ಪಾಕ್ ನಲ್ಲಿ 40 ಉಗ್ರ ಸಂಘಟನೆಗಳಿವೆ; ಅಮೆರಿಕದಲ್ಲಿ ಸತ್ಯ ಒಪ್ಪಿಕೊಂಡ ಇಮ್ರಾನ್ ಖಾನ್!


Team Udayavani, Jul 24, 2019, 1:37 PM IST

Khan-Imran

ವಾಷಿಂಗ್ಟನ್: ಕಳೆದ 15 ವರ್ಷಗಳ ಕಾಲ ಪಾಕಿಸ್ತಾನದಲ್ಲಿ ಯಶಸ್ವಿಯಾಗಿ ಆಡಳಿತ ನಡೆಸಿದ ಯಾವ ಸರ್ಕಾರವೂ ಅಮೆರಿಕಕ್ಕೆ ಉಗ್ರರಿಗೆ ಸಂಬಂಧಿಸಿದ ಸತ್ಯವನ್ನೇ ಹೇಳಿರಲಿಲ್ಲವಾಗಿತ್ತು ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದು, ಪ್ರಸ್ತುತ ಪಾಕಿಸ್ತಾನದಲ್ಲಿ 40 ವಿವಿಧ ಭಯೋತ್ಪಾದಕ ಸಂಘಟನೆಗಳಿವೆ ಎಂಬುದಾಗಿ ಒಪ್ಪಿಕೊಂಡಿದ್ದಾರೆ!

ಭಯೋತ್ಪಾದನೆ ವಿರುದ್ಧದ ಅಮೆರಿಕದ ಹೋರಾಟದ ಜತೆಗೆ ನಾವಿದ್ದೇವೆ. 9/11 ದಾಳಿಗೆ ಸಂಬಂಧಿಸಿದಂತೆಯೂ ಪಾಕಿಸ್ತಾನ ಏನೂ ಕ್ರಮ ಕೈಗೊಂಡಿಲ್ಲವಾಗಿತ್ತು. ಅಲ್ ಖೈದಾ ಅಫ್ಘಾನಿಸ್ತಾನದಲ್ಲಿ ಕಾರ್ಯಾಚರಿಸುತ್ತಿದೆ. ಪಾಕಿಸ್ತಾನದಲ್ಲಿ ತಾಲಿಬಾನ್ ಉಗ್ರರು ಇಲ್ಲ ಎಂದು ಖಾನ್ ವಿವರಿಸಿದ್ದಾರೆ.

ಆದರೆ ನಾವು ಅಮೆರಿಕದ ಹೋರಾಟದಲ್ಲಿ ನಾವು ಕೈಜೋಡಿಸುತ್ತೇವೆ. ದುರದೃಷ್ಟ ಎಂಬಂತೆ ಭಯೋತ್ಪಾದನೆ ವಿಚಾರದಲ್ಲಿ ತಪ್ಪು ಸಂದೇಶ ರವಾನೆಯಾಗುವಂತಾಗಿದೆ. ನನ್ನ ನೇತೃತ್ವದ ಸರ್ಕಾರಕ್ಕೂ ಕಳಂಕವಾಗಿದೆ. ನಾವು ಭಯೋತ್ಪಾದಕರ ಕುರಿತ ಸತ್ಯವನ್ನು ನಿಖರವಾಗಿ ಅಮೆರಿಕಕ್ಕೆ ತಿಳಿಸಲೇ ಇಲ್ಲ ಎಂಬುದಾಗಿ ಹೇಳಿದ್ದಾರೆ.

ಅಮೆರಿಕ ಸೆನೆಟ್ ನ ಶೈಲಾ ಜಾಕ್ಸನ್ ಲೀ  ಕ್ಯಾಪಿಟೋಲ್ ಹಿಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಖಾನ್ ಮೊತ್ತ ಮೊದಲ ಬಾರಿಗೆ ಪಾಕಿಸ್ತಾನದಲ್ಲಿ ಕಾರ್ಯಾಚರಿಸುತ್ತಿರುವ ಉಗ್ರರ ಸಂಘಟನೆ ಬಗ್ಗೆ ಬಹಿರಂಗವಾಗಿ ತಿಳಿಸುವ ಮೂಲಕ ಒಪ್ಪಿಕೊಂಡಿದ್ದಾರೆ.

ಪಾಕಿಸ್ತಾನದೊಳಗೆ 40 ವಿವಿಧ ಭಯೋತ್ಪಾದಕ ಸಂಘಟನೆಗಳು ಕಾರ್ಯಾಚರಿಸುತ್ತಿವೆ. ಒಟ್ಟು 40 ಸಾವಿರ ಉಗ್ರರಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಜನರು ಕೂಡಾ ಅದರ ಸೆಳೆತಕ್ಕೆ ಒಳಗಾಗುತ್ತಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಹೀಗಾಗಿ ಭಯೋತ್ಪಾದಕರ ವಿರುದ್ಧದ ಹೋರಾಟಕ್ಕೆ ನೆರವು ನೀಡುವ ಮೂಲಕ ಗೆಲುವು ಸಾಧಿಸಲು ಕೈಜೋಡಿಸಬೇಕಾಗಿದೆ ಎಂದು ಖಾನ್ ತಿಳಿಸಿದ್ದಾರೆ.

ಶಾಂತಿ ಸ್ಥಾಪನೆ, ಶಾಂತಿ ಮಾತುಕತೆ ಮೂಲಕ ಉಗ್ರರನ್ನು ಶರಣಾಗತಗೊಳಿಸುವುದು ತುಂಬಾ ಸರಳವಾದ ಕೆಲಸವಲ್ಲ. ಅಫ್ಘಾನಿಸ್ತಾನದಲ್ಲಿನ ಪರಿಸ್ಥಿತಿ ತುಂಬಾ ಕ್ಲಿಷ್ಟಕರವಾಗಿದೆ. ಆದರೆ ಉಳಿದಂತೆ ನಾವು ನಮ್ಮ ಕೈಯಲ್ಲಾದ ಕ್ರಮಕೈಗೊಳ್ಳುತ್ತೇವೆ. ಇಡೀ ದೇಶವೇ ನನ್ನ ಬೆನ್ನಿಗೆ ನಿಂತಿದೆ, ಪಾಕಿಸ್ತಾನದ ಮಿಲಿಟರಿ, ಭದ್ರತಾ ಪಡೆಗಳು ಕೂಡಾ ನನ್ನ ಬೆಂಬಲಕ್ಕಿವೆ. ನಮ್ಮೆಲ್ಲರದ್ದೂ ಒಂದೇ ಗುರಿಯಾಗಿದೆ, ಅದು ಅಮೆರಿಕದ್ದು ಕೂಡಾ ಹೌದು. ಆ ನಿಟ್ಟಿನಲ್ಲಿ ಅಪ್ಘಾನಿಸ್ತಾನದಲ್ಲಿ ನಾವು ಆದಷ್ಟು ಶೀಘ್ರವಾಗಿ ಶಾಂತಿಯುತವಾಗಿ ಸಮಸ್ಯೆಯನ್ನು ಬಗೆಹರಿಸಬೇಕಾಗಿದೆ ಎಂದು ಖಾನ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Zakir Naik

Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್‌ ನಾಯ್ಕ

1-weqwe

Strikes again; ಲೆಬನಾನ್‌,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್‌:40ಕ್ಕೂ ಹೆಚ್ಚು ಸಾ*ವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.