![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 1, 2020, 7:21 PM IST
ಬೀಜಿಂಗ್/ನವದೆಹಲಿ: ಚೀನಾದಲ್ಲಿ ಆರಂಭವಾದ ಕೊರೊನಾ ಆತಂಕ ಈಗ 60ಕ್ಕೂ ಹೆಚ್ಚು ದೇಶಗಳಿಗೆ ವ್ಯಾಪಿಸಿದ್ದು, ಜಾಗತಿಕವಾಗಿ 2,900 ಮಂದಿ ಈ ವೈರಸ್ಗೆ ಬಲಿಯಾಗಿದ್ದಾರೆ. ಜತೆಗೆ ಸುಮಾರು 86 ಸಾವಿರ ಮಂದಿಗೆ ಸೋಂಕು ತಗುಲಿದ್ದು, ಇವರೆಲ್ಲರೂ ನಿಗಾದಲ್ಲಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಬಿಡುಗಡೆ ಮಾಡಿದ ಹೊಸ ವರದಿಯಲ್ಲಿ ತಿಳಿಸಲಾಗಿದೆ. ಚೀನಾವೊಂದರಲ್ಲೇ 2,870 ಮಂದಿ ಮೃತಪಟ್ಟಿದ್ದು, ಇಲ್ಲಿ 79,824 ಸೋಂಕಿತರಿದ್ದಾರೆ.
ಪಾಕ್- ಅಫ್ಘಾನ್ ಗಡಿ ಬಂದ್:
ಪಾಕಿಸ್ತಾನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4ಕ್ಕೇರಿದ್ದು, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಅದರಂತೆ, ಅಫ್ಘಾನಿಸ್ತಾನದ ಜೊತೆ ಪಾಕ್ ಹೊಂದಿರುವ ಗಡಿಯನ್ನು ಸೋಮವಾರದಿಂದ 7 ದಿನಗಳ ಕಾಲ ಮುಚ್ಚಲು ನಿರ್ಧರಿಸಲಾಗಿದೆ. ಕರಾಚಿ ಸೇರಿದಂತೆ ಸಿಂಧ್ ಪ್ರಾಂತ್ಯದ ಎಲ್ಲ ಶಾಲೆಗಳಿಗೂ ರಜೆ ಘೋಷಿಸಲಾಗಿದೆ.
ಇರಾನ್ಗೆ ಹೆಚ್ಚಿದ ಆತಂಕ:
ಇರಾನ್ನಲ್ಲೂ ಕೋವಿಡ್-19 ವೈರಸ್ ವ್ಯಾಪಕವಾಗಿ ಹಬ್ಬುತ್ತಿದ್ದು, ಭಾನುವಾರ ಒಂದೇ ದಿನ 11 ಮಂದಿ ಸಾವಿಗೀಡಾಗಿದ್ದಾರೆ. ಈ ಮೂಲಕ ವೈರಸ್ಗೆ ಬಲಿಯಾದವರ ಸಂಖ್ಯೆ 54ಕ್ಕೇರಿದ್ದು, 978 ಮಂದಿಗೆ ಸೋಂಕು ತಗುಲಿದೆ. ಐರ್ಲೆಂಡ್ನಲ್ಲಿ ಮೊದಲ ಪ್ರಕರಣ ಪತ್ತೆಯಾಗಿದೆ. ದಕ್ಷಿಣ ಕೊರಿಯಾದಲ್ಲಿ 376 ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,526ಕ್ಕೇರಿದೆ.
ಮೊದಲ ಸಾವು:
ಜಪಾನ್ನ ಡೈಮಂಡ್ ಪ್ರಿನ್ಸೆಸ್ ನೌಕೆಯಿಂದ ಸ್ವದೇಶಕ್ಕೆ ಮರಳಿದ್ದ 78 ವರ್ಷದ ವ್ಯಕ್ತಿ ಸಿಡ್ನಿಯ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದಲ್ಲಿ ಕೊರೊನಾಗೆ ಮೊದಲ ಬಲಿ ಆದಂತಾಗಿದೆ. ಅಮೆರಿಕದಲ್ಲೂ ವೈರಸ್ಗೆ ಮೊದಲ ಸಾವು ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಇರಾನ್, ಇಟಲಿ ಸೇರಿ ಕೆಲವು ದೇಶಗಳಿಗೆ ಪ್ರಯಾಣ ನಿರ್ಬಂಧ ಹೇರಿ ಅಧ್ಯಕ್ಷ ಟ್ರಂಪ್ ಆದೇಶ ಹೊರಡಿಸಿದ್ದಾರೆ.
