Balochistan ಸ್ವಾತಂತ್ರ್ಯ ಕಿಚ್ಚು: 102 ಪಾಕಿಸ್ಥಾನಿ ಸೈನಿಕರ ಹತ್ಯೆ?

 ಬಲೂಚ್‌ ಲಿಬರೇಶನ್‌ ಆರ್ಮಿಯಿಂದ ಸರಣಿ ದಾಳಿ

Team Udayavani, Aug 27, 2024, 6:30 AM IST

1-pakk

ಕರಾಚಿ: ಜಮ್ಮು-ಕಾಶ್ಮೀರದಲ್ಲಿ ಸ್ವಾತಂತ್ರ್ಯದ ಹೆಸರಲ್ಲಿ ಭಯೋತ್ಪಾದಕ ಕೃತ್ಯಗಳನ್ನು ಎಸಗಲು ಕುಮ್ಮಕ್ಕು ಕೊಡುತ್ತಿರುವ ಪಾಕಿಸ್ಥಾನದಲ್ಲೇ ಈಗ ರಕ್ತ ಪಾತವಾಗುತ್ತಿದೆ. ಅಲ್ಲಿನ ಬಲೂಚಿಸ್ಥಾನದಲ್ಲಿ ಸ್ವಾತಂತ್ರ್ಯದ ಕಿಚ್ಚು ವ್ಯಾಪಿಸಿದ್ದು, ವಿವಿಧ ಸ್ಥಳಗಳಲ್ಲಿ ಸರಣಿ ವಿಧ್ವಂಸಕ ಕೃತ್ಯಗಳು ನಡೆದಿವೆ.

ಬಲೂಚಿಸ್ಥಾನದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸುತ್ತಿದ್ದೇವೆ ಎಂದು ಹೇಳಿಕೊಳ್ಳುವ ಬಲೂಚಿಸ್ಥಾನ ಲಿಬರೇಶನ್‌ ಆರ್ಮಿ (ಬಿಎಲ್‌ಎ) ಸೋಮವಾರ ಪಾಕಿಸ್ಥಾನದ 102 ಸೈನಿಕರನ್ನು ಹತ್ಯೆಗೈದಿರುವುದಾಗಿ ಹೇಳಿಕೊಂಡಿದೆ. ಸಂಘಟನೆಯ “ಮಜೀದ್‌ ಬ್ರಿಗೇಡ್‌’ ಸದಸ್ಯರು ಸೋಮವಾರ ಬಲೂಚಿಸ್ಥಾನದ ಬೇಲಾ ಎಂಬಲ್ಲಿ ಪಾಕಿಸ್ಥಾನದ ಸೇನಾ ಕ್ಯಾಂಪ್‌ಗೆ ನುಗ್ಗಿ ದಾಂಧಲೆ ನಡೆಸಿದೆ. ಒಟ್ಟು 6 ತಾಸುಗಳ ಕಾಲ ದಾಳಿ ನಡೆಸಿದ್ದು,”ಆಪರೇಶನ್‌ ಹೆರಾಫ್’ ಅನ್ವಯ ಈ ಕಾರ್ಯಾಚರಣೆ ನಡೆಸಿರುವುದಾಗಿ ಸಂಘಟನೆ ಹೇಳಿದೆ. ಆದರೆ ಪಾಕಿಸ್ಥಾನ ಸರಕಾರವು ಒಟ್ಟು 40 ಸೈನಿಕರು ಹತರಾಗಿದ್ದಾರೆ ಎಂದು ಹೇಳಿಕೊಂಡಿದೆ.

ಮೊದಲಿಗೆ ಬಿಎಲ್‌ಎಯ ಇಬ್ಬರು ಸದಸ್ಯರು ಸ್ಫೋಟಕಗಳನ್ನು ತುಂಬಿರುವ ವಾಹನಗಳನ್ನು ಚಲಾಯಿಸಿಕೊಂಡು ಬಂದು ಸೇನಾ ಕ್ಯಾಂಪ್‌ನ ಮುಖ್ಯ ಗೇಟ್‌ಗೆ ನುಗ್ಗಿಸಿದರು. ಬಳಿಕ ಸೇನಾ ಕ್ಯಾಂಪ್‌ ಅನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದೇವೆ ಎಂದು ಸಂಘಟನೆ ಘೋಷಿಸಿದೆ. ಪಾಕ್‌ ಸೇನೆ ಉಗ್ರರ ವಿರುದ್ಧ ಪ್ರತಿದಾಳಿ ನಡೆಸಿ ಒಟ್ಟು 21 ಮಂದಿಯನ್ನು ಕೊಂದಿರುವುದಾಗಿ ಹೇಳಿದೆ.

