಾಖೆಗಳು ನಾನಾ ರೀತಿಯಲ್ಲಿ ತಮ್ಮದೇ ಸಹಭಾಗಿತ್ವ ನೀಡಿ ಸರಕಾರದ ಸದುದ್ದೇಶವನ್ನು ಸಫ‌ಲಗೊಳಿಸಿದವು. 25 ಲಕ್ಷಕ್ಕೂ ಹೆಚ್ಚು ಮಂದಿ ಹೆಸರು ನೋಂದಾಯಿಸಿ ಮಾನವ ಸರಪಳಿಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

ಇಂಥ ಯಶಸ್ವಿ ಪ್ರಯೋಗ ವಿಶ್ವದಲ್ಲೇ ಪ್ರಥಮ ಬಾರಿಗೆ ನಡೆದಿದ್ದು, ಇದಕ್ಕೆ ವಿಶ್ವ ದಾಖಲೆ ಆರಂಭಿಕ ಪುರಸ್ಕಾರ ಲಭಿಸಿದೆ. ಲಂಡನ್‌ನಲ್ಲಿರುವ ವಿಶ್ವ ದಾಖಲೆ ಸಂಸ್ಥೆಯ ಕರ್ನಾಟಕ ಪ್ರತಿನಿಧಿ ಶೈಲಜಾ ಅವರು ಬೆಂಗಳೂರಿನಲ್ಲಿ ನಡೆದ ಬೃಹತ್‌ ಹಾಗೂ ವರ್ಣರಂಜಿತ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರ ಹೆಸರಿನಲ್ಲಿ ಪುರಸ್ಕಾರ ನೀಡಿ ಗೌರವಿಸಿದರು.

ಮೆಚ್ಚುಗೆಗೆ ಪಾತ್ರವಾದ ಜಿಲ್ಲೆಗಳು
ರಾಜ್ಯದ 31 ಜಿಲ್ಲೆಗಳ ಪೈಕಿ ಗದಗ ಜಿಲ್ಲೆಯಲ್ಲಿ 2,18,891 ಮಂದಿ ಭಾಗವಹಿಸಿದ್ದು, ಅತೀ ಹೆಚ್ಚು, ಶೇ. 21 ಜನರ ಭಾಗವಹಿಸುವಿಕೆಯೊಂದಿಗೆ ಮುಂಚೂಣಿ ಜಿಲ್ಲೆ ಎಂಬ ಹೆಗ್ಗಳಿಕೆ ಪಾತ್ರವಾಯಿತು. ಉಡುಪಿ ಜಿಲ್ಲೆಯಲ್ಲಿ 234 ಕಿ.ಮೀ. ಉದ್ದದ ಮಾನವ ಸರಪಳಿ ನಿರ್ಮಿಸಿದ್ದು, ಇದು ಅತೀ ಉದ್ದದ ಮಾನವ ಸರಪಳಿ ಎಂಬ ಹೆಗ್ಗಳಿಕೆ ಗಳಿಸಿದೆ.

ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ವಿಶೇಷ ವಿನ್ಯಾಸದ ಹಾಗೂ ವಿಭಿನ್ನ ಸಂದೇಶಗಳನ್ನು ಸಾರುವ ಉಡುಗೆ-ತೊಡುಗೆ, ವೇಷಭೂಷಣ ಹಾಗೂ ಕಲಾ ಪ್ರಕಾರಗಳ ಬಳಕೆ ಮಾಡಿ ಪ್ರಜಾಪ್ರಭುತ್ವದ ಮಹತ್ವ ಸಾರಲಾಯಿತು. ಸಂವಿಧಾನದ ಪೀಠಿಕೆ ಓದಿ ಜಾಗೃತಿ ಮೂಡಿಸಲಾಯಿತು. ಐತಿಹಾಸಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯ ವ್ಯಾಪಿ ಸುಮಾರು 10 ಲಕ್ಷ ಗಿಡಗಳನ್ನು° ನೆಡಲಾಯಿತು. ರಾಜಧಾನಿ ಬೆಂಗಳೂರಿನಲ್ಲಿ ಹೊಸಕೋಟೆಯಿಂದ ಹೆಜ್ಜಾಲದ ವರೆಗೆ 60 ಸಾವಿರ ಜನರಿಂದ 92 ಕಿ.ಮೀ. ಮಾನವ ಸರಪಳಿ ಸೃಷ್ಟಿಸಿ ಪ್ರಜಾಪ್ರಭುತ್ವ ಗಟ್ಟಿಗೊಳಿಸುವ ಕಾರ್ಯಕ್ಕೆ ಕೈ ಜೋಡಿಸಲಾಯಿತು.

ಟಾಪ್ ನ್ಯೂಸ್

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.