ಮುಂದಿನ ಸಾಂಕ್ರಾಮಿಕಕ್ಕೇ ಶಿಲೀಂಧ್ರವೇ ಮೂಲ? ರೋಗಕಾರಕ ಶಿಲೀಂಧ್ರಗಳಿಂದ ವಿವಿಧ ಸೋಂಕು ಸಾಧ್ಯತೆ


Team Udayavani, Apr 7, 2022, 7:50 AM IST

ಮುಂದಿನ ಸಾಂಕ್ರಾಮಿಕಕ್ಕೇ ಶಿಲೀಂಧ್ರವೇ ಮೂಲ? ರೋಗಕಾರಕ ಶಿಲೀಂಧ್ರಗಳಿಂದ ವಿವಿಧ ಸೋಂಕು ಸಾಧ್ಯತೆ

ಬೀಜಿಂಗ್‌/ನವದೆಹಲಿ: ಕೊರೊನಾ ವೈರಸ್‌ ಎಂಬ ಮಾಯೆಯು ಜಗತ್ತಿನಾದ್ಯಂತ ತಲ್ಲಣ ಸೃಷ್ಟಿಸಿಯಾಯ್ತು. ಇನ್ನು ಮುಂದೆ ಜಗತ್ತನ್ನು ಕಾಡಲಿರುವುದು ವೈರಸ್‌ ಅಲ್ಲ, ಬದಲಿಗೆ ಶಿಲೀಂಧ್ರಗಳು!

ಮುಂದಿನ ಸಾಂಕ್ರಾಮಿಕದ ಮೂಲ ಶಿಲೀಂಧ್ರಗಳಾಗಿರುತ್ತವೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ.

2021ರ ಮಧ್ಯಭಾಗದಲ್ಲಿ ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾದವರಲ್ಲಿ “ಮ್ಯುಕೋರ್ಮಿಕಾಸಿಸ್‌’ ಎಂಬ ಫಂಗಲ್ ಇನ್‌ಫೆಕ್ಷನ್‌ ಕಂಡುಬಂದಿದ್ದು ನೆನಪಿರಬಹುದು. ಇಂಥದ್ದೇ ರೋಗಕಾರಕ ಶಿಲೀಂಧ್ರಗಳು ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಸಾಂಕ್ರಾಮಿಕ ಮೂಲಗಳಾಗಬಹುದು ಎಂದು ಅಂದಾಜಿಸಲಾಗಿದೆ.

ಅಮೆರಿಕದಲ್ಲಿ ವ್ಯಾಲಿ ಫಿವರ್‌, ಕಾಕ್ಸಿಡಿಯೋಮೈಕೋಸಿಸ್‌ ಮುಂತಾದ ರೋಗಗಳಿಗೆ ಕಾರಣವಾಗುವ ಶಿಲೀಂಧ್ರ ರೋಗಕಾರಕವು ಮಣ್ಣಿನಲ್ಲೇ ಇರುವ ಕಾರಣ ಮಾನವನಿಗೆ ಅಪಾಯಕಾರಿ ಎಂದು ಪರಿಗಣಿಸಲ್ಪಟ್ಟಿದೆ. ಹವಾಮಾನ ವೈಪರೀತ್ಯವು ಇಂಥ ಶಿಲೀಂಧ್ರಗಳ ಬೆಳವಣಿಗೆಗೆ ಪೂರಕವಾಗಿ ಕೆಲಸ ಮಾಡುತ್ತಿವೆ.

ಸಾಮೂಹಿಕ ಪರೀಕ್ಷೆಗೆ ಸಿದ್ಧತೆ:
ಚೀನದ ಅತಿದೊಡ್ಡ ನಗರ ಶಾಂಘೈನಲ್ಲಿ ಸತತ 5ನೇ ದಿನವೂ 17,007 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ನಗರದಾದ್ಯಂತ ಮತ್ತೊಂದು ಸುತ್ತಿನ ಸಾಮೂಹಿಕ ಪರೀಕ್ಷೆಗೆ ಸಿದ್ಧತೆ ಆರಂಭವಾಗಿದೆ.

ಮಾ.1ರಿಂದೀಚೆಗೆ ಕೊರೊನಾ ಸೋಂಕಿತರ ಸಂಖ್ಯೆ 94 ಸಾವಿರ ದಾಟಿದ್ದು, 2.60 ಕೋಟಿ ಜನಸಂಖ್ಯೆಯಿರುವ ನಗರದಲ್ಲಿ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಮೊದಲ ಬಾರಿಗೆ ಸೋಂಕು ಪತ್ತೆಯಾದ ವುಹಾನ್‌ ನಗರದಲ್ಲಿ ಒಂದೇ ದಿನದಲ್ಲಿ ಗರಿಷ್ಠವೆಂದರೆ 13,436 ಮಂದಿಗೆ ಸೋಂಕು ತಗುಲಿತ್ತು. ಚೀನಾದ ನಗರದಲ್ಲಿ ದಾಖಲಾದ ಗರಿಷ್ಠ ಸೋಂಕು ಪ್ರಕರಣ ಇದಾಗಿತ್ತು. ಆದರೆ, ಈಗ ಶಾಂಘೈನಲ್ಲಿ ಒಂದೇ ದಿನ 17 ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು ತಗಲುವ ಮೂಲಕ, ವುಹಾನ್‌ನ ದಾಖಲೆಯೂ ಸರಿಗಟ್ಟಿದಂತಾಗಿದೆ. ಲಾಕ್‌ಡೌನ್‌ ಹಿನ್ನೆಲೆ ಸತತ 2 ವಾರಗಳಿಂದ ನಗರದ ಜನ ಮನೆಯೊಳಗೆ ಬಂಧಿಯಾಗಿದ್ದಾರೆ.

ಭಾರತದಲ್ಲಿ ಎಷ್ಟು?:
ಈ ನಡುವೆ, ಭಾರತದಲ್ಲಿ ಮಂಗಳವಾರದಿಂದ ಬುಧವಾರಕ್ಕೆ 24 ಗಂಟೆಗಳಲ್ಲಿ 1086 ಕೊರೊನಾ ಪ್ರಕರಣ ಪತ್ತೆಯಾಗಿದ್ದು, 71 ಮಂದಿ ಸಾವಿಗೀಡಾಗಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.