Yemen; ವಲಸಿಗರ ಬೋಟ್ ಮುಳುಗಿ ಕನಿಷ್ಠ 13 ಮಂದಿ ಸಾವು, 14 ಮಂದಿ ನಾಪತ್ತೆ
ದುರಂತವು ವಲಸಿಗರು ಎದುರಿಸುತ್ತಿರುವ ಅಪಾಯಗಳಿಗೆ ಸಾಕ್ಷಿ...
Team Udayavani, Aug 25, 2024, 9:29 PM IST
ಸನಾ: ಯಮನ್ ಕರಾವಳಿಯಲ್ಲಿ ವಲಸಿಗರ ದೋಣಿ ಮುಳುಗಿ ಕನಿಷ್ಠ 13 ಜನರು ಸಾವನ್ನಪ್ಪಿ, 14 ಮಂದಿ ನಾಪತ್ತೆಯಾಗಿದ್ದಾರೆ ಎಂದು ವಿಶ್ವಸಂಸ್ಥೆಯ ವಲಸೆ ಸಂಸ್ಥೆ ತಿಳಿಸಿದೆ.
ಯೆಮನ್ನ ತೈಜ್ ಗವರ್ನರೇಟ್ನ ಕರಾವಳಿಯಲ್ಲಿ ಮಂಗಳವಾರ ವಲಸಿಗರ ದೋಣಿ ಮುಳುಗಿದೆ ಎಂದು ಇಂಟರ್ನ್ಯಾಶನಲ್ ಆರ್ಗನೈಸೇಶನ್ ಫಾರ್ ಮೈಗ್ರೇಷನ್ ( IOM) ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ.
25 ಇಥಿಯೋಪಿಯನ್ನರು ಮತ್ತು ಇಬ್ಬರು ಯೆಮನ್ ಪ್ರಜೆಗಳನ್ನು ಹೊತ್ತು ಜಿಬೌಟಿಯಿಂದ ಹೊರಟಿದ್ದ ಬೋಟ್ ಬಾನಿ ಅಲ್-ಹಕಮ್ ಉಪಜಿಲ್ಲೆಯ ದುಬಾಬ್ ಬಳಿ ಮುಳುಗಿದೆ. ಯೆಮನ್ ಕ್ಯಾಪ್ಟನ್ ಮತ್ತು ಅವರ ಸಹಾಯಕ ಸೇರಿದಂತೆ ಕಾಣೆಯಾದವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಸತ್ತವರಲ್ಲಿ ಹನ್ನೊಂದು ಪುರುಷರು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ ಎಂದು IOM ತಿಳಿಸಿದೆ.
“ಈ ದುರಂತವು ಈ ಮಾರ್ಗದಲ್ಲಿ ವಲಸಿಗರು ಎದುರಿಸುತ್ತಿರುವ ಅಪಾಯಗಳಿಗೆ ಸಾಕ್ಷಿಯಾಗಿದೆ ಎಂದು ಯೆಮನ್ನಲ್ಲಿ IOM ನ ಕಾರ್ಯಾಚರಣೆಯ ಮುಖ್ಯಸ್ಥ ಮ್ಯಾಟ್ ಹ್ಯೂಬರ್ ಹೇಳಿದ್ದಾರೆ.
ಸಾವಿರಾರು ನಿರಾಶ್ರಿತರು ಮತ್ತು ವಲಸಿಗರು ಆಫ್ರಿಕಾದಿಂದ ಹೊರಟು, ಸಂಘರ್ಷ, ನೈಸರ್ಗಿಕ ವಿಪತ್ತುಗಳು ಅಥವಾ ಕಳಪೆ ಆರ್ಥಿಕ ನಿರೀಕ್ಷೆಗಳಿಂದ ಪಾರಾಗಲು ಮತ್ತು ತೈಲ-ಸಮೃದ್ಧ ಗಲ್ಫ್ ದೇಶಗಳನ್ನು ತಲುಪುವ ಪ್ರಯತ್ನ ಮಾಡುತ್ತಾರೆ. 2023 ರಲ್ಲಿ ಯೆಮನ್ನಲ್ಲಿ 97,200 ಕ್ಕೂ ಹೆಚ್ಚು ಮಂದಿಯ ಆಗಮನವನ್ನು ದಾಖಲಿಸಿದ್ದು, ಹಿಂದಿನ ವರ್ಷಗಳ ಸಂಖ್ಯೆಯನ್ನು ಮೀರಿಸಿದೆ.
ಯೆಮೆನ್ ತಲುಪುವ ಜನರು ತಮ್ಮ ಸುರಕ್ಷತೆಗೆ ಹೆಚ್ಚಿನ ಬೆದರಿಕೆಗಳನ್ನು ಎದುರಿಸುತ್ತಾರೆ. ಅನೇಕ ಜನರು ಸೌದಿ ಅರೇಬಿಯಾ ಮತ್ತು ಇತರ ಗಲ್ಫ್ ದೇಶಗಳಿಗೆ ಕಾರ್ಮಿಕರಾಗಿ ಅಥವಾ ಮನೆಕೆಲಸಗಾರರಾಗಲು ಪ್ರಯತ್ನಿಸುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್
Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?
Cyclone: ಯಾಗಿ ಚಂಡಮಾರುತಕ್ಕೆ ದಕ್ಷಿಣ ಏಷ್ಯಾದಲ್ಲಿ 500 ಮಂದಿ ಸಾವು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.