ಗೂಗಲ್‌ಗೆ ಅನಿವಾಸಿ ಭಾರತೀಯ


Team Udayavani, Jun 17, 2017, 12:25 PM IST

Google-Logo-17-6.jpg

ಲಾಸ್‌ ಏಂಜಲೀಸ್‌: ಜಾಲತಾಣ ಕ್ಷೇತ್ರದ ದಿಗ್ಗಜ ಗೂಗಲ್‌ ಕಂಪೆ‌ನಿ, ಭಾರತ ಮೂಲದ ಎಂಜಿನಿಯರ್‌ ಮನು ಗುಲಾಟಿ ಅವರನ್ನು ಮುಖ್ಯ ಎಸ್‌ಒಸಿ ಆರ್ಕಿಟೆಕ್ಟ್ ಆಗಿ ನೇಮಕ ಮಾಡಿಕೊಂಡಿದೆ. ಇದುವರೆಗೆ ಆ್ಯಪಲ್‌ ಕಂಪೆನಿಯ ಐಫೋನ್‌ ಮತ್ತು ಐಪ್ಯಾಡ್‌ಗಳಿಗೆ ಮುಖ್ಯ ಆರ್ಕಿಟೆಕ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಗುಲಾಟಿ, ಪ್ರಸ್ತುತ ಗೂಗಲ್‌ನ ಮುಂಬರುವ ಪಿಕ್ಸೆಲ್‌ ಫೋನ್‌ ನಿರ್ಮಾಣ ಮತ್ತು ಅಭಿವೃದ್ಧಿ ಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಗೂಗಲ್‌ ಮೂಲಗಳು ಹೇಳಿಕೊಂಡಿವೆ. 8 ವರ್ಷಗಳಿಂದ ಆ್ಯಪಲ್‌ ಸಂಸ್ಥೆಗೆ ದುಡಿಯುತ್ತಿರುವ ಮನು ಗುಲಾಟಿ ತಾವು ಸಂಸ್ಥೆ ಬದಲಿಸುತ್ತಿರುವುದಾಗಿ ಲಿಂಕ್ಡ್ಇನ್‌ನಲ್ಲಿ ಹೇಳಿಕೊಂಡಿದ್ದಾರೆ. ಮುಖ್ಯ ವಿನ್ಯಾಸಕ್ಕೆ ಸಂಬಂಧಿಸಿದಂತೆ ಆ್ಯಪಲ್‌ನ ಸುಮಾರು 15 ಪೇಟೆಂಟ್‌ಗಳನ್ನು ಹೊಂದಿರುವ ಮನು, ಸ್ವಂತ ಪ್ರೊಸೆಸರ್‌ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಗೂಗಲ್‌ಗೆ ನೆರವಾಗಲಿದ್ದಾರೆ.

ಮುಂದಿನ ದಿನಗಳಲ್ಲಿ ಪಿಕ್ಸೆಲ್‌ ಸ್ಮಾರ್ಟ್‌ಫೋನ್‌ಗಳಿಗಾಗಿ ಸ್ವತಃ ಚಿಪ್‌ಸೆಟ್‌ಗಳನ್ನು ರೂಪಿಸುವ ಉದ್ದೇಶ ಹೊಂದಿರುವ ಗೂಗಲ್‌, ಇದಕ್ಕೆಂದೇ ಒಂದು ತಂಡವನ್ನು ರೂಪಿಸುತ್ತಿದೆ. ಇದೀಗ ಆ್ಯಪಲ್‌ ಐಫೋನ್‌ಗಳಿಗೆ ಚಿಪ್‌ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ ಮನು ಅವರ ಆಗಮನದಿಂದ ಗೂಗಲ್‌ ಬಲ ಹೆಚ್ಚಲಿದೆ ಎಂದು ಐಟಿ ಕ್ಷೇತ್ರದ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಸ್ವಂತ ಪ್ರೊಸೆಸರ್‌
ಗೂಗಲ್‌ ತನ್ನ ಪಿಕ್ಸೆಲ್‌ ಫೋನ್‌ಗಳಿಗೆ ಪ್ರಸ್ತುತ ಕ್ವಾಲ್‌ಕಾಮ್‌ ಪ್ರೊಸೆಸರ್‌ ಬಳಸುತ್ತಿದೆ. ಮನು ಗುಲಾಟಿ ಅವರ ಸೇರ್ಪಡೆಯೊಂದಿಗೆ ಇನ್ನು ಗೂಗಲ್‌ ಕೂಡ ಆ್ಯಪಲ್‌ ರೀತಿ ಸ್ವತಃ ಪ್ರೊಸೆಸರ್‌ಗಳನ್ನು ಅಭಿವೃದ್ಧಿಪಡಿಸಬಹುದಾಗಿದೆ. ಈಗಾಗಲೇ ಚಿಪ್‌ಗಳ ಅಭಿವೃದ್ಧಿಗೆ ಗೂಗಲ್‌ ಮುಂದಾಗಿದೆ.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Zakir Naik

Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್‌ ನಾಯ್ಕ

1-weqwe

Strikes again; ಲೆಬನಾನ್‌,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್‌:40ಕ್ಕೂ ಹೆಚ್ಚು ಸಾ*ವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.