ಪಾಕ್‌ ಮನವೊಲಿಕೆಗೆ ಚೀನ ಮುಂದಾಗಲಿ


Team Udayavani, Jan 8, 2018, 10:40 AM IST

White-House-600.jpg

ವಾಷಿಂಗ್ಟನ್‌: ಉಗ್ರ ಸಂಘಟನೆಗಳನ್ನು ಪೋಷಿಸುತ್ತಿರುವ ಪಾಕಿಸ್ಥಾನದ ವಿರುದ್ಧ ಪದೇ ಪದೆ ಕಿಡಿ ಕಾರುತ್ತಿರುವ ಅಮೆರಿಕ ಇದೀಗ, ಸಮಸ್ಯೆಯಲ್ಲಿ ಚೀನವನ್ನೂ ಎಳೆತಂದಿದೆ. ಪಾಕಿಸ್ಥಾನವನ್ನು ಚೀನ ಮನವೊಲಿಸಬಹುದು ಎಂದು ವೈಟ್‌ಹೌಸ್‌ನ ಅಧಿಕಾರಿಗಳು ಹೇಳಿದ್ದಾರೆ. ಅಫ್ಘಾನಿಸ್ಥಾನ ಹಾಗೂ ಈ ಭಾಗದಲ್ಲಿ ಸುಸ್ಥಿರತೆಗೆ ಪಾಕಿಸ್ಥಾನದಲ್ಲಿರುವ ಉಗ್ರ ನೆಲೆಗಳನ್ನು ಧ್ವಂಸಗೊಳಿಸುವುದು ಸದ್ಯದ ಅಗತ್ಯವಾಗಿದೆ. ಚೀನ ಹಾಗೂ ಪಾಕ್‌ ಹಲವು ವರ್ಷಗಳಿಂದಲೂ ಮಿತೃತ್ವ ಹೊಂದಿವೆ. ಅಷ್ಟೇ ಅಲ್ಲ, ಸೇನಾ ಬಂಧದ ಜತೆಗೆ ಇತ್ತೀಚೆಗೆ ಪಾಕ್‌ನಲ್ಲಿ ಚೀನ ಹೂಡಿಕೆಯೂ ಹೆಚ್ಚುತ್ತಿದೆ. ಪಾಕಿಸ್ಥಾನದಲ್ಲಿ ಉಗ್ರರು ನೆಲೆ ನಿಲ್ಲುವುದರಿಂದ ಚೀನದ ಹಿತಾಸಕ್ತಿಯೂ ಪೂರೈಸುವುದಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಪಾಕ್‌-ಅಮೆರಿಕ ಸಂಬಂಧ ಮುಂದುವರಿಕೆ: ಉಗ್ರರನ್ನು ಪೋಷಿಸುತ್ತಿರುವುದರ ಬಗ್ಗೆ ಟೀಕೆ ಹಾಗೂ ಆರ್ಥಿಕ ಅನುದಾನ ಸ್ಥಗಿತದಂತಹ ಕಠಿಣ ಕ್ರಮಗಳನ್ನು ಕೈಗೊಂಡಿರುವ ಮಧ್ಯೆಯೂ ಪಾಕ್‌ ಹಾಗೂ ಅಮೆರಿಕದ ಸಂಬಂಧ ಹಿಂದಿನಂತೆಯೇ ಮುಂದುವರಿಯಲಿದೆ ಎಂದು ಪಾಕಿಸ್ಥಾನದ ವಿದೇಶಾಂಗ ಕಾರ್ಯದರ್ಶಿ ತೆಹ್ಮಿನಾ ಜಂಜುವಾ ಹೇಳಿದ್ದಾರೆ. ಅಮೆರಿಕ ವಿಶ್ವದ ಬೃಹತ್‌ ಆರ್ಥಿಕತೆಯಾಗಿದ್ದು, ಈ ಪ್ರದೇಶದಲ್ಲಿ ತನ್ನ ಅಸ್ತಿತ್ವವನ್ನು ಹೊಂದಿದೆ. ಹೀಗಾಗಿ ನಾವು ಅವರೊಂದಿಗೆ ಹಿಂದಿನಂತೆಯೇ ಮಾತುಕತೆ ಹಾಗೂ ಸಹಭಾಗಿತ್ವವನ್ನು ಮುಂದುವರಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಕಿಮ್‌ ಜತೆ ಫೋನ್‌ನಲ್ಲಿ ಮಾತುಕತೆಗೆ ಸಿದ್ಧ: ಅಮೆರಿಕ ಮತ್ತು ಉತ್ತರ ಕೊರಿಯಾದ ಕಲಹ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವಂತೆಯೇ, ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಜತೆ ಫೋನ್‌ನಲ್ಲಿ ಮಾತುಕತೆ ನಡೆಸಲು ನಾನು ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ಕಿಮ್‌ ಜತೆಗೆ ಮಾತನಾಡಲು ನನಗೆ ಯಾವ ಅಭ್ಯಂತರವೂ ಇಲ್ಲ ಎಂದಿದ್ದಾರೆ. ಟ್ರಂಪ್‌ ಹಾಗೂ ಕಿಮ್‌ ಮಧ್ಯೆ ಪದೇ ಪದೆ ವಾಗ್ವಾದ ನಡೆಯುತ್ತಿದ್ದು, ಪ್ರತಿ ಬಾರಿ ಉತ್ತರ ಕೊರಿಯಾ ಅಣ್ವಸ್ತ್ರ ಕ್ಷಿಪಣಿಗಳನ್ನು ಪರೀಕ್ಷಿಸಿದಾಗಲೂ ಉಭಯ ದೇಶಗಳ ಮುಖಂಡರ ವಾಕ್ಸಮರ ತಾರಕ್ಕೇರುತ್ತದೆ.

