![2-gadag](https://www.udayavani.com/wp-content/uploads/2024/06/2-gadag-415x249.jpg)
ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್ ವಿದ್ಯಾರ್ಥಿಗಳು ದುರ್ಮರಣ
Team Udayavani, May 21, 2024, 12:32 PM IST
![5](https://www.udayavani.com/wp-content/uploads/2024/05/5-16-620x372.jpg)
ನವದೆಹಲಿ: ಕಾರು ಪಲ್ಟಿಯಾಗಿ ಮೂವರು ಇಂಡೋ – ಅಮೇರಿಕನ್ ಮೂಲದ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಜಾರ್ಜಿಯಾ ದೇಶದ ಅಲ್ಫರೆಟ್ಟಾದಲ್ಲಿ ನಡೆದಿರುವುದು ವರದಿಯಾಗಿದೆ.
ಘಟನೆಯಲ್ಲಿ ಮೂವರು ಭಾರತೀಯ-ಅಮೆರಿಕನ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಅವರೆಲ್ಲರೂ 18 ವರ್ಷ ವಯಸ್ಸಿನವರಾಗಿದ್ದು, ಇಬ್ಬರು ಯುವತಿಯರು ಹಾಗೂ ಒಬ್ಬ ಯುವಕ ಮೃತಪಟ್ಟಿದ್ದಾನೆ.
ಮೃತ ವಿದ್ಯಾರ್ಥಿಗಳನ್ನು ಆರ್ಯನ್ ಜೋಷಿ, ಶ್ರೀಯಾ ಅವಸರಲಾ ,ಅನ್ವಿ ಶರ್ಮಾ ಎಂದು ಗುರುತಿಸಲಾಗಿದೆ.
ರಿತ್ವಾಕ್ ಸೋಮೆಪಲ್ಲಿ ,ಮೊಹಮ್ಮದ್ ಲಿಯಾಕತ್ ಗಾಯಗೊಂಡ ವಿದ್ಯಾರ್ಥಿಗಳು.
ಐದು ಭಾರತೀಯ-ಅಮೇರಿಕನ್ ವಿದ್ಯಾರ್ಥಿಗಳು ಆಲ್ಫರೆಟ್ಟಾ ಹೈಸ್ಕೂಲ್ ಮತ್ತು ಜಾರ್ಜಿಯಾ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿದ್ದರು.
ವೇಗದ ಚಾಲನೆಯೇ ಕಾರು ಅಪಘಾತಕ್ಕೆ ಕಾರಣವೆಂದು ಪ್ರಾಥಮಿಕ ತನಿಖೆಯಲ್ಲಿ ಆಲ್ಫರೆಟ್ಟಾ ಪೊಲೀಸರು ಹೇಳಿದ್ದಾರೆ. ಆದರೆ ಅಪಘಾತದ ಹಿಂದಿನ ನೈಜ ಕಾರಣವನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಪಲ್ಟಿಯಾಗಿದೆ. ಇದರಿಂದ ಆರ್ಯನ್ ಜೋಶಿ ಮತ್ತು ಶ್ರೀಯಾ ಅವಸರಲಾ ಸ್ಥಳದಲ್ಲೇ ಸಾವನ್ನಪ್ಪಿದರೆ, ಅನ್ವಿ ಶರ್ಮಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಜಾರ್ಜಿಯಾದ ಆಲ್ಫರೆಟ್ಟಾದಲ್ಲಿನ ಮ್ಯಾಕ್ಸ್ವೆಲ್ ರಸ್ತೆಯ ವೆಸ್ಟ್ಸೈಡ್ ಪಾರ್ಕ್ವೇಯಲ್ಲಿ ಮೇ 14 ರಂದು ಅಪಘಾತ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
![2-gadag](https://www.udayavani.com/wp-content/uploads/2024/06/2-gadag-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-gadag](https://www.udayavani.com/wp-content/uploads/2024/06/2-gadag-150x90.jpg)
Gadag: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು
![ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!](https://www.udayavani.com/wp-content/uploads/2024/06/adike-150x80.jpg)
PMFBY ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!
![1-24-saturday](https://www.udayavani.com/wp-content/uploads/2024/06/1-24-saturday-2-150x90.jpg)
Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫಲ
![Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್ಟಿಯೂ ಅಗತ್ಯ](https://www.udayavani.com/wp-content/uploads/2024/06/vehicle-panic-button-150x92.jpg)
Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್ಟಿಯೂ ಅಗತ್ಯ
![Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್ನಲ್ಲಿ ಮಾತ್ರವೇ ಲಭ್ಯ](https://www.udayavani.com/wp-content/uploads/2024/06/TULU-2-150x55.jpg)
Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್ನಲ್ಲಿ ಮಾತ್ರವೇ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.