ಜು. 23ರಂದು ಬೆಂಗಳೂರು ಬಂಟರ ಭವನದಲ್ಲಿ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ

ಸಿಎಂ ಸಿದ್ದರಾಮಯ್ಯ, ಸ್ಟಾರ್ ನಟರು ಸೇರಿ ಗಣ್ಯರು ಭಾಗಿ

Team Udayavani, Jul 21, 2023, 7:08 PM IST

1-sadds

ಬೆಂಗಳೂರು: ವಿಶ್ವ ಕುಂದಾಪುರ ಕನ್ನಡ ದಿನಾಚರಣೆ ಹಿನ್ನಲೆಯಲ್ಲಿ ಬೆಂಗಳೂರಿನ ಬಂಟರ ಸಂಘದ ಭವನದಲ್ಲಿ ಜು. 23ರಂದು ಭಾನುವಾರ ‘ವಿಶ್ವ ಕುಂದಾಪುರ ಕನ್ನಡ ದಿನ’ವನ್ನು ಆಚರಣೆ ಮಾಡಲಾಗುತ್ತಿದೆ.

ವಿಜಯನಗರದ ಅತ್ತಿಗುಪ್ಪೆಯ ಬಂಟರ ಸಂಘದ ಭವನದಲ್ಲಿ ಬೆಳಗ್ಗೆ 9ರಿಂದ ರಾತ್ರಿ 9ರ ವರೆಗೆ ಸಮಾರಂಭ ನಡೆಯಲಿದೆ. ಕಾರ್ಯಕ್ರಮವನ್ನು ಕಂಬಳ ಕ್ಷೇತ್ರದ ಧುರೀಣ ಶಾಂತರಾಮ ಶೆಟ್ಟಿ ಬಾರ್ಕೂರು ಅವರು ಉದ್ಘಾಟಿಸಲಿದ್ದಾರೆ. ಈ ವೇಳೆ ಕುಂದಾಪುರ ಶಾಸಕ ಕಿರಣ್ ಕುಮಾರ್​ ಕೊಡ್ಗಿ ಮತ್ತು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭಾಗವಹಿಸಲಿದ್ದಾರೆ.

ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಶಾಸಕ ಎಂ. ಕೃಷ್ಣಪ್ಪ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ ಹೆಗ್ಡೆ, ಬೆಂಗಳೂರು ಬಂಟರ ಸಂಘ ಅಧ್ಯಕ್ಷ ಎಂ. ಮುರಳೀಧರ ಹೆಗ್ಡೆ ಸೇರಿ ಗಣ್ಯರು ಉಪಸ್ಥಿತರಿರಲಿದ್ದಾರೆ.

ಸಮಾರಂಭದಲ್ಲಿ ಕನ್ನಡ ಚಿತ್ರರಂಗದ ಸ್ಟಾರ್ ನಟ-ನಿರ್ದೇಶಕ ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ. ಪ್ರೊ.ಎ.ವಿ.ನಾವಡ ಮತ್ತು ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರನ್ನು ಗೌರವಿಸಲಾಗುತ್ತದೆ.

ಇದು ಐದನೇ ವಿಶ್ವ ಕುಂದಾಪುರ ಕನ್ನಡ ದಿನವಾಗಿದ್ದು, ಈ ಸಲ ಇನ್ನಷ್ಟು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಸಮಾನಮನಸ್ಕ ಗೆಳೆಯರ ಸಾರಥ್ಯದಲ್ಲಿ ‘ಕುಂದಾಪ್ರ ಕನ್ನಡ ಪ್ರತಿಷ್ಠಾನ, ಬೆಂಗಳೂರು’ ಎಂಬ ವೇದಿಕೆಯಡಿ ಸಮಾರಂಭ ಆಯೋಜಿಸಲಾಗಿದೆ. ಕುಂದಾಪ್ರ ಕನ್ನಡ ಹಬ್ಬದ ಕುರಿತು ನಡೆದ ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಅಧ್ಯಕ್ಷ ದೀಪಕ್ ಶೆಟ್ಟಿ ಬಾರ್ಕೂರು ಮಾಹಿತಿ ನೀಡಿದರು.

