

Team Udayavani, Jun 29, 2024, 6:45 AM IST
ಸಿಂಗಾಪುರ: ಹಣಕಾಸು ಅಕ್ರಮ ವರ್ಗಾವಣೆ ಮತ್ತು ಉಗ್ರರಿಗೆ ಆರ್ಥಿಕ ನೆರವು ನಿಗ್ರಹದಲ್ಲಿ ಭಾರತದ ಸಾಧನೆ ಗಮನಾರ್ಹವಾದದ್ದು ಎಂದು ಅಂತಾರಾಷ್ಟ್ರೀಯ ಹಣಕಾಸು ಕಾರ್ಯಪಡೆ (ಎಫ್ಎಟಿಎಫ್) ಮೆಚ್ಚುಗೆ ವ್ಯಕ್ತಪಡಿಸಿದೆ.
ಸಿಂಗಾಪುರದಲ್ಲಿ ನಡೆದ ಎಫ್ಎಟಿಎಫ್ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಉಗ್ರ ಸಂಘಟನೆಗಳಿಗೆ ಹಣದ ಹರಿವು ತಡೆಯುವ ನಿಟ್ಟಿನಲ್ಲಿ ಭಾರತ ಸರಕಾರ ಕೈಗೊಂಡಿರುವ ಕ್ರಮಗಳು ಉತ್ತಮ ಫಲಿತಾಂಶ ನೀಡುತ್ತಿವೆ. 1 ವರ್ಷ ಕಾಲ ಭಾರತ ಸರಕಾರ ರೂಪಿಸಿದ ಕ್ರಮಗಳನ್ನು ಪರಿಶೀಲನೆಗೆ ಒಳಪಡಿಸಿದ ಬಳಿಕ ಈ ಅಭಿಪ್ರಾಯ ವ್ಯಕ್ತಪಡಿಸಲಾಗಿದೆ ಎಂದು ಕಾರ್ಯಪಡೆ ಹೇಳಿದೆ. ಆದರೆ ಹಣಕಾಸು ಅಕ್ರಮ ಮತ್ತು ಉಗ್ರರಿಗೆ ವಿತ್ತೀಯ ನೆರವು ನೀಡುವ ಪ್ರಕರಣಗಳಿಗೆ ಸಂಬಂಧಿಸಿದ ವಿಚಾರಣೆ ಇನ್ನೂ ವೇಗ ಪಡೆದುಕೊಳ್ಳಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದೆ.
ಉಗ್ರರನ್ನು ಮಟ್ಟ ಹಾಕಲು ಕೇಂದ್ರ ಕೈಗೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಹಣಕಾಸು ಗುಪ್ತಚರ ಸಂಸ್ಥೆಗಳ ಮೂಲಕ ಉಗ್ರರಿಗೆ ವಿತ್ತೀಯ ನೆರವು ನೀಡುವ ವ್ಯವಸ್ಥೆಗಳನ್ನು ಭಾರತ ಮಟ್ಟ ಹಾಕಿದೆ ಎಂದು ಕಾರ್ಯಪಡೆ ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿದ ವಿದೇಶಾಂಗ ಇಲಾಖೆ, “ಎಫ್ಎಟಿಎಫ್ ವರದಿಯು ಭಾರತದ ಆರ್ಥಿಕತೆಯ ಸ್ಥಿರತೆ, ಸಮಗ್ರತೆಯನ್ನು ಪ್ರತಿಬಿಂಬಿಸಿದೆ’ ಎಂದು ಹೇಳಿದೆ.
Pope Francis: ಪೋಪ್ ಶ್ವಾಸಕೋಶ ಸೋಂಕು ತೀವ್ರ: ಆರೋಗ್ಯ ಸ್ಥಿತಿ ಬಗ್ಗೆ ಕಳವಳ
Tesla:ಭಾರತದಲ್ಲಿ ಟೆಸ್ಲಾದಿಂದ 3-5 ಬಿಲಿಯನ್ ಡಾಲರ್ ಹೂಡಿಕೆ ನಿರೀಕ್ಷೆ: ಸರ್ಕಾರದ ಮೂಲಗಳು
India PM ಮೇಲೆ ನನಗೆ ಅಪಾರ ಗೌರವವಿದೆ, ಆದರೆ..: ಮಸ್ಕ್ ನಿರ್ಧಾರ ಸಮರ್ಥಿಸಿಕೊಂಡ ಟ್ರಂಪ್
Plane flips: ಲ್ಯಾಂಡಿಂಗ್ ವೇಳೆ ರನ್ ವೇಯಲ್ಲೇ ಪಲ್ಟಿ ಹೊಡೆದ ವಿಮಾನ… ಹಲವರಿಗೆ ಗಾಯ
Ukraine ಯುದ್ಧ ಸ್ಥಗಿತಕ್ಕೆ ಇಂದು ರಷ್ಯಾ-ಅಮೆರಿಕ ಸಭೆ: ಏನಿದು ಮಾತುಕತೆ?
You seem to have an Ad Blocker on.
To continue reading, please turn it off or whitelist Udayavani.