![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 12, 2022, 3:51 PM IST
ಕಾಂಬೋಡಿಯಾ : ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಉಕ್ರೇನ್ ನ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಅವರೊಂದಿಗೆ ಶನಿವಾರ ಸಭೆ ನಡೆಸಿದರು. ಉಭಯ ನಾಯಕರು ಪ್ರದೇಶದಲ್ಲಿನ ಇತ್ತೀಚಿನ ಬೆಳವಣಿಗೆಗಳು, ಪರಮಾಣು ಕಾಳಜಿಗಳು ಮತ್ತು ಉಕ್ರೇನ್ ಮೇಲಿನ ರಷ್ಯಾದ ಯುದ್ಧವನ್ನು ಕೊನೆಗೊಳಿಸುವ ಮಾರ್ಗಗಳ ಕುರಿತು ಚರ್ಚಿಸಿದರು.
ಕಾಂಬೋಡಿಯಾದ ರಾಜಧಾನಿಯಲ್ಲಿ ನಡೆದ ಆಸಿಯಾನ್-ಭಾರತ ಶೃಂಗಸಭೆಯ ಸಂದರ್ಭದಲ್ಲಿ ಜೈಶಂಕರ್ ಕುಲೇಬಾ ಅವರನ್ನು ಭೇಟಿಯಾದರು.
”ಉಕ್ರೇನ್ನ ಡಿಮಿಟ್ರೋ ಕುಲೆಬಾ ಅವರನ್ನು ಭೇಟಿಯಾಗಲು ಸಂತೋಷವಾಗಿದೆ. ನಮ್ಮ ಚರ್ಚೆಗಳು ಸಂಘರ್ಷದಲ್ಲಿನ ಇತ್ತೀಚಿನ ಬೆಳವಣಿಗೆಗಳು, ಉಪಕ್ರಮ ಮತ್ತು ಪರಮಾಣು ಕಾಳಜಿಗಳನ್ನು ಒಳಗೊಂಡಿವೆ” ಎಂದು ಎಸ್. ಜೈಶಂಕರ್ ಟ್ವೀಟ್ ಮಾಡಿದ್ದಾರೆ.
ಜೈಶಂಕರ್ ಅವರು ಆಸಿಯಾನ್-ಇಂಡಿಯಾ ಶೃಂಗಸಭೆ ಮತ್ತು 17 ನೇ ಪೂರ್ವ ಏಷ್ಯಾ ಶೃಂಗಸಭೆಗೆ ಭಾರತೀಯ ನಿಯೋಗವನ್ನು ಮುನ್ನಡೆಸುತ್ತಿರುವ ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ಅವರೊಂದಿಗೆ ಪ್ರವಾಸ ಕೈಗೊಂಡಿದ್ದಾರೆ.
ಡಿಮಿಟ್ರೋ ಕುಲೆಬಾ ಅವರು ಟ್ವೀಟ್ ಮಾಡಿ ದ್ವಿಪಕ್ಷೀಯ ಸಹಕಾರ ಮತ್ತು ಉಕ್ರೇನ್ ವಿರುದ್ಧ ರಷ್ಯಾದ ಯುದ್ಧವನ್ನು ಕೊನೆಗೊಳಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದ್ದೇವೆ ಎಂದು ಹೇಳಿದ್ದಾರೆ.
“ನನ್ನ ಭಾರತೀಯ ಸಹವರ್ತಿ ಎಸ್. ಜೈಶಂಕರ್ ಮತ್ತು ನಾನು ದ್ವಿಪಕ್ಷೀಯ ಸಹಕಾರ ಮತ್ತು ಉಕ್ರೇನ್ ಮೇಲಿನ ರಷ್ಯಾದ ಯುದ್ಧವನ್ನು ಕೊನೆಗೊಳಿಸುವ ಮಾರ್ಗಗಳ ಬಗ್ಗೆ ಚರ್ಚಿಸಲು ಭೇಟಿಯಾದೆವು. ರಷ್ಯಾ ತಕ್ಷಣವೇ ಮಾರಣಾಂತಿಕ ದಾಳಿಯನ್ನು ನಿಲ್ಲಿಸಬೇಕು, ಉಕ್ರೇನ್ನಿಂದ ಎಲ್ಲಾ ಪಡೆಗಳನ್ನು ಹಿಂತೆಗೆದುಕೊಳ್ಳಬೇಕು ಮತ್ತು ಶಾಂತಿಗೆ ಬದ್ಧವಾಗಿರಬೇಕು ಎಂದು ನಾನು ಒತ್ತಿಹೇಳಿದೆ. ನಾವು ಜಾಗತಿಕ ಆಹಾರ ಭದ್ರತೆಯತ್ತಲೂ ಗಮನ ಹರಿಸಿದ್ದೇವೆ ಎಂದು ಟ್ವೀಟ್ ನಲ್ಲಿ ಬರೆದಿದ್ದಾರೆ.
ಉಕ್ರೇನ್ ಮೇಲಿನ ರಷ್ಯಾದ ಆಕ್ರಮಣವನ್ನು ಭಾರತ ಇನ್ನೂ ಖಂಡಿಸಿಲ್ಲ ಮತ್ತು ರಾಜತಾಂತ್ರಿಕತೆ ಮತ್ತು ಮಾತುಕತೆಯ ಮೂಲಕ ಬಿಕ್ಕಟ್ಟನ್ನು ಪರಿಹರಿಸಬೇಕು ಎಂದು ಹೇಳುತ್ತಲೇ ಬಂದಿದೆ.
Pleasure to meet FM @DmytroKuleba of Ukraine.
Our discussions covered recent developments in the conflict, the grain initiative and nuclear concerns. pic.twitter.com/dPIjKfhBIh
— Dr. S. Jaishankar (@DrSJaishankar) November 12, 2022
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.