ಕೋಳಿ ಮೇಳ!:
ಕೋಳಿಗಳಿಂದಲೂ ಕೊರೊನಾ ಹಬ್ಬುತ್ತದೆ ಎಂಬ ವದಂತಿಯನ್ನು ಸುಳ್ಳಾಗಿಸುವ ನಿಟ್ಟಿನಲ್ಲಿ ಗುರುಗ್ರಾಮದಲ್ಲಿ ಕೋಳಿಸಾಕಣೆ ಸಂಘವು “ಕೋಳಿ ಮೇಳ’ವನ್ನು ಆಯೋಜಿಸಿದೆ. ಇಲ್ಲಿ ಒಂದು ಪ್ಲೇಟ್ ಚಿಕನ್ ಖಾದ್ಯವನ್ನು ತಲಾ 30 ರೂ.ಗಳಂತೆ ಮಾರಾಟ ಮಾಡಲಾಗಿದ್ದು, ಚಿಕನ್, ಮಟನ್ ಅಥವಾ ಮೀನು ತಿನ್ನುವುದರಿಂದ ವೈರಸ್ ಹರಡುವುದಿಲ್ಲ ಎಂದು ತಿಳಿಹೇಳುವ ಕೆಲಸ ಮಾಡಲಾಗಿದೆ.
ಮಲೇಷ್ಯಾದಿಂದ ಬಂದಿದ್ದ ವ್ಯಕ್ತಿ ಕೇರಳದಲ್ಲಿ ಸಾವು
ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವಂಥ ಮಲೇಷ್ಯಾದಿಂದ ಇತ್ತೀಚೆಗೆ ಹುಟ್ಟೂರು ಕೇರಳಕ್ಕೆ ಆಗಮಿಸಿದ್ದ ವ್ಯಕ್ತಿಯೊಬ್ಬರು ಎರ್ನಾಕುಳಂ ಆಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟಿದ್ದಾರೆ. ಆದರೆ, ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದಾಗ, ನೆಗೆಟಿವ್ ಎಂದು ವರದಿ ಬಂದಿದೆ. ಆ ವ್ಯಕ್ತಿಯು ಉಸಿರಾಟದ ತೊಂದರೆ, ನ್ಯುಮೋನಿಯಾದಿಂದ ಬಳಲುತ್ತಿದ್ದರು. ಜತೆಗೆ ಅವರಿಗೆ ಸಕ್ಕರೆ ಕಾಯಿಲೆಯೂ ಇತ್ತು ಎಂದು ವೈದ್ಯರು ಹೇಳಿದ್ದಾರೆ.
ನಾಸಿಕ್ನಲ್ಲಿ ವ್ಯಕ್ತಿ ಮೇಲೆ ನಿಗಾ
ಇಟಲಿಯಿಂದ ಆಗಮಿಸಿದ ವ್ಯಕ್ತಿಯೊಬ್ಬನನ್ನು ಮಹಾರಾಷ್ಟ್ರದ ನಾಸಿಕ್ನಲ್ಲಿ ತೀವ್ರ ನಿಗಾದಲ್ಲಿ ಇರಿಸಲಾಗಿದೆ. ವ್ಯಾಸಂಗಕ್ಕೆಂದು ಇಟಲಿಗೆ ಹೋಗಿದ್ದ ಈತ ಫೆ.26ರಂದು ಸ್ವದೇಶಕ್ಕೆ ಮರಳಿದ್ದ. ಆತನಿಗೆ ಕಫ, ನೆಗಡಿ ಹಾಗೂ ತೀವ್ರ ಬಳಲಿಕೆ ಕಂಡುಬಂದ ಕಾರಣ, ನಿಗಾದಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.