ಹುರಿಯತ್‌ ನಾಯಕರ ವಿರುದ್ಧ ಶೀಘ್ರ ಚಾರ್ಜ್‌ಶೀಟ್‌ 
ಜಮ್ಮು-ಕಾಶ್ಮೀರದಲ್ಲಿ ಉಗ್ರರಿಗೆ ಹಣಕಾಸು ಪೂರೈಸಿದ ಆರೋಪಕ್ಕೆ ಸಂಬಂಧಿಸಿ ಎನ್‌ಐಎ  ಇದೇ ತಿಂಗಳಲ್ಲಿ ಹುರಿಯತ್‌ ನಾಯಕರ ವಿರುದ್ಧ ಆರೋಪಪಟ್ಟಿ ದಾಖಲಿಸಲಿದೆ. ಈಗಾಗಲೇ ಸಂಸ್ಥೆಯು ಇದಕ್ಕೆ ಕೇಂದ್ರ ಗೃಹ ಸಚಿವಾಲಯದ ಅನುಮತಿ ಕೋರಿದೆ. ಆರೋಪಪಟ್ಟಿಯಲ್ಲಿ ಹುರಿಯತ್‌ ನಾಯಕರಾದ ನಯೀಂ ಖಾನ್‌, ಜೆಕೆಎಲ್‌ಎಫ್ ನಾಯಕ ಫಾರೂಕ್‌ ಅಹ್ಮದ್‌ ದರ್‌, ಮಿರ್ವೇಜ್‌ ಉಮರ್‌ ಫಾರೂಕ್‌ನ ಆಪ್ತ ಸಹಚರ ಅಫ್ತಾಬ್‌ ಹಿಲಾಲಿ ಶಾ, ಗಿಲಾನಿಯ ಅಳಿಯ ಅಲ್ತಾಫ್ ಅಹ್ಮದ್‌, ತೆಹ್ರೀಕ್‌-ಇ-ಹುರಿಯತ್‌ ವಕ್ತಾರ ಆಯಾಜ್‌ ಖಾನ್‌ ಸೇರಿದಂತೆ ಅನೇಕರ ಹೆಸರುಗಳಿವೆ. ಕಣಿವೆ ರಾಜ್ಯದಲ್ಲಿ ಉಗ್ರರಿಗೆ ಹಣಕಾಸು ಪೂರೈಸಿದ, ವಿಧ್ವಂಸಕ ಕೃತ್ಯ ಎಸಗಿದ ಆರೋಪ ಇವರ ಮೇಲೆ ಹೊರಿಸಲಾಗಿದೆ. ಇದೇ ವೇಳೆ, ಭಾರತ-ಪಾಕ್‌ ನಡುವೆ ಉತ್ತಮ ಬಾಂಧವ್ಯ ಏರ್ಪಡುವ ನಿಟ್ಟಿನಲ್ಲಿ ಎರಡೂ ದೇಶಗಳ ನಾಯಕರು ಹೆಜ್ಜೆಯಿಡಬೇಕು ಎಂದು ಜಮ್ಮು-ಕಾಶ್ಮೀರ ಸಿಎಂ ಮೆಹಬೂಬಾ ಹೇಳಿದ್ದಾರೆ.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.