Texas; ಭೀಕರ ರಸ್ತೆ ಅವಘಡಲ್ಲಿ ನಾಲ್ವರು ಭಾರತೀಯರು ಸಜೀವ ದಹ*ನ!
Team Udayavani, Sep 4, 2024, 3:19 PM IST
ಟೆಕ್ಸಾಸ್ : ಅಮೆರಿಕದ ಅನ್ನಾದಲ್ಲಿ ಆ 30 ರಂದು ವಾಹನಗಳ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ತೆಲಂಗಾಣದ ಮೂವರು ಸೇರಿದಂತೆ ನಾಲ್ವರು ಭಾರತೀಯರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮೃತ ದುರ್ದೈವಿಗಳು ಹೈದರಾಬಾದ್ನ ಕುಕಟ್ಪಲ್ಲಿ ಉಪನಗರದ ಆರ್ಯನ್ ರಘುನಾಥ್ ಒರಂಪಟ್ಟಿ, ಅವರ ಸ್ನೇಹಿತ ಫಾರೂಕ್ ಶೇಖ್, ಲೋಕೇಶ್ ಪಾಲಾಚಾರ್ಲಾ ಮತ್ತು ತಮಿಳುನಾಡಿನ ದರ್ಶಿನಿ ವಾಸುದೇವ್ ಎಂದು ಗುರುತಿಸಲಾಗಿದೆ.
ಬೆಂಟೊನ್ವಿಲ್ಲೆಗೆ ಪ್ರಯಾಣಿಸಲು ನಾಲ್ವರು ಕಾರ್ಪೂಲಿಂಗ್ ಅಪ್ಲಿಕೇಶನ್ ಮೂಲಕ ಸಂಪರ್ಕ ಹೊಂದಿದ್ದರು. ಐದು ವಾಹನಗಳ ಘರ್ಷಣೆಯ ವೇಳೆ ವೇಗವಾಗಿ ಬಂದ ಟ್ರಕ್ ಅಪ್ಪಳಿಸಿ ಭೀಕರ ಅವಘಡ ಸಂಭವಿಸಿದೆ. ಭಾರತೀಯರು ಪ್ರಯಾಣಿಸುತ್ತಿದ್ದ ಎಸ್ ಯುವಿ ಗೆ ಅಪ್ಪಳಿಸಿದ ಪರಿಣಾಮ ಬೆಂಕಿ ಹೊತ್ತಿಕೊಂಡು ನಾಲ್ವರು ಸುಟ್ಟು ಕರಕಲಾಗಿದ್ದಾರೆ.
ಓರಂಪಟ್ಟಿ ಮತ್ತು ಶೇಖ್ ಅವರು ಡಲ್ಲಾಸ್ನಲ್ಲಿರುವ ಸೋದರ ಸಂಬಂಧಿಯನ್ನು ಭೇಟಿ ಮಾಡಿ ಹಿಂತಿರುಗುತ್ತಿದ್ದರು. ದರ್ಶಿನಿ ವಾಸುದೇವ್ ಟೆಕ್ಸಾಸ್ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿ ಅರ್ಕಾನ್ಸಾಸ್ನಲ್ಲಿರುವ ಚಿಕ್ಕಪ್ಪನನ್ನು ಭೇಟಿ ಮಾಡಲು ಹೊರಟಿದ್ದರು.
ದೀರ್ಘ ವಾರಾಂತ್ಯ ಮತ್ತು ಡಿಎನ್ಎ ಫಿಂಗರ್ಪ್ರಿಂಟ್ನ ಅಗತ್ಯತೆಯಿಂದಾಗಿ ಮೃತದೇಹಗಳ ಗುರುತಿಸುವಿಕೆ ವಿಳಂಬವಾಗಿದ್ದು ಗುರುತನ್ನು ದೃಢೀಕರಿಸಲು ಮೂಳೆಯ ಅವಶೇಷಗಳನ್ನು ಬಳಸಿಕೊಳ್ಳಲಾಗುತ್ತಿದೆ.
“ದರ್ಶಿನಿಯ ಚಿಕ್ಕಪ್ಪ ರಾಮಾನುಜಂ ಅರ್ಕಾನ್ಸಾಸ್ನ ಬೆಂಟನ್ವಿಲ್ಲೆಯಲ್ಲಿ ವಾಸಿಸುತ್ತಿದ್ದು, ಸ್ನಾತಕೋತ್ತರ ಪದವಿ ಮುಗಿಸಿ ಡಲ್ಲಾಸ್ನ ಫ್ರಿಸ್ಕೊದಲ್ಲಿ ಕೆಲಸ ಆರಂಭಿಸಿದ್ದರು’ ಎಂದು ಮಂಜುನಾಥ್ ತಿಳಿಸಿದರು.
“ಉಮರ್ ಫಾರೂಕ್ ಶೇಖ್ ಮತ್ತು ಆರ್ಯನ್ ರಘುನಾಥ್ ಒರಂಪಟ್ಟಿ ಅವರು ಡಲ್ಲಾಸ್ನಲ್ಲಿರುವ ಟೆಕ್ಸಾಸ್ ವಿಶ್ವವಿದ್ಯಾಲಯದಿಂದ ಇತ್ತೀಚಿನ ಪದವೀಧರರಾಗಿದ್ದರು, ವಾಹನ ಚಲಾಯಿಸುತ್ತಿದ್ದ ಲೋಕೇಶ್ ಕೂಡ ವೃತ್ತಿನಿರತರಾಗಿದ್ದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್
Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.