
ಸುಳ್ಳಿನ ಕಂತೆ: ಹಿಂದೂಗಳು ಕ್ರೂರಿಗಳು: ಪಾಕ್ ಪಠ್ಯ
Team Udayavani, Aug 5, 2017, 9:20 AM IST

ಇಸ್ಲಾಮಾಬಾದ್: ಭಾರತದ ವಿರುದ್ಧ ಸದಾ ದ್ವೇಷಕಾರುವ ಅಂಶಗಳನ್ನೇ ಶಾಲಾಮಕ್ಕಳ ತಲೆಗೆ ಪಠ್ಯದ ಮೂಲಕ ತುರುಕುತ್ತಿರುವ ಪಾಕಿಸ್ಥಾನ ಇದೀಗ, ಹಿಂದೂಗಳನ್ನು ಕೊಲೆಗಡುಕರು ಎಂದು ಕರೆದಿದೆ. ಅಲ್ಲದೇ ದೇಶ ವಿಭಜನೆಯ ಆರೋಪವನ್ನೂ ಹಿಂದೂಗಳ ಮೇಲೆ ಹೊರಿಸಲಾಗಿದೆ.
ದೇಶ ವಿಭಜನೆ ಬಗ್ಗೆ ಭಾರತ ಶಾಲಾ ಪಠ್ಯದಲ್ಲಿ ಒಂದು ರೀತಿ ಇದ್ದರೆ, ಪಾಕಿಸ್ಥಾನದ ಪಠ್ಯ ಸಂಪೂರ್ಣ ಭಿನ್ನ. ಇದು ಭಾರತ ವಿರುದ್ಧ ದ್ವೇಷ ಕಾರುವುದಕ್ಕೆ ಸೀಮಿತವಾಗಿದೆ. ಶಾಲಾ ಮಕ್ಕಳ ಮನಸ್ಸಿನ ಮೇಲೆ ಇದು ಪ್ರತಿಕೂಲ ಪರಿಣಾಮ ಬೀರುತ್ತಿದ್ದು, ಎರಡೂ ದೇಶಗಳ ಮಧ್ಯೆ ಸಾಮರಸ್ಯ ಮೂಡಿಸುವ ಯತ್ನಕ್ಕೆ ತೀವ್ರ ಹಿನ್ನಡೆಯಾಗುತ್ತದೆ ಅಲ್ಲದೇ ಸೇಡಿನ ಮನೋಭಾವನೆ ಬಿತ್ತುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
70 ವರ್ಷಗಳ ಹಿಂದೆ ದೇಶ ವಿಭಜನೆ ವೇಳೆ ಹಿಂದೂಗಳು ಪಾಕ್ನಿಂದ ಭಾರತಕ್ಕೆ, ಭಾರತದಿಂದ ಮುಸ್ಲಿಮರು ಪಾಕ್ಗೆ ವಲಸೆ ಹೋಗಿದ್ದಾರೆ. ಇದು ಶತಮಾನದ ಅತಿ ದೊಡ್ಡ ವಲಸೆ ಎಂದು ಗುರುತಿಸಿಕೊಂಡಿದೆ. ಈ ವೇಳೆ ವ್ಯಾಪಕ ಹಿಂಸಾಚಾರ ಸಂಭವಿಸಿದ್ದು, ಲೆಕ್ಕವಿಲ್ಲದಷ್ಟು ಸಾವುನೋವುಗಳಾಗಿವೆ. ದೇಶ ವಿಭಜನೆಗೆ ರಾಜಕೀಯ ಕಾರಣವನ್ನು ಬರೆದೇ ಇಲ್ಲ.
ಇತಿಹಾಸವನ್ನು ಸಂಪೂರ್ಣ ತಿರುಚಲಾಗಿದೆ. ಈ ಘಟನೆಯನ್ನು ಪಾಕ್ ಪಠ್ಯದಲ್ಲಿ ‘ಹಿಂದೂಗಳು ಮುಸ್ಲಿಮರನ್ನು ಹತ್ಯೆಗೈದರು, ