Yash ಅಭಿಮಾನಿಗಳ ಸಾವು ಪ್ರಕರಣ; ನಟ ಯಶ್ ಸ್ನೇಹಿತರಿಂದ ಮೃತರ ಕುಟುಂಬಕ್ಕೆ ಚೆಕ್ ವಿತರಣೆ
Team Udayavani, Jan 17, 2024, 2:08 PM IST
ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಮೂವರು ಯಶ್ ಅಭಿಮಾನಿಗಳ ದಾರುಣ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಣಗಿ ಗ್ರಾಮಕ್ಕೆ ಆಗಮಿಸಿದ ನಟ ಯಶ್ ಸ್ನೇಹಿತರು ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಚೆಕ್ ವಿತರಿಸಿದರು.
ಯಶ್ ಸ್ನೇಹಿತರಾದ ಚೇತನ, ರಾಕೇಶ್ ನೇತೃತ್ವದ ತಂಡ ಮೃತರ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿ, ಕುಟುಂಬದ ಸದಸ್ಯರಿಗೆ ಸಂತೈಸಿ, ಧೈರ್ಯ ತುಂಬಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಶ್ ಸ್ನೇಹಿತರು, ಅಭಿಮಾನಿಗಳ ಸಾವು ಆಗಬಾರದಾಗಿತ್ತು, ಆಗೋಗಿದೆ. ನಟ ಯಶ್ ಅವರ ಸೂಚನೆಯಂತೆ ಮೃತ ಕುಟುಂಬಕ್ಕೆ ಪರಿಹಾರ ನೀಡಿದ್ದೇವೆ. ಗಾಯಾಳುಗಳ ಮಾಹಿತು ಪಡೆದುಕೊಂಡಿದ್ದು, ಇನ್ನೆರೆಡು ದಿನಗಳಲ್ಲಿ ಅವರಿಗೂ ಪರಿಹಾರ ವಿತರಿಸುತ್ತೇವೆ. ಯಶ್ ಅವರು ಮುಂದೆಯೂ ಮೃತ ಕುಟುಂಬದ ಜೊತೆ ಇರುತ್ತಾರೆ ಎಂದು ಹೇಳಿದರು.
ಸೂರಣಗಿ ಗ್ರಾಮದಲ್ಲಿ ಜ. 7ರಂದು ಯಶ್ ಜನ್ಮದಿನದ ಅಂಗವಾಗಿ ಕಟೌಟ್ ಹಾಕುವ ವೇಳೆ ವಿದ್ಯುತ್ ಸ್ಪರ್ಶಿಸಿ ಮುರಳಿ, ನವೀನ, ಹನುಮಂತ ಸೇರಿ ಮೂವರು ಯುವಕರು ಸಾವಿಗೀಡಾಗಿದ್ದರು. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.