![Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ](https://www.udayavani.com/wp-content/uploads/2024/12/ban-2-415x277.jpg)
ಮುಂದಿನ ಸಾಂಕ್ರಾಮಿಕಕ್ಕೇ ಶಿಲೀಂಧ್ರವೇ ಮೂಲ? ರೋಗಕಾರಕ ಶಿಲೀಂಧ್ರಗಳಿಂದ ವಿವಿಧ ಸೋಂಕು ಸಾಧ್ಯತೆ
Team Udayavani, Apr 7, 2022, 7:50 AM IST
![ಮುಂದಿನ ಸಾಂಕ್ರಾಮಿಕಕ್ಕೇ ಶಿಲೀಂಧ್ರವೇ ಮೂಲ? ರೋಗಕಾರಕ ಶಿಲೀಂಧ್ರಗಳಿಂದ ವಿವಿಧ ಸೋಂಕು ಸಾಧ್ಯತೆ](https://www.udayavani.com/wp-content/uploads/2022/04/Covid-5-620x349.jpg)
ಬೀಜಿಂಗ್/ನವದೆಹಲಿ: ಕೊರೊನಾ ವೈರಸ್ ಎಂಬ ಮಾಯೆಯು ಜಗತ್ತಿನಾದ್ಯಂತ ತಲ್ಲಣ ಸೃಷ್ಟಿಸಿಯಾಯ್ತು. ಇನ್ನು ಮುಂದೆ ಜಗತ್ತನ್ನು ಕಾಡಲಿರುವುದು ವೈರಸ್ ಅಲ್ಲ, ಬದಲಿಗೆ ಶಿಲೀಂಧ್ರಗಳು!
ಮುಂದಿನ ಸಾಂಕ್ರಾಮಿಕದ ಮೂಲ ಶಿಲೀಂಧ್ರಗಳಾಗಿರುತ್ತವೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ.
2021ರ ಮಧ್ಯಭಾಗದಲ್ಲಿ ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾದವರಲ್ಲಿ “ಮ್ಯುಕೋರ್ಮಿಕಾಸಿಸ್’ ಎಂಬ ಫಂಗಲ್ ಇನ್ಫೆಕ್ಷನ್ ಕಂಡುಬಂದಿದ್ದು ನೆನಪಿರಬಹುದು. ಇಂಥದ್ದೇ ರೋಗಕಾರಕ ಶಿಲೀಂಧ್ರಗಳು ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಸಾಂಕ್ರಾಮಿಕ ಮೂಲಗಳಾಗಬಹುದು ಎಂದು ಅಂದಾಜಿಸಲಾಗಿದೆ.
ಅಮೆರಿಕದಲ್ಲಿ ವ್ಯಾಲಿ ಫಿವರ್, ಕಾಕ್ಸಿಡಿಯೋಮೈಕೋಸಿಸ್ ಮುಂತಾದ ರೋಗಗಳಿಗೆ ಕಾರಣವಾಗುವ ಶಿಲೀಂಧ್ರ ರೋಗಕಾರಕವು ಮಣ್ಣಿನಲ್ಲೇ ಇರುವ ಕಾರಣ ಮಾನವನಿಗೆ ಅಪಾಯಕಾರಿ ಎಂದು ಪರಿಗಣಿಸಲ್ಪಟ್ಟಿದೆ. ಹವಾಮಾನ ವೈಪರೀತ್ಯವು ಇಂಥ ಶಿಲೀಂಧ್ರಗಳ ಬೆಳವಣಿಗೆಗೆ ಪೂರಕವಾಗಿ ಕೆಲಸ ಮಾಡುತ್ತಿವೆ.
ಸಾಮೂಹಿಕ ಪರೀಕ್ಷೆಗೆ ಸಿದ್ಧತೆ:
ಚೀನದ ಅತಿದೊಡ್ಡ ನಗರ ಶಾಂಘೈನಲ್ಲಿ ಸತತ 5ನೇ ದಿನವೂ 17,007 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ನಗರದಾದ್ಯಂತ ಮತ್ತೊಂದು ಸುತ್ತಿನ ಸಾಮೂಹಿಕ ಪರೀಕ್ಷೆಗೆ ಸಿದ್ಧತೆ ಆರಂಭವಾಗಿದೆ.
ಮಾ.1ರಿಂದೀಚೆಗೆ ಕೊರೊನಾ ಸೋಂಕಿತರ ಸಂಖ್ಯೆ 94 ಸಾವಿರ ದಾಟಿದ್ದು, 2.60 ಕೋಟಿ ಜನಸಂಖ್ಯೆಯಿರುವ ನಗರದಲ್ಲಿ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
ಮೊದಲ ಬಾರಿಗೆ ಸೋಂಕು ಪತ್ತೆಯಾದ ವುಹಾನ್ ನಗರದಲ್ಲಿ ಒಂದೇ ದಿನದಲ್ಲಿ ಗರಿಷ್ಠವೆಂದರೆ 13,436 ಮಂದಿಗೆ ಸೋಂಕು ತಗುಲಿತ್ತು. ಚೀನಾದ ನಗರದಲ್ಲಿ ದಾಖಲಾದ ಗರಿಷ್ಠ ಸೋಂಕು ಪ್ರಕರಣ ಇದಾಗಿತ್ತು. ಆದರೆ, ಈಗ ಶಾಂಘೈನಲ್ಲಿ ಒಂದೇ ದಿನ 17 ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು ತಗಲುವ ಮೂಲಕ, ವುಹಾನ್ನ ದಾಖಲೆಯೂ ಸರಿಗಟ್ಟಿದಂತಾಗಿದೆ. ಲಾಕ್ಡೌನ್ ಹಿನ್ನೆಲೆ ಸತತ 2 ವಾರಗಳಿಂದ ನಗರದ ಜನ ಮನೆಯೊಳಗೆ ಬಂಧಿಯಾಗಿದ್ದಾರೆ.
ಭಾರತದಲ್ಲಿ ಎಷ್ಟು?:
ಈ ನಡುವೆ, ಭಾರತದಲ್ಲಿ ಮಂಗಳವಾರದಿಂದ ಬುಧವಾರಕ್ಕೆ 24 ಗಂಟೆಗಳಲ್ಲಿ 1086 ಕೊರೊನಾ ಪ್ರಕರಣ ಪತ್ತೆಯಾಗಿದ್ದು, 71 ಮಂದಿ ಸಾವಿಗೀಡಾಗಿದ್ದಾರೆ.
ಟಾಪ್ ನ್ಯೂಸ್
![Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ](https://www.udayavani.com/wp-content/uploads/2024/12/ban-2-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kuwait-PM](https://www.udayavani.com/wp-content/uploads/2024/12/Kuwait-PM-150x90.jpg)
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
![Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು](https://www.udayavani.com/wp-content/uploads/2024/12/15-7-150x90.jpg)
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
![Sheik Hasina](https://www.udayavani.com/wp-content/uploads/2024/12/Sheik-Hasina-150x84.jpg)
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
![ravishankar-guruji](https://www.udayavani.com/wp-content/uploads/2024/12/ravishankar-guruji-1-150x88.jpg)
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
![iran](https://www.udayavani.com/wp-content/uploads/2024/12/iran-150x104.jpg)
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.