ದ.ಆಫ್ರಿಕಾದ ಹೋರಾಟಗಾರ, ನೊಬೆಲ್‌ ಪುರಸ್ಕೃತ ಡೆಸ್ಮಂಡ್‌ ಟುಟು ನಿಧನ


Team Udayavani, Dec 26, 2021, 9:30 PM IST

Untitled-1

ಜೊಹಾನ್ಸ್‌ಬರ್ಗ್‌/ನವದೆಹಲಿ: ದಕ್ಷಿಣ ಆಫ್ರಿಕಾದ ಧರ್ಮಗುರು, ವರ್ಣಭೇದ ನೀತಿ ವಿರೋಧಿ ಹೋರಾಟಗಾರ, ನೊಬೆಲ್‌ ಪುರಸ್ಕೃತ  ಡೆಸ್ಮಂಡ್‌ ಟುಟು (90) ಭಾನುವಾರ ಕೊನೆಯುಸಿರೆಳೆದಿದ್ದಾರೆ.

ಭಾನುವಾರ ಬೆಳಗಿನ ಜಾವ ಕೇಪ್‌ ಟೌನ್‌ನಲ್ಲಿ ಅವರು ಅಸುನೀಗಿದ್ದಾಗಿ ದ. ಆಫ್ರಿಕಾ ಅಧ್ಯಕ್ಷ ಸಿರಿಲ್‌ ರಾಮಫೋಸಾ ಪ್ರಕಟಿಸಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ಕಪ್ಪು ವರ್ಣೀಯರ ವಿರುದ್ಧ ನಡೆಯುತ್ತಿದ್ದ ಅನ್ಯಾಯ ಮತ್ತು ಅಕ್ರಮಗಳ ವಿರುದ್ಧ ದನಿಯೆತ್ತಿ, ಅವರಿಗಾಗಿ ಹೋರಾಟ ನಡೆಸಿದ ಹೆಗ್ಗಳಿಕೆ ಅವರದ್ದು. ಅಹಿಂಸಾತ್ಮಕವಾಗಿಯೇ ಅಂಥ ಕಿರುಕುಳದ ವಿರುದ್ಧ ಹೋರಾಟ ನಡೆಸಿ ಗೆದ್ದಿದ್ದಾರೆ. ಇದರ ಜತೆಗೆ ತೃತೀಯ ಲಿಂಗಿಗಳ ಪರವಾಗಿ ಹೋರಾಟ ನಡೆಸಿದ್ದ ಅವರಿಗೆ 1984ರಲ್ಲಿ ನೊಬೆಲ್‌ ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಅವರು ಕೇಪ್‌ಟೌನ್‌ನಲ್ಲಿ ಆರ್ಚ್‌ಬಿಷಪ್‌ ಆಗಿಯೂ ಕಾರ್ಯನಿರ್ವಹಿಸಿದ್ದರು.

ವಿಶ್ವಾದ್ಯಂತ ಗಣ್ಯರ ಕಂಬನಿ:

ದಕ್ಷಿಣ ಆಫ್ರಿಕಾದ ಸಾಕ್ಷಿಪ್ರಜ್ಞೆಯಾಗಿದ್ದ ಡೆಸ್ಮಂಡ್‌ ಟುಟು ಅವರ ಅಗಲಿಕೆಗೆ ದೇಶ-ವಿದೇಶಗಳ ಗಣ್ಯರು ಕಂಬನಿ ಮಿಡಿದಿದ್ದಾರೆ. ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, “ತೃತೀಯ ಲಿಂಗಿಗಳಿಗೂ ಸಮಾನ ಹಕ್ಕುಗಳು ಸಿಗಬೇಕು ಎಂದು ಡೆಸ್ಮಂಡ್‌ ಟುಟು ಅವಿರತ ಹೋರಾಟ ನಡೆಸಿದ್ದರು. ಅವರ ಹೋರಾಟ ಜಗತ್ತಿನ ಅಸಂಖ್ಯಾತ ಮಂದಿಗೆ ಬೆಳಕಾಗಿ ಮುಂದುವರಿಯಲಿ. ಜನಾಂಗೀಯ ನಿಂದನೆ ವಿರುದ್ಧ ನಡೆಸಿದ ಅಹಿಂಸಾತ್ಮಕ ಹೋರಾಟ ಅನುಸರಣೀಯ. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಹಲವು ಗಣ್ಯರು, ಜಗತ್ತಿನ ಇತರ ದೇಶಗಳ ಸರ್ಕಾರಿ ಮುಖ್ಯಸ್ಥರೂ ಟುಟು ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ಡೆಸ್ಮಂಡ್‌ ಟುಟು ಅವರೊಬ್ಬ ನೈಜ ಮಾನವತಾವಾದಿ. ಅವರು ನನ್ನ ಹಿರಿಯ ಸಹೋದರ ಮತ್ತು ಉತ್ತಮ ಸ್ನೇಹಿತರಾಗಿದ್ದರು. ಒಬ್ಬ ಶ್ರೇಷ್ಠ ವ್ಯಕ್ತಿಯನ್ನು ನಾವಿಂದು ಕಳೆದುಕೊಂಡಿದ್ದೇವೆ. ದಲೈ ಲಾಮಾ, ಟಿಬೆಟಿಯನ್‌ ಧರ್ಮಗುರು

ಟಾಪ್ ನ್ಯೂಸ್

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

Donald-Trumph

Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್‌ಗೆ ಟ್ರಂಪ್‌

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.