ಕುಂದಾಪುರ ನೆಲಮೂಲದ ಭಾಷಾ ಸಂಪತ್ತು, ಆಚಾರ-ವಿಚಾರ, ಕಲೆ, ಕ್ರೀಡೆ, ವೈವಿಧ್ಯಮಯ ಆಹಾರ ಮುಂತಾದ ಕುಂದಾಪುರ ಜನಜೀವನ, ಸಾಂಸ್ಕೃತಿಕ ಹಿರಿಮೆಯನ್ನು ವಿಶ್ವಕ್ಕೆ ಸಾರುವ ಜೊತೆಗೆ ಇಲ್ಲಿ ನೆಲೆಸಿರುವ ಕುಂದಗನ್ನಡಿಗರ ಅಪರೂಪದ ಸಮ್ಮಿಲನಕ್ಕೆ ವೇದಿಕೆ ಕಲ್ಪಿಸುವ ಉತ್ಸವವಾಗಿದೆ. ಬೆಂಗಳೂರಿನಲ್ಲಿ ಲಕ್ಷಾಂತರ ಕುಂದಗನ್ನಡಿಗರಿದ್ದು ತಮ್ಮ ತಾಯಿಬೇರಿನ ಜೊತೆಗಿನ ಅನುಬಂಧವನ್ನು ಕಡಿದುಕೊಳ್ಳದೆ ಜತನದಿಂದ ಕಾಪಿಟ್ಟುಕೊಂಡಿದ್ದಾರೆ. ಇವರೆಲ್ಲರನ್ನೂ ಒಂದೇ ಸೂರಿನಡಿ ನೋಡುವ, ಅಪರೂಪದ ಕಲಾವಿದರಿಗೆ ವೇದಿಕೆ ಕೊಡುವ, ಮರೆಯಾಗುತ್ತಿರುವ ಗ್ರಾಮೀಣ ಕ್ರೀಡೆಗಳನ್ನು ಮೆಲುಕು ಹಾಕುವ ಹಾಗು ಸಂಸ್ಕೃತಿ ವಿನಿಮಯದಂತಹ ಸದುದ್ದೇಶವನ್ನು ಕುಂದಾಪ್ರ ಕನ್ನಡ ಹಬ್ಬವು ಹೊಂದಿದೆ ಎಂದು ಅವರು ತಿಳಿಸಿದರು.

ಸಾಂಸ್ಕೃತಿಕ ಸಡಗರ
ಕುಂದಾಪ್ರ ಕನ್ನಡ ಹಬ್ಬದಲ್ಲಿ ಭಾಗವತ ರಾಘವೇಂದ್ರ ಜನ್ಸಾಲೆಯವರ ನೇತೃತ್ವದಲ್ಲಿ ಪ್ರಸಿದ್ಧ ಕಲಾವಿದರಿಂದ ʼಬೇಡರ ಕಣ್ಣಪ್ಪʼ ಎನ್ನುವ ಯಕ್ಷಗಾನ ಪ್ರಸಂಗ, ಕಲಾಕದಂಬ ಆರ್ಟ್ಸ್ ಅವರಿಂದ ʼವೀರ ಬರ್ಬರಿಕʼ ಯಕ್ಷಗಾನ ಪ್ರಸಂಗ, ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಕಲಾವಿದರಿಂದ ʼಬಿಡುವನೇ ಬ್ರಹ್ಮಲಿಂಗʼ ಎನ್ನುವ ನೃತ್ಯ ರೂಪಕ, ಕಿರುತೆರೆ ಖ್ಯಾತಿಯ ಶ್ರಾವ್ಯ ಮರವಂತೆ, ಸಮೃದ್ಧಿ ಕುಂದಾಪುರ, ಪ್ರೀತಂ ಅವರ ʼಚಿತ್ರಪಟ ರಾಮಾಯಣʼ ಎಂಬ ಕಿರುನಾಟಕ ಪ್ರದರ್ಶನ ಇರಲಿದೆ. ಸಾಸ್ತಾನದ ಖ್ಯಾತ ನಾಟಕ ತಂಡ ಅಲ್ವಿನ್ ಅಂದ್ರಾದೆ ಮತ್ತು ಸಹಕಲಾವಿದರ ತಿಳಿ ಹಾಸ್ಯ ಪ್ರಹಸನ, ಟೀಂ ಕುಂದಾಪುರಿಯನ್ಸ್ ಅವರ ʼಮಿಂಚುಳ: ಇದ್ ಕತ್ಲಿ-ಬೆಳಗಿನ ಕಥಿʼ ಎಂಬ ವಿಶೇಷ ನಾಟಕ ಪ್ರದರ್ಶನಗೊಳ್ಳಲಿದೆ.

ಉಪನ್ಯಾಸಕಿ ರೇಖಾ ಬಿ. ಬನ್ನಾಡಿ, ಉಪೇಂದ್ರ ಶೆಟ್ಟಿ, ಕವಿ ಎಚ್. ಡುಂಡಿರಾಜ್ ಅವರ ಭಾಷೆಯ ಬಹು ಆಯಾಮದ ಬಗ್ಗೆ ಮಾತು- ನುಡಿಚಾವಡಿ, ಜನಪ್ರಿಯ ಗಾಯಕರನ್ನು ಒಳಗೊಂಡ ಸ್ವರ ಕುಂದಾಪುರ ತಂಡದ ʼಕಾಡುವ ಹಾಡುಗಳ ಕಲರವʼ, ಕುಂದಾಪ್ರ ಕನ್ನಡದ ಖ್ಯಾತ ವಾಗ್ಮಿ ಮನು ಹಂದಾಡಿಯವರ ʼಲಘು ಧಾಟಿಯ ಬಿಗು ಭಾಷಣʼ ಹಾಗೂ ಇನ್ನಿತರ ಮನರಂಜನೀಯ ಕಾರ್ಯಕ್ರಮಗಳು ನಡೆಯಲಿದೆ.

ಕರಾವಳಿಯ ಅಪರೂಪದ ಗ್ರಾಮೀಣ ಕ್ರೀಡೆಗಳನ್ನು ಆಯೋಜಿಸಲಾಗಿದ್ದು ವಯಸ್ಕರಿಗಾಗಿ ಹಗ್ಗ ಜಗ್ಗಾಟ, ದಂಪತಿಗಳಿಗಾಗಿ ಪ್ರತ್ಯೇಕ ಕ್ರೀಡೆಗಳು, ಮಕ್ಕಳಿಗೆ ಹೂವಾಡಗಿತ್ತಿ, ಸೈಕಲ್ ಟೈರ್ ಓಟ, ಹಣೆಬೊಂಡ ಓಟ, ಗಿರ್ಗಿಟ್ಲಿ ಓಟ, ಚಿತ್ರಕಲೆ, ಮಹಿಳೆಯರಿಗೆ ಹಲಸಿನ ಕೊಟ್ಟೆ ಕಟ್ಟುವುದು, ಮಡ್ಲ್ ನೆಯ್ಯುವುದು ಇನ್ನಿತರ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಕುಂದಾಪುರದ ನುರಿತ ಬಾಣಸಿಗರು ಸ್ಥಳದಲ್ಲೇ ತಯಾರಿಸುವ ಹಾಲುಬಾಯಿ, ಕೊಟ್ಟೆ ಕಡುಬು, ಗೋಳಿಬಜೆ, ಬನ್ಸ್, ಸುಕ್ಕಿನುಂಡೆ, ಎಳ್ ಬಾಯ್ರ್, ಹೆಸ್ರು ಬಾಯ್ರ್ ನಂತಹ ವಿವಿಧ ಪಾನಕಗಳು, ಹಬ್ಬದ ವಿಶೇಷ ತರಕಾರಿ ಊಟ, ಇಡ್ಲಿ, ಕುಂದಾಪ್ರ ಕೋಳಿ ಸುಕ್ಕ, ಬಿರಿಯಾನಿ, ಚಟ್ಲಿ ಸಾರು ಇನ್ನಿತರ ಅಪರೂಪದ ಖಾದ್ಯ-ವೈವಿಧ್ಯಗಳು ಆಕರ್ಷಣೆಯಾಗಲಿವೆ.

ಕುಂದಾಪ್ರ ಕನ್ನಡ ಪ್ರತಿಷ್ಠಾನದ ಗೌರವಾಧ್ಯಕ್ಷ ಪ್ರಮೋದಚಂದ್ರ ಭಂಡಾರಿ, ಉಪಾಧ್ಯಕ್ಷ ನರಸಿಂಹ ಬೀಜಾಡಿ, ಕಾರ್ಯದರ್ಶಿ ರಾಘವೇಂದ್ರ ಕಾಂಚನ್, ಕೋಶಾಧಿಕಾರಿ ವಿಜಯ್ ಶೆಟ್ಟಿ ಹಾಲಾಡಿ, ಜಂಟಿ ಕಾರ್ಯದರ್ಶಿ ಅಜಿತ್ ಶೆಟ್ಟಿ ಉಳ್ತೂರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

12-epson

Epson ಇಕೊ ಟ್ಯಾಂಕ್ ಪ್ರಿಂಟರ್: ರಶ್ಮಿಕಾ ಮಂದಣ್ಣ ಅಭಿಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.