![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 23, 2021, 4:46 PM IST
ಬೀಜಿಂಗ್: ಆಲಿಕಲ್ಲು ಸೇರಿದಂತೆ ಶೀತ ಮಳೆ, ಭಾರೀ ಗಾಳಿಗೆ ಸಿಲುಕಿ 21 ಮಂದಿ ಓಟಗಾರರು ಮೃತಪಟ್ಟ ಘಟನೆ ಚೀನಾದ ಗನ್ಸು ಪ್ರಾಂತ್ಯದಲ್ಲಿ ನಡೆದಿದೆ.
ವಾಯುವ್ಯ ಗನ್ಸು ಪ್ರಾಂತ್ಯದ ಬೈಯಿನ್ ನಗರದ ಸಮೀಪವಿರುವ ಯೆಲ್ಲೊ ರಿವರ್ ಸ್ಟೋನ್ ಅರಣ್ಯ ಪ್ರದೇಶದಲ್ಲಿ ಶನಿವಾರ 100 ಕಿ.ಮೀ ದೂರದ ಗುಡ್ಡಗಾಡು ಓಟ ಏರ್ಪಡಿಸಲಾಗಿತ್ತು. ಇದರಲ್ಲಿ ಭಾಗಿಯಾದ 21 ಮಂದಿ ಓಟಗಾರರು ಹವಾಮಾನದ ಆಕ್ರೋಶಕ್ಕೆ ತುತ್ತಾಗಿ ಬಲಿಯಾಗಿದ್ದಾರೆ.
ಕೆಲವೇ ಕ್ಷಣಗಳ ಅಂತರದಲ್ಲಿ ಹವಾಮಾನದಲ್ಲಿ ಭಾರೀ ಬದಲಾವಣೆ ಸಂಭವಿಸಿತು. ಆಲಿಕಲ್ಲು ಮಳೆಯಾಯಿತು, ನಂತರ ಹಿಮಪಾತ ಉಂಟಾಯಿತು. ಬಲವಾದ ಗಾಳಿ ಬೀಸಲಾರಂಭಿಸಿತು. ತಾಪಮಾನದಲ್ಲಿ ತೀವ್ರ ಕುಸಿತ ಉಂಟಾಯಿತು ಎಂದು ಸ್ಥಳೀಯ ಮೇಯರ್ ತಿಳಿಸಿದ್ದಾರೆ.
ಇದನ್ನೂ ಓದಿ:ಅಪ್ಪನ ಹೆಣ ಬೇಡ, ಅವರ ಬಳಿಯಿರುವ ಹಣ ಕೊಡಿ.! ; ಮೈಸೂರಿನಲ್ಲೊಬ್ಬ ಪಾಪಿ ಮಗ
ಕೆಲವು ಓಟಗಾರರಿಂದ ಸಹಾಯದ ಸಂದೇಶಗಳನ್ನು ಸ್ವೀಕರಿಸಿದ ಸ್ವಲ್ಪ ಸಮಯದ ನಂತರ, ಮ್ಯಾರಥಾನ್ ಸಂಘಟಕರು ತಮ್ಮ ತಂಡವನ್ನು ರವಾನಿಸಿದರು. ಮಧ್ಯಾಹ್ನ 2 ಗಂಟೆ ಸುಮಾರಿಗೆ, ಹವಾಮಾನ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತು. ಸ್ಥಳೀಯ ಅಧಿಕಾರಿಗಳು ಹೆಚ್ಚಿನ ರಕ್ಷಣಾ ಸಿಬ್ಬಂದಿಯನ್ನು ಸಹಾಯಕ್ಕಾಗಿ ಕಳುಹಿಸಿದರು. ಓಟವನ್ನು ತಕ್ಷಣವೇ ರದ್ದು ಮಾಡಲಾಯಿತು. ಪ್ರಾಂತೀಯ ಅಧಿಕಾರಿಗಳು ಇದರ ಬಗ್ಗೆ ಇನ್ನಷ್ಟು ತನಿಖೆ ಮಾಡುತ್ತಾರೆ ಎಂದು ಮೇಯರ್ ಹೇಳಿದರು
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.