![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jul 28, 2024, 11:40 PM IST
ಬೆಂಗಳೂರು: ಯಕ್ಷಗಾನ ಅಕಾಡೆಮಿಯನ್ನು ಪ್ರಾಧಿಕಾರವನ್ನಾಗಿ ಮಾಡಿ 50 ಕೋ.ರೂ. ಅನುದಾನದ ಬೇಡಿಕೆ ಕುರಿತು ಮುಖ್ಯಮಂತ್ರಿಗಳ ಹಾಗೂ ಅಧಿಕಾರಿಗಳ ಜತೆ ಚರ್ಚಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ವಿಧಾನಪರಿಷತ್ತಿನಲ್ಲಿ ಸದಸ್ಯ ಡಾ| ಮಂಜುನಾಥ ಭಂಡಾರಿ ಯಕ್ಷಗಾನ ಅಕಾಡೆಮಿಯನ್ನು ಪ್ರಾಧಿಕಾರವಾಗಿಸುವಂತೆ ಸಲಹೆ ನೀಡಿದ್ದರು. ಸಚಿವರು ಉತ್ತರಿಸಿ, ಕರ್ನಾಟಕ ಜನಪದ ಅಕಾಡೆಮಿಯಿಂದ ಪ್ರತ್ಯೇಕಿಸಿ ಯಕ್ಷಗಾನ ಅಕಾಡೆಮಿ ಹಾಗೂ ಬಯಲಾಟ ಅಕಾಡೆಮಿ ರಚಿಸಲಾಗಿದೆ. ಪಡುವಲಪಾಯ, ಮೂಡಲಪಾಯ, ತೆಂಕು, ಬಡಗು, ಬಡಾಬಡಗು, ಗೊಂಬೆಯಾಟ ಮೊದಲಾದ ಪ್ರಕಾರಗಳಿವೆ. ಅಕಾಡೆಮಿಯಲ್ಲಿ ಯಕ್ಷಗಾನದ ಉತ್ತೇಜನಕ್ಕೆ ಎಲ್ಲ ಪ್ರಯತ್ನ ಮಾಡಲಾಗಿದೆ. ಪ್ರತೀ ವರ್ಷ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.
ಪ್ರಾಧಿಕಾರಕ್ಕಿಂತ ಹೆಚ್ಚಿನ ಕೆಲಸ ಮಾಡಲಾಗುತ್ತಿದೆ. ವರ್ಷಕ್ಕೆ 40 ಲಕ್ಷ ರೂ. ಅನುದಾನ ನೀಡಲಾಗುತ್ತಿದೆ ಎಂದರು.
ಡಾ| ಭಂಡಾರಿ ಪ್ರತಿಕ್ರಿಯಿಸಿ, 2,500 ವರ್ಷಗಳ ಪಾರಂಪರಿಕ ಇತಿಹಾಸ ಹೊಂದಿರುವ ಯಕ್ಷಗಾನ ವಿಶಿಷ್ಟ ಕಲೆ. ಡಾ| ಶಿವರಾಮ ಕಾರಂತ, ಡಾ| ಕು.ಶಿ. ಹರಿದಾಸ ಭಟ್ಟರಂತಹವರಿಂದ ಸಂಶೋಧನೆಗೆ ಒಳಗಾಗಿದೆ. ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಂಸ್ಥೆ ನೇತೃತ್ವದಲ್ಲಿ 8 ಸಾವಿರ ಮಕ್ಕಳಿಗೆ ತರಬೇತಿ ನೀಡಲಾಗುತ್ತಿದೆ. ಆದ್ದರಿಂದ ಅಕಾಡೆಮಿಯ ಅನುದಾನ ಸಾಲದು. ಯಕ್ಷಗಾನ ಪರಂಪರೆ ಮುಂದಿನ ಪೀಳಿಗೆಗೆ ಮುಂದುವರಿಯಲು ಪಠ್ಯ ರಚನೆ ಸೇರಿದಂತೆ ಅನೇಕ ಕೆಲಸಗಳಾಗಬೇಕು. ಜಗತ್ತಿನ ಮ್ಯೂಸಿಯಂನಲ್ಲಿ ಯಕ್ಷಗಾನದ ದಾಖಲೀಕರಣಕ್ಕೆ ಅವಕಾಶ, ಹಿರಿಯ ಕಲಾವಿದರಿಗೆ ಸಂಭಾವನೆ, ಕಲಾವಿದರ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು. ಆದ್ದರಿಂದ ಪ್ರಾಧಿಕಾರ ರಚಿಸಿ ವಾರ್ಷಿಕ 50 ಕೋ.ರೂ. ಅನುದಾನ ಮೀಸಲಿಡಬೇಕು. ವಿಶ್ವಕ್ಕೆ ಯಕ್ಷಗಾನದ ಮೆರುಗನ್ನು ನೀಡಬೇಕು ಎಂದು ಪ್ರತಿಪಾದಿಸಿದರು.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.