ಬುರ್ಜ್‌ ಖಲೀಫಾದ ಒಂದು ದೀಪ ಖರೀದಿಸಿ ಬಡವರಿಗೆ ಊಟ ಒದಗಿಸಲು ನೆರವಾಗಿ!


Team Udayavani, May 5, 2020, 7:47 PM IST

Burj-Khalifa

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ವಿಶ್ವದ ಅತಿ ಎತ್ತರದ ಕಟ್ಟಡ ‘ಬುರ್ಜ್‌ ಖಲೀಫಾ’ ಕೋವಿಡ್ 19 ಸೋಂಕು ಬಾಧಿತರಿಗೆ ನೆರವು ನೀಡಲು ಇದೀಗ ಮುಂದೆ ಬಂದಿದೆ.

ಸುಮಾರು ಒಂದು ಕೋಟಿ ಮಂದಿ ಬಡವರಿಗೆ ಊಟ ಪೂರೈಸುವ ಅಭಿಯಾನವನ್ನು ಇದು ಪ್ರಾರಂಭಿಸಿದ್ದು ಬುರ್ಜ್ ಖಲೀಫಾ ಕೈಗೊಂಡಿರುವ ಈ ಅಭಿಯಾನ ವಿನೂತನವಾಗಿದ್ದು, ನಾವು, ನೀವೂ ಸಹ ಇದರಲ್ಲಿ ಭಾಗಿಗಳಾಗಬಹುದಾಗಿದೆ.

ಅದು ಹೇಗೆಂದರೆ, ತನ್ನ ಕಟ್ಟಡದಲ್ಲಿರುವ ಅಷ್ಟೂ ಲೈಟ್‌ಗಳನ್ನು ಆನ್‌ ಲೈನ್‌ ಮೂಲಕ ಹರಾಜು ಹಾಕಲಿರುವ ಬುರ್ಜ್ ಖಲೀಪಾ, ಈ ಲೈಟ್ ಗಳನ್ನು ಖರೀದಿಸಿ ದೇಣಿಗೆ ನೀಡುವಂತೆ ಜನರಲ್ಲಿ ಮನವಿಯನ್ನು ಮಾಡಿಕೊಂಡಿದೆ. ಈ ಕಟ್ಟಡದಲ್ಲಿ ಒಟ್ಟು 1.2 ಮಿಲಿಯನ್ ದೀಪಗಳಿವೆ.

ಒಂದು ಲೈಟ್‌ಗೆ 10 ದಿರ್‌ ಹಮ್‌ (206 ರೂ.) ನಿಗದಿಪಡಿಸಲಾಗಿದ್ದು, ಈ ಮೂಲಕ ಸಂಗ್ರಹವಾಗುವ ಒಟ್ಟು ಮೊತ್ತದಲ್ಲಿ 1 ಕೋಟಿ ಮಂದಿಗೆ ಊಟ ಒದಗಿಸುವ ಯೋಜನೆ ಇದಾಗಿದೆ. 24 ಗಂಟೆಗಳ ಅವಧಿಯಲ್ಲಿ ಸಂಗ್ರಹವಾದ ಹಣದಲ್ಲಿ ಒಟ್ಟು 1.76 ಲಕ್ಷ ಮಂದಿಗೆ ಆಹಾರ ಪೂರೈಸಲಾಗಿದೆ.

ಆದರೆ, ಇಲ್ಲೊಂದು ವಿಶೇಷತೆಯಿದ್ದು ಇದು ಸಾಂಕೇತಿಕ ಹರಾಜು ಮಾತ್ರವೇ ಆಗಿರುತ್ತದೆ. ನೀವು ಆನ್ ಲೈನ್ ಮೂಲಕ ಲೈಟ್ ಖರೀದಿಸಿದ ತಕ್ಷಣ ನಿಮಗೇನೂ ಬುರ್ಜ್ ಖಲೀಫಾದ ಲೈಟ್ ಗಳನ್ನು ಕಳುಹಿಸಿ ಕೊಡಲಾಗುವುದಿಲ್ಲ.

ಆದರೆ ತನ್ನಲ್ಲಿರುವ ಅಷ್ಟೂ ಲೈಟ್ ಗಳನ್ನು ಸಾಂಕೇತಿಕವಾಗಿ ಹರಾಜು ಹಾಕುವ ಮೂಲಕ ಮತ್ತು ಆ ಮೂಲಕ ಸಂಗ್ರಹವಾಗುವ ದೇಣಿಗೆ ಮೊತ್ತವನ್ನು ಕೋಟಿ ಹೊಟ್ಟೆಗಳ ಹಸಿವನ್ನು ನೀಗಿಸಲು ವಿನಿಯೋಗಿಸುತ್ತಿರುವ ವಿಧಾನ ಮಾತ್ರ ವಿನೂತನವೂ ಪ್ರಶಂಸನೀಯವೂ ಆಗಿದೆ.

ಹಾಗಾಗಿ ನಾವೂ ಬುರ್ಜ್ ಖಲೀಫಾದ ದೀಪಗಳನ್ನು ಸಾಂಕೇತಿಕವಾಗಿ ಖರೀದಿಸಿದರೆ ಈ ಅಭಿಯಾನಕ್ಕೆ ಬೆಂಬಲ ನೀಡಿದಂತಾಗುತ್ತದೆ ಮತ್ತು ನೀವು ಒಂದು ದೀಪವನ್ನು ಸಾಂಕೇತಿಕವಾಗಿ ಖರೀದಿಸಿದಲ್ಲಿ ಆ ಹಣದಿಂದ ಒಬ್ಬರ ಹಸಿವು ನೀಗಿಸಿದ ಪುಣ್ಯ ನಮ್ಮದಾಗುವುದು.

ಈ ಅಭಿಯಾನ ಪ್ರಾರಂಭಗೊಂಡಿರುವ ಕೇವಲ 24 ಗಂಟೆಗಳೊಗಾಗಿ 18 ಮಹಡಿಗಳಿರುವ ಈ ವಿಶ್ವ ವಿಖ್ಯಾತ ಕಟ್ಟಡದ 18 ಸಾವಿರ ದೀಪಗಳ ಸಾಂಕೇತಿಕ ಖರೀದಿ ಪ್ರಕ್ರಿಯೆ ನಡೆದಿದೆ. ರವಿವಾರ ಸಂಗ್ರಹವಾದ ದೇಣಿಗೆ ಮೊತ್ತವನ್ನು ಯು.ಎ.ಇ.ಯಲ್ಲಿ ಕೋವಿಡ್ 19 ವೈರಸ್ ಬಾಧಿತರಿಗೆ ಒಟ್ಟು 180,000 ಊಟಗಳನ್ನು ನೀಡಲು ವಿನಿಯೋಗಿಸಲಾಗುವುದು ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.