Israel ಏರ್ ಸ್ಟ್ರೈಕ್ ನಲ್ಲಿ 3 ಮಕ್ಕಳು, 4ಮೊಮ್ಮಕ್ಕಳನ್ನು ಕಳೆದುಕೊಂಡ ಹಮಾಸ್ ನಾಯಕ ಹನಿಯೆಹ್
Team Udayavani, Apr 11, 2024, 8:12 AM IST
ಜೆರುಸಲೇಂ: ಹಮಾಸ್ ಸಂಘಟನೆಯ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ನ ಮೂವರು ಮಕ್ಕಳನ್ನು ಗಾಜಾದಲ್ಲಿ ನಡೆದ ಏರ್ ಸ್ಟ್ರೈಕ್ ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ರಕ್ಷಣಾ ಪಡೆ ತಿಳಿಸಿದೆ.
ಬುಧವಾರ ನಡೆದ ಏರ್ ಸ್ಟ್ರೈಕ್ ನಲ್ಲಿ ಹಮಾಸ್ ಮಿಲಿಟರಿ ವಿಭಾಗದ ಹೆಸರಾಂತ ಸೆಲ್ ಕಮಾಂಡರ್ ಅಮೀರ್ ಹನಿಯೆಹ್ ಮತ್ತು ಸಹೋದರರಾದ ಮೊಹಮ್ಮದ್ ಮತ್ತು ಹಜೆಮ್ ಹನಿಯೆಹ್ ಹತ್ಯೆಯಾಗಿದ್ದಾರೆ.
“ಐಎಎಫ್ ವಿಮಾನವು ಇಂದು ಸೆಂಟ್ರಲ್ ಗಾಜಾದಲ್ಲಿ ಹಮಾಸ್ ಮಿಲಿಟರಿ ವಿಭಾಗದಲ್ಲಿ ಸೆಲ್ ಕಮಾಂಡರ್ ಅಮೀರ್ ಹನಿಯೆಹ್ ಮತ್ತು ಮೊಹಮ್ಮದ್ ಮತ್ತು ಹಜೆಮ್ ಹನಿಯೆಹ್ ರನ್ನು ಹೊಡೆದಿದೆ. ಮೂವರು ಹಮಾಸ್ ರಾಜಕೀಯ ಬ್ಯೂರೋ ಅಧ್ಯಕ್ಷ ಇಸ್ಮಾಯಿಲ್ ಹನಿಯೆಹ್ ಅವರ ಪುತ್ರರು ಎಂದು ಐಡಿಎಫ್ ಖಚಿತಪಡಿಸುತ್ತದೆ” ಎಂದು ಐಡಿಎಫ್ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್ ನಲ್ಲಿ ಪೋಸ್ಟ್ ಮಾಡಿದೆ.
ಅಲ್ ಜಜೀರಾ ಪ್ರಕಾರ, ದುರಂತವು ಇಸ್ಮಾಯಿಲ್ ಹನಿಯೆಹ್ ಅವರ ಕುಟುಂಬದಲ್ಲಿ ಇನ್ನೂ ಹಾನಿ ಮಾಡಿದೆ. ಶತಿ ನಿರಾಶ್ರಿತರ ಶಿಬಿರದ ಮೇಲೆ ನಡೆದ ಏರ್ ಸ್ಟ್ರೈಕ್ ಅವರ ನಾಲ್ಕು ಮೊಮ್ಮಕ್ಕಳ ಪ್ರಾಣವನ್ನು ಬಲಿತೆಗೆದುಕೊಂಡಿದೆ ಎಂದು ವರದಿಯಾಗಿದೆ. ಇದು ಈದ್ ಅಲ್-ಫಿತರ್ನ ಮೊದಲ ದಿನದಂದು ನಡೆದ ಈ ಘಟನೆಯಿಂದ ಪ್ರದೇಶದಲ್ಲಿ ಆತಂಕದ ಪರಿಸ್ಥಿತಿ ಉಂಟಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇಸ್ಮಾಯಿಲ್ ಹನಿಯೆಹ್, “ಹುತಾತ್ಮರ ರಕ್ತ ಮತ್ತು ಗಾಯಗೊಂಡವರ ನೋವಿನ ಮೂಲಕ, ನಾವು ಭರವಸೆಯನ್ನು ಸೃಷ್ಟಿಸುತ್ತೇವೆ, ನಾವು ಭವಿಷ್ಯವನ್ನು ರಚಿಸುತ್ತೇವೆ, ನಮ್ಮ ಜನರಿಗೆ ಮತ್ತು ನಮ್ಮ ರಾಷ್ಟ್ರಕ್ಕೆ ನಾವು ಸ್ವಾತಂತ್ರ್ಯವನ್ನು ತರುತ್ತೇವೆ” ಎಂದು ಹೇಳಿದರು. ಸೊಸೆಯಂದಿರು ಮತ್ತು ಸೋದರಳಿಯರು ಸೇರಿದಂತೆ ಅವರ ಕುಟುಂಬದ ಸುಮಾರು 60 ಸದಸ್ಯರು ಯುದ್ಧದ ಆರಂಭದಿಂದಲೂ ಕೊಲ್ಲಲ್ಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್
Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.