Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ
ಆಯುಧ ಪೂಜೆ ದಿನವೇ ಸಿಹಿ ಸುದ್ದಿ.. ವಿಜಯ ದಶಮಿ ದಿನ ರಾಜ ಪೀಠದ ವಿಧಿ ವಿಧಾನ ನಡೆಸುವುದು ಹೇಗೆ?
Team Udayavani, Oct 11, 2024, 6:52 PM IST
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮೈಸೂರು ರಾಜವಂಶದಲ್ಲಿ ಸಂಭ್ರವನ್ನು ಡಬಲ್ ಮಾಡಿದೆ. ರಾಜವಂಶಸ್ಥ, ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಎರಡನೇ ಪುತ್ರೋತ್ಸವದ ಸಂಭ್ರಮ ಮನೆ ಮಾಡಿದೆ. ಆಯುಧ ಪೂಜೆ ದಿನವಾದ ಶುಕ್ರವಾರ(ಅ11) ತ್ರಿಷಿಕಾ ಕುಮಾರಿ ಅವರು ಎರಡನೇ ಪುತ್ರನಿಗೆ ಜನ್ಮ ನೀಡಿದ್ದಾರೆ.
ದಸರಾ ವೇಳೆಯೇ ರಾಜಮನೆತನ ಸಂಭ್ರಮ ಆಚರಿಸುತ್ತಿದ್ದು, ತ್ರಿಷಿಕಾ ಕುಮಾರಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.
ವಿಧಿವಿಧಾನಗಳು ಹೇಗೆ?
ಪುತ್ರನ ಜನನವಾದ ಕಾರಣ ಯದುವೀರ್ ಅವರಿಗೆ ಜಾತ ಶೌಚ (ವೃದ್ಧಿ) ಆಚರಿಸಬೇಕಾಗಿದ್ದು, ಅರಮನೆಯಲ್ಲಿ ನಡೆಯಬೇಕಾಗಿರುವ ಧಾರ್ಮಿಕ ವಿಧಿಗಳಿಗೆ ಯಾವುದೇ ಅಡಚಣೆ ಇಲ್ಲ ಎಂದು ಹೇಳಲಾಗಿದೆ. ಆಗಮಿಕರು ಪೂಜೆ ಮಾಡಲಿದ್ದು, ಯದುವೀರ್ ಅವರು ಈಗಾಗಲೇ ಕಂಕಣ ಧಾರಣೆ ಮಾಡಿದ್ದಾರೆ. ವಿಜಯದಶಮಿ ಜಂಬೂ ಸವಾರಿ ಯಾತ್ರೆ ಮುಗಿಯುವವರೆಗೆ ಯಾವುದೇ ಜಾತ ಶೌಚ ಅನ್ವಯವಾಗುವುದಿಲ್ಲ ಎಂದು ಪಂಡಿತರು ತಿಳಿಸಿದ್ದಾರೆ.
ನಾಳೆಯೂ(ವಿಜಯ ದಶಮಿ) ಯದುವೀರ್ ಅವರು ಕಂಕಣ ಸಹಿತ ಅಪರಾಚಿತ ಪೂಜೆ, ಶಮಿ ವೃಕ್ಷಕ್ಕೆ ಪೂಜೆ ಮಾಡಬೇಕಾಗಿದೆ ಎಂದು ಪುರೋಹಿತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಸಾಮಾನ್ಯವಾಗಿ ಆಯುಧ ಪೂಜೆಯ ರಾತ್ರಿ ಕಂಕಣವನ್ನು ತೆಗೆಯುವ ಕ್ರಮವಿದೆ.
2016 ರಲ್ಲಿ ಯದುವೀರ್ ಒಡೆಯರ್ ಅವರು ರಾಜಸ್ಥಾನದ ಡುಂಗರ್ಪುರ ರಾಜಮನೆತನದ ಹರ್ಷವರ್ಧನ್ ಸಿಂಗ್ ಮತ್ತು ಮಹೇಶ್ರಿ ಕುಮಾರಿ ಅವರ ಪುತ್ರಿ ತ್ರಿಷಿಖಾ ಕುಮಾರಿ ದೇವಿ ಅವರನ್ನು ವಿವಾಹವಾಗಿದ್ದರು. 2017 ಡಿಸೆಂಬರ್ 6 ರಂದು ಮೊದಲ ಪುತ್ರನಿಗೆ ಜನ್ಮ ನೀಡಿದ್ದರು. ಆದ್ಯವೀರ್ ನರಸಿಂಹರಾಜ ಒಡೆಯರ್ ಎಂಬ ಹೆಸರು ಮೊದಲ ಮಗನಿಗೆ ಇಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು
Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ
Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು
Thirthahalli: ವ್ಯವಹಾರದಲ್ಲಿ ನಷ್ಟ, ಉಡುಪಿ ಮೂಲದ ವ್ಯಕ್ತಿ ತೀರ್ಥಹಳ್ಳಿಯಲ್ಲಿ ನೇಣಿಗೆ ಶರಣು
Tragedy: ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತ… ಸಾವಿನಲ್ಲೂ ಒಂದಾದ ಅಕ್ಕ-ತಮ್ಮ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Agniveer; ಫೈರಿಂಗ್ ತರಬೇತಿ ವೇಳೆ ಪ್ರಾಣಕಳೆದುಕೊಂಡ ಇಬ್ಬರು ಅಗ್ನಿವೀರ್ ಗಳು
UN posts ಮೇಲೆಯೇ ಇಸ್ರೇಲ್ ದಾಳಿ! ; 600 ಭಾರತೀಯ ಸೈನಿಕರು ಅಪಾಯದಲ್ಲಿ!!
Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು
Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ
Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.