![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Oct 19, 2019, 7:00 PM IST
ವಾಷಿಂಗ್ಟನ್ : ಕಾರ್ಪೊರೇಟ್ ವಲಯದಲ್ಲಿನ ಆದಾಯ ತೆರಿಗೆಯ ದರ ಕಡಿತಗೊಳಿಸುವಲ್ಲಿ ಭಾರತ ತೆಗೆದುಕೊಂಡಿರುವ ನಿರ್ಧಾರಕ್ಕೆ ನಮ್ಮ ಬೆಂಬಲಿವಿದೆ ಎಂದು ಹೇಳಿರುವ ಅಂತರರಾಷ್ಟ್ರೀಯ ಹಣಕಾಸು ನಿಧಿ ಸಂಸ್ಥೆ, ಈ ನಿರ್ಧಾರದಿಂದ ಹೂಡಿಕೆಯ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಅಭಿಪ್ರಾಯಪಟ್ಟಿದೆ.
ಭಾರತ ಸದ್ಯ ಸೀಮಿತ ಹಣಕಾಸಿನ ಪರಿಸ್ಥಿತಿಯನ್ನು ಹೊಂದಿದ್ದು, ಜಾಗರೂಕತೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಹಾಗಾಗಿ ಭಾರತ ಕೆಲ ದಿನಗಳ ಹಿಂದೆ ಜಾರಿ ಮಾಡಿರುವ ಆದಾಯ ತೆರಿಗೆ ಕಡಿತ ನೀತಿಗೆ ನಮ್ಮ ಸಂಪೂರ್ಣ ಬೆಂಬಲವಿದ್ದು, ಇದರಿಂದ ಹೂಡಿಕೆಯ ವಲಯದಲ್ಲಿ ಬಂಡವಾಳದ ಮಟ್ಟ ಏರಿಕೆಯಾಗಲಿದೆ ಎಂದು ಐಎಂಎಫ್ನ ಏಷ್ಯಾ ಮತ್ತು ಪೆಸಿಫಿಕ್ ವಿಭಾಗದ ನಿರ್ದೇಶಕ ಚಾಂಗ್ಯಾಂಗ್ ರೀ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಕಳೆದ ಎರಡು ತ್ತೈಮಾಸಿಕಗಳಲ್ಲಿ ಭಾರತ ಆಟೋಮೊಬೈಲ್ ವಲಯದಲ್ಲಿ ಗಮನಾರ್ಹ ಕುಸಿತ ಕಂಡರೂ ಅನಂತರದ ದಿನಗಳಲ್ಲಿ ಸುಧಾರಿತ ಕ್ರಮಗಳನ್ನು ಕೈಗೊಂಡಿದ್ದು, ಆರ್ಥಿಕ ವಲಯದಲ್ಲಿ ಸಾಕಷ್ಟು ಸುಧಾರಣೆಗಳಾಗಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಜತೆಗೆ ಈ ಆರ್ಥಿಕ ವರ್ಷದಲ್ಲಿ ಆರ್ಥಿಕತೆ ಬೆಳವಣಿಗೆಯಲ್ಲಿ ಶೇ.6.1 ಕ್ಕೆ ಏರಿಕೆಯಾಗುವ ನಿರೀಕ್ಷೆಯಿದ್ದು, 2020 ರಲ್ಲಿ ಇದು ಶೇ.7.0 ರಷ್ಟು ಆಗಲಿದೆ ಎಂದು ಅವರು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಐಎಂಎಫ್ ಉನ್ನತ ಅಧಿಕಾರಿ ಮಾತನಾಡಿದ್ದು, ಪ್ರಚೋದನಕಾರಿ ವಿತ್ತೀಯ ನೀತಿ ಮತ್ತು ಘೋಷಿತ ಕಾರ್ಪೊರೇಟ್ ಆದಾಯ ತೆರಿಗೆ ಕಡಿತವು ಹೂಡಿಕೆಯನ್ನು ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
You seem to have an Ad Blocker on.
To continue reading, please turn it off or whitelist Udayavani.