Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Team Udayavani, Sep 21, 2024, 7:46 AM IST
ಜೆರುಸಲೇಂ: ಬೈರುತ್ ನಲ್ಲಿ ನಡೆದ ನಿಖರವಾದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾದ ರಾದ್ವಾನ್ ಫೋರ್ಸ್ ನ ಕಮಾಂಡರ್ ಇಬ್ರಾಹಿಂ ಅಕಿಲ್ ನನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ಶುಕ್ರವಾರ (ಸೆ.20) ಘೋಷಿಸಿದೆ. ಹಿರಿಯ ಕಮಾಂಡರ್ ಗಳ ಸಭೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದ್ದು, 10 ಉನ್ನತ ಅಧಿಕಾರಿಗಳು ಸೇರಿದಂತೆ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ವರದಿ ಹೇಳಿದೆ.
1983 ರಲ್ಲಿ ಬೈರುತ್ ನಲ್ಲಿರುವ ಯುಎಸ್ ರಾಯಭಾರ ಕಚೇರಿ ಮತ್ತು ಮೆರೈನ್ ಬ್ಯಾರಕ್ ಗಳ ಬಾಂಬ್ ದಾಳಿಯಲ್ಲಿನ ಪಾತ್ರಕ್ಕಾಗಿ ಯುನೈಟೆಡ್ ಸ್ಟೇಟ್ಸ್ ನ ವಾಂಟೆಡ್ ಪಟ್ಟಿಯಲ್ಲಿರುವ ಹಿರಿಯ ಹಿಜ್ಬುಲ್ಲಾ ಮಿಲಿಟರಿ ವ್ಯಕ್ತಿ ಅಕಿಲ್ ಹಿಜ್ಬುಲ್ಲಾದಿಂದ ಅದರ ಪ್ರಮುಖ ನಾಯಕರಲ್ಲಿ ಒಬ್ಬ. ಅಕಿಲ್ ಸಾವಿನ ಬಗ್ಗೆ ಹಿಜ್ಬುಲ್ಲಾ ದೃಢಪಡಿಸಿದ್ದು, ಆತನನ್ನು “ಮಹಾನ್ ಜಿಹಾದಿ ನಾಯಕ” ಎಂದು ಕರೆದಿದೆ.
ದಕ್ಷಿಣ ಬೈರುತ್ ನಲ್ಲಿ ಹಿಜ್ಬುಲ್ಲಾದ ಭದ್ರಕೋಟೆಯನ್ನು ಹೊಡೆದ ವೈಮಾನಿಕ ದಾಳಿಯು ಬೃಹತ್ ಕುಳಿಯನ್ನುಂಟು ಮಾಡಿದೆ. ದಾಳಿಯ ಪರಿಣಾಮ ಬಹುಮಹಡಿ ಕಟ್ಟಡ ಧರೆಗುಳಿದಿದ್ದು ಸೇರಿದಂತೆ ಗಮನಾರ್ಹ ಹಾನಿಯನ್ನುಂಟಾಗಿದೆ. ರಕ್ಷಣಾ ಕಾರ್ಯಕರ್ತರು ಬದುಕುಳಿದವರಿಗಾಗಿ ಅವಶೇಷಗಳ ಹುಡುಕಾಟವನ್ನು ಮುಂದುವರೆಸಿದ್ದಾರೆ. ವೈಮಾನಿಕ ದಾಳಿಗೆ ಪ್ರತಿಕ್ರಿಯೆಯಾಗಿ, ಹಿಜ್ಬುಲ್ಲಾ ಇಸ್ರೇಲಿ ಮಿಲಿಟರಿ ಬೇಸ್ ಗಳ ಮೇಲೆ ಡಜನ್ ಗಟ್ಟಲೆ ರಾಕೆಟ್ ಗಳನ್ನು ಹಾರಿಸಿದೆ.
ಲೆಬನಾನ್ ನಲ್ಲಿ ನೂರಾರು ಅಮೆರಿಕನ್ನರನ್ನು ಕೊಂದ 1983 ರ ಬಾಂಬ್ ಸ್ಫೋಟಗಳಲ್ಲಿ ಭಾಗಿಯಾಗಿದ್ದಕ್ಕಾಗಿ ಯುನೈಟೆಡ್ ಸ್ಟೇಟ್ಸ್ ಅಕಿಲ್ ತಲೆಗೆ 7 ಮಿಲಿಯನ್ ಡಾಲರ್ ಬಹುಮಾನ ಘೋಷಿಸಿದೆ. 1980 ರ ದಶಕದಲ್ಲಿ ಅಮೇರಿಕನ್ ಮತ್ತು ಯುರೋಪಿಯನ್ ಒತ್ತೆಯಾಳುಗಳ ಅಪಹರಣದಲ್ಲಿ ಅಕಿಲ್ ಕೂಡ ಭಾಗಿಯಾಗಿದ್ದನು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel- ಹೆಜ್ಬುಲ್ಲಾ ನಡುವೆ ಬಾಂಬ್ಗಳ ಸುರಿಮಳೆ! ; 100 ರಾಕೆಟ್ ಲಾಂಚರ್ ಧ್ವಂಸ
Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!
China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Hagga movie review: ರೋಚಕ ರಹಸ್ಯದ ಕಥಾನಕ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.