China; ರಜೆಯಿಲ್ಲದೆ 104 ದಿನ ಕೆಲಸ ಮಾಡಿದ ವ್ಯಕ್ತಿ ಸಾವು; ಸಿಕ್ಕ ಪರಿಹಾರ ಎಷ್ಟು ಗೊತ್ತಾ?


Team Udayavani, Sep 9, 2024, 6:07 PM IST

China; ರಜೆಯಿಲ್ಲದೆ 104 ದಿನ ಕೆಲಸ ಮಾಡಿದ ವ್ಯಕ್ತಿ ಸಾವು; ಸಿಕ್ಕ ಪರಿಹಾರ ಎಷ್ಟು ಗೊತ್ತಾ?

ಬೀಜಿಂಗ್: ಪ್ರತಿಯೊಂದು ಕಂಪೆನಿಯಲ್ಲಿ ಉದ್ಯೋಗಿಗಳಿಗೆ ವಾರದ ರಜೆ ಇರುತ್ತದೆ. ಕೆಲವು ಕಂಪೆನಿಗಳಲ್ಲಿ ವಾರದಲ್ಲಿ ಎರಡು ದಿನ ರಜೆಯೂ ಸಿಗುತ್ತದೆ. ಆದರೆ ‌ ಯಾವುದೇ ರಜೆ ಪಡೆಯದೆ ಸತತ ಕೆಲಸ ಮಾಡಿದರೆ ಏನಾಗುತ್ತದೆ? 104 ದಿನಗಳ ಕಾಲ ರಜೆ ಪಡೆಯದೆ ಕೆಲಸ ಮಾಡಿದ ಚೀನಾದ ವ್ಯಕ್ತಿಯೊಬ್ಬರು ಅಂಗಾಂಗ ವೈಫಲ್ಯದಿಂದ (Organ Failure) ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.

30 ವರ್ಷದ ಚೀನಾದ ವ್ಯಕ್ತಿಯೊಬ್ಬರು ಕೇವಲ ಒಂದು ದಿನದ ರಜೆ ಪಡೆದು ಸತತ 104 ದಿನ ಕೆಲಸ ಮಾಡಿ ಅಂಗಾಂಗ ವೈಫಲ್ಯದಿಂದ ಬಳಲಿ ಸಾವನ್ನಪ್ಪಿದ್ದಾರೆ. ಆತನ ಕೆಲಸದ ಮಾಲೀಕ ಆತನ ಸಾವಿಗೆ 20 ಪ್ರತಿಶತದಷ್ಟು ಹೊಣೆಗಾರ ಎಂದು ನ್ಯಾಯಾಲಯವು ತೀರ್ಪು ನೀಡಿದೆ.

ವೃತ್ತಿಯಲ್ಲಿ ಪೈಂಟರ್‌ ಆಗಿದ್ದ ಅಬಾವೊ ಎಂಬಾತ ಶ್ವಾಸಕೋಶದ ಸೋಂಕಿಗೆ ಒಳಗಾಗಿದ್ದ. ಅಂತಿಮವಾಗಿ ಅದು 2023 ರ ಜೂನ್ ನಲ್ಲಿ ಅವರ ಸಾವಿಗೆ ಕಾರಣವಾಯಿತು ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ.

ವರದಿಯ ಪ್ರಕಾರ, ಅಬಾವೊ ಕಳೆದ ವರ್ಷ ಫೆಬ್ರವರಿಯಲ್ಲಿ ಒಪ್ಪಂದಕ್ಕೆ ಸಹಿ ಹಾಕಿದ್ದರು. ಝೆಜಿಯಾಂಗ್ ಪ್ರಾಂತ್ಯದ ಝೌಶಾನ್‌ ನಲ್ಲಿ ಕೆಲಸ ಒಪ್ಪಿಕೊಂಡಿದ್ದರು. ಫೆಬ್ರವರಿಯಿಂದ ಮೇವರೆಗೆ ಅವರು ಪ್ರತಿದಿನ ಕೆಲಸ ಮಾಡಿದ್ದಾರೆ. ಮಧ್ಯದಲ್ಲಿ ಏಪ್ರಿಲ್‌ 6ರಂದು ಒಂದು ದಿನ ಮಾತ್ರ ರಜೆ ಪಡೆದಿದ್ದರು. ಮೇ 25ರಂದು ಅನಾರೋಗ್ಯವೆಂದು ರಜೆ ಮಾಡಿದ್ದರು. ಆದರೆ ಅಲ್ಲಿಂದ ಅವರ ಆರೋಗ್ಯ ಪರಿಸ್ಥಿತಿ ಹದಗೆಟ್ಟಿತ್ತು. ಹೀಗಾಗಿ ಮೇ 28ರಂದು ಅವರು ಆಸ್ಪತ್ರೆಗೆ ದಾಖಲಾಗಿದ್ದರು.

ಜೂನ್‌ 1ರಂದು ಅಬಾವೊ ಅಸುನೀಗಿದ್ದರು. ಅವರು ನ್ಯುಮೋಕೊಕಲ್ ಸೋಂಕು ಮತ್ತು ಉಸಿರಾಟದ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.

ಅಬಾವೊ ಸಾವಿನ ಬಳಿಕ ಮಾಲಿಕನ ನಿರ್ಲಕ್ಷ್ಯದ ವಿರುದ್ದ ಅಬಾವೊ ಕುಟುಂಬ ಕಾನೂನು ಸಮರ ಆರಂಭಿಸಿತ್ತು. ಝೌಶನ್ ಇಂಟರ್ಮೀಡಿಯೇಟ್ ಪೀಪಲ್ಸ್ ಕೋರ್ಟ್ ಅಬಾವೊ ಅವರ ಸಾವಿಗೆ ಕಂಪನಿಯು ಶೇಕಡಾ 20 ರಷ್ಟು ಹೊಣೆಗಾರ ಎಂದು ತೀರ್ಪು ನೀಡಿದೆ. 104 ದಿನಗಳ ಕೆಲಸದ ವಿಸ್ತರಣೆಯು ಚೀನೀ ಕಾರ್ಮಿಕ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ತೀರ್ಪು ನೀಡಿದೆ. ನಿಯಮದ ಪ್ರಕಾರ ಗರಿಷ್ಠ ಎಂಟು ಕೆಲಸದ ಸಮಯವನ್ನು ಮತ್ತು ವಾರಕ್ಕೆ ಸರಾಸರಿ 44 ಗಂಟೆಗಳ ಕಾಲ ಕಡ್ಡಾಯವಾಗಿದೆ.

ವರದಿಯ ಪ್ರಕಾರ, ನ್ಯಾಯಾಲಯವು ಅಬಾವೊ ಅವರ ಕುಟುಂಬಕ್ಕೆ 4,00,000 ಯುವಾನ್ (ಅಂದಾಜು ರೂ 47,46,000) ಪರಿಹಾರವನ್ನು ನೀಡಲು ಸೂಚಿಸಿದೆ. ಜೊತೆಗೆ 10,000 ಯುವಾನ್ (ಅಂದಾಜು ರೂ 1,17,000) ಭಾವನಾತ್ಮಕ ಯಾತನೆಗಾಗಿ ನೀಡಿತು. ಕಂಪನಿಯ ಮೇಲ್ಮನವಿ ವಿಫಲವಾಗಿದೆ.

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

taliban

Afghanistan; ಪೋಲಿಯೋ ಲಸಿಕೆಗೆ ತಾಲಿಬಾನ್‌ ತಡೆ: ವಿಶ್ವಸಂಸ್ಥೆ ಆರೋಪ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Elon Musk: ಬೈಡೆನ್‌, ಕಮಲಾ ಮೇಲೇಕೆ ಹ*ತ್ಯಾ ಪ್ರಯತ್ನ ನಡೆಯುತ್ತಿಲ್ಲ? ಎಲಾನ್‌ ಮಸ್ಕ್

Elon Musk: ಬೈಡೆನ್‌, ಕಮಲಾ ಮೇಲೇಕೆ ಹ*ತ್ಯಾ ಪ್ರಯತ್ನ ನಡೆಯುತ್ತಿಲ್ಲ?ಎಲಾನ್‌ ಮಸ್ಕ್

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

Sheik Hasina

Bangladesh; ಕೊ*ಲೆ ಆರೋಪ: ಹಸೀನಾ ವಿರುದ್ಧ 155ನೇ ಪ್ರಕರಣ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.