![Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು](https://www.udayavani.com/wp-content/uploads/2025/02/BASSI-415x234.jpg)
![Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು](https://www.udayavani.com/wp-content/uploads/2025/02/BASSI-415x234.jpg)
Team Udayavani, Mar 3, 2020, 3:04 AM IST
ಧಾರವಾಡ: ಹೆಬ್ಬಳ್ಳಿ ಜಿಪಂ ಸದಸ್ಯರಾಗಿದ್ದ ಬಿಜೆಪಿಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬಂಧಿಸಿರುವ ಆರು ಜನ ಸುಪಾರಿ ಹಂತಕರನ್ನು ಮಾ. 7ರವರೆಗೆ ಸಿಬಿಐ ವಶಕ್ಕೆ ನೀಡಲಾಗಿದೆ. ಸಿಬಿಐ ಅಧಿಕಾರಿಗಳ ತಂಡ ಆರು ಜನರನ್ನು ಸೋಮವಾರ ಪ್ರಧಾನ ಜೆಎಂಎಫ್ ನ್ಯಾಯಾಲಯದ ನ್ಯಾಯಾ ಧೀಶರಾದ ವಿಜಯಲಕ್ಷ್ಮೀ ಘಾನಾಪುರ ಅವರ ಎದುರು ಹಾಜರು ಪಡಿಸಿದರು.
ಈ ವೇಳೆ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಸಿಬಿಐ ವಶಕ್ಕೆ ನೀಡುವಂತೆ ಕೋರಲಾಯಿತು. ಈ ಹಿನ್ನೆಲೆಯಲ್ಲಿ ಆರು ಆರೋಪಿಗಳನ್ನು ನ್ಯಾಯಾಧೀಶರಾದ ವಿಜಯಲಕ್ಷ್ಮೀ ಘಾನಾ ಪುರ ಅವರು ಮಾ.7ರವರೆಗೆ ಸಿಬಿಐ ಅಧಿಕಾರಿಗಳ ವಶಕ್ಕೆ ನೀಡಿ ಆದೇಶ ಹೊರಡಿಸಿದರು. ಆರೋಪಿಗಳಾದ ದಿನೇಶ, ಅಶ್ವಥ್, ಶಾ ನವಾಜ್, ಸುನೀಲ್ ಕುಮಾರ್, ನಜೀರ್ ಅಹ್ಮದ್, ನೂತನ್ ಅವರನ್ನು ವಶಕ್ಕೆ ಪಡೆದು ಆರು ದಿನಗಳ ಕಾಲ ಅಜ್ಞಾತ ಸ್ಥಳದಲ್ಲಿರಿಸಿ ಸಿಬಿಐ ವಿಚಾರಣೆ ನಡೆಸಲಿದೆ.
11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ: ಮೇ 30 ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಕೆ
Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ
Kalaburagi: ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್ ಸಿಂಗ್
Belagavi: ಮುಂದಿನ ಅವಧಿಗೂ ಸಿದ್ದರಾಮಯ್ಯ ಸಿಎಂ ಆದರೆ ತಪ್ಪೇನಿದೆ… ಸಚಿವ ಶಿವಾನಂದ ಪಾಟೀಲ
Katapadi: ಮುಕ್ಕಾಲು ಎಕರೆಯಲ್ಲಿ 8 ಟನ್ ಸೌತೆ, ಅಂಗಳದಿಂದಲೇ ಮಾರಾಟ!
Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು
Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್ ಪತ್ರಿಕೆ
Mangaluru: ನದಿ-ಕಡಲು ಸಂಗಮದ ಸನಿಹದಲ್ಲೇ ಪ್ರವಾಸಿ ಸೇತುವೆ!
ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ
You seem to have an Ad Blocker on.
To continue reading, please turn it off or whitelist Udayavani.