ಮುಸಾಖೇಲ್‌ ಜಿಲ್ಲೆಯಲ್ಲಿ ಬಂದೂಕುಧಾರಿಗಳು ಹೆದ್ದಾರಿಯಲ್ಲಿ ಬಸ್‌ ಅನ್ನು ತಡೆದು ನಿಲ್ಲಿಸಿ, ಒಳಗಿದ್ದವರನ್ನು ಕೆಳಕ್ಕೆ ಇಳಿಸಿ, ಅವರ ಗುರುತಿನ ಚೀಟಿ ಪರಿಶೀಲಿಸಿದ ಬಳಿಕ ಗುಂಡು ಹಾರಿಸಿ 23 ಮಂದಿಯನ್ನು ಹತ್ಯೆಗೈದಿದ್ದಾರೆ. 10 ಮಂದಿ ಬಂದೂಕುಧಾರಿಗಳು ರಸ್ತೆಯನ್ನು ಅಡ್ಡಗಟ್ಟಿ ಕೃತ್ಯವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜತೆಗೆ 10ಕ್ಕೂ ಅಧಿಕ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಮುಸಾಖೇಲ್‌ ಜಿಲ್ಲೆ ಬಲೂಚಿಸ್ಥಾನ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾದಿಂದ 450 ಕಿ.ಮೀ. ದೂರದಲ್ಲಿದೆ. ಮೃತ ಬಸ್‌ ಪ್ರಯಾಣಿಕರಲ್ಲಿ ಇಬ್ಬರು ಅರೆಸೇನಾ ಪಡೆ ಯೋಧರಾಗಿದ್ದು, ಉಳಿದವರು ನಾಗರಿಕರು ಎಂದು ಪಾಕ್‌ ಸರಕಾರ ಹೇಳಿದೆ. ಆದರೆ ಬಸ್‌ನಲ್ಲಿದ್ದ ಎಲ್ಲರೂ ಸಿವಿಲ್‌ ಉಡುಗೆ ಧರಿಸಿದ್ದ ಪಾಕ್‌ ಸೈನಿಕರೇ ಆಗಿದ್ದು, ಗುರುತಿನ ಚೀಟಿ ಪರಿಶೀಲಿಸಿಯೇ ಕೊಂದಿದ್ದೇವೆ ಎಂದು ಬಲೂಚಿಸ್ಥಾನ ಲಿಬರೇಶನ್‌ ಆರ್ಮಿ ಹೇಳಿಕೊಂಡಿದೆ.

ಮತ್ತೊಂದು ಘಟನೆಯಲ್ಲಿ ಕಲಾತ್‌ ಎಂಬಲ್ಲಿ ಶಸ್ತ್ರಸಜ್ಜಿತ ಉಗ್ರರು ಐವರು ನಾಗರಿಕರು, 6 ಮಂದಿ ಸೈನಿಕರನ್ನು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಪಾಕಿಸ್ಥಾನದ ಜಿಯೋ ಸುದ್ದಿ ವಾಹಿನಿ ವರದಿ ಮಾಡಿರುವ ಪ್ರಕಾರ ಆ. 24ರಿಂದಲೇ ಬಲೂಚಿಸ್ಥಾನದ ವಿವಿಧ ಪ್ರದೇಶಗಳಲ್ಲಿ ಗ್ರೆನೇಡ್‌ ಎಸೆತ, ಗುಂಡು ಹಾರಾಟ ಸಹಿತ ಹಲವು ವಿಧ್ವಂಸಕ ಕೃತ್ಯಗಳು ನಡೆಯುತ್ತಿವೆ. ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಪಂಜಾಬ್‌ ಪ್ರಾಂತ್ಯದಲ್ಲಿ ಅಪರಿಚಿತ ಬಂದೂಕುಧಾರಿಗಳು 6 ಮಂದಿ ಯನ್ನು ಗುಂಡು ಹಾರಿಸಿ ಕೊಂದಿದ್ದರು. 2015ರಲ್ಲಿ ತುಬ್ರತ್‌ ಎಂಬ ಪ್ರದೇಶದಲ್ಲಿ 20 ಮಂದಿ ಕಟ್ಟಡ ನಿರ್ಮಾಣ ಕೆಲಸ ಗಾರರನ್ನು ಅಪರಿಚಿತ ಬಂದೂಕುಧಾರಿಗಳು ಕೊಂದಿದ್ದರು.
ಖಂಡನೆ: ಪಾಕಿಸ್ಥಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ, ಪ್ರಧಾನಿ ಶೆಹಬಾಜ್‌ ಷರೀಫ್ ಸಹಿತ ಪ್ರಮುಖರು ಈ ದಾಳಿಗಳನ್ನು ಖಂಡಿಸಿದ್ದಾರೆ. ಜತೆಗೆ ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ವಿಧಿಸುವುದಾಗಿಯೂ ಹೇಳಿದ್ದಾರೆ.

40 ಮಂದಿಯ ಹತ್ಯೆ
ಮತ್ತೂಂದೆಡೆ, ಸೋಮವಾರವೇ 2 ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 40 ಮಂದಿ ಪ್ರಾಣ ಕಳೆದು ಕೊಂಡಿದ್ದಾರೆ.

ಟಾಪ್ ನ್ಯೂಸ್

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

1-trfff

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

Auction of more than 600 gifts received by Modi has started

Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು

Panamburu

Mangaluru: ಕಿರಿದಾಗುತ್ತಿದೆ‌ ಪಣಂಬೂರು ಬೀಚ್‌! ಇನ್ನೂ ಖಚಿತವಾಗದ ಕಾರಣ

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-trfff

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Cyclone Yagi hits south asia

Cyclone: ಯಾಗಿ ಚಂಡಮಾರುತಕ್ಕೆ ದಕ್ಷಿಣ ಏಷ್ಯಾದಲ್ಲಿ 500 ಮಂದಿ ಸಾವು

Lebon1

Pagers explode: ಲೆಬನಾನ್‌ನಲ್ಲಿ ಸ್ಫೋಟ: 8 ಮಂದಿ ಮೃತ್ಯು, 2,700ಕ್ಕೂ ಅಧಿಕ ಮಂದಿಗೆ ಗಾಯ

taliban

Afghanistan; ಪೋಲಿಯೋ ಲಸಿಕೆಗೆ ತಾಲಿಬಾನ್‌ ತಡೆ: ವಿಶ್ವಸಂಸ್ಥೆ ಆರೋಪ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-yellapur

Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

police

Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.