ಮೋದಿ- ಟ್ರಂಪ್ ಭೇಟಿ ವೇಳೆ ವೀಸಾ ಚರ್ಚೆ ಇಲ್ಲ?
Team Udayavani, Jun 23, 2017, 3:45 AM IST
ವಾಷಿಂಗ್ಟನ್/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರದಿಂದ 2 ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಭಾರತದ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಮಾರಕ ಎಂದೇ ಬಣ್ಣಿಸಲಾಗುತ್ತಿರುವ ಎಚ್1ಬಿ ವೀಸಾ ವಿಚಾರದ ಬಗ್ಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜತೆ ಪ್ರಸ್ತಾಪ ಮಾಡಲಾರರು ಎಂದು ಹೇಳಲಾಗುತ್ತಿದೆ. ಕೆಲ ದಿನಗಳ ಹಿಂದೆ ಎರಡೂ ನಾಯಕರೂ ಮೊದಲ ಬಾರಿಗೆ ನಡೆ ಸುವ ಭೇಟಿ-ಮಾತುಕತೆಯಲ್ಲಿ ವೀಸಾ ವಿಚಾರ ಪ್ರಸ್ತಾಪವಾಗಲಿದೆ ಎಂದು ಹೇಳಲಾಗಿತ್ತು. ಇದರ ಹೊರತಾಗಿಯೂ ದೇಶದ ಮಾಹಿತಿ ತಂತ್ರಜ್ಞಾನ ಸಂಸ್ಥೆ ಮುಖ್ಯಸ್ಥರು ಪ್ರಧಾನಿ ಈ ವಿಚಾರ ಪ್ರಸ್ತಾಪಿಸುವರು ಎಂಬ ವಿಶ್ವಾಸದಲ್ಲಿದ್ದಾರೆ.
ಮೋದಿ ಪ್ರವಾಸದ ವೇಳೆ ಆ್ಯಪಲ್ ಸಿಇಒ ಟಿಮ್ ಕುಕ್, ವಾಲ್ಮಾರ್ಟ್ ಮುಖ್ಯಸ್ಥ ಡಾಗ್ ಮ್ಯಾಕ್ಮಿಲನ್, ಮ್ಯಾರಿಯಟ್ ಇಂಟರ್ನ್ಯಾಷ ನಲ್ ಆರ್ನೆ ಸೊರೆನ್ಸನ್ ಸೇರಿ ಹಲವು ಕೈಗಾರಿಕೆ ಮತ್ತು ಉದ್ದಿಮೆ ಕ್ಷೇತ್ರದ ಮುಖ್ಯಸ್ಥರನ್ನು ಭೇಟಿ ಯಾಗಿ ದೇಶದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ನೋಟು ಅಮಾನ್ಯ ಘೋಷಣೆ, ಜು.1ರಿಂದ ಜಾರಿಯಾಗುವ ಜಿಎಸ್ಟಿಯಿಂದಾಗಿ ಉಂಟಾಗಲಿರುವ ಪರಿಣಾ ಮಗಳ ಬಗ್ಗೆಯೂ ಪಿಎಂ ಚರ್ಚಿಸಲಿದ್ದಾರೆ.
26ಕ್ಕೆ ಟ್ರಂಪ್ ಭೇಟಿ
ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಧ್ಯಕ್ಷ ಟ್ರಂಪ್ರನ್ನು ಮೊದಲ ಬಾರಿಗೆ ಭೇಟಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ನೌಕಾಪಡೆಗೆ ಅಗತ್ಯವಾಗಿರುವ 22 ಗೂಢಚಾರ ಡ್ರೋನ್ಗಳ ಖರೀದಿ ಬಗ್ಗೆ ಹೆಚ್ಚಿನ ಒತ್ತು ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Iceland: 8 ವರ್ಷ ಬಳಿಕ ಐಸ್ಲ್ಯಾಂಡ್ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Israel- ಹೆಜ್ಬುಲ್ಲಾ ನಡುವೆ ಬಾಂಬ್ಗಳ ಸುರಿಮಳೆ! ; 100 ರಾಕೆಟ್ ಲಾಂಚರ್ ಧ್ವಂಸ
Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್
Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ
Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್
Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ
Belagavi; 2ಎ ಮೀಸಲಾತಿ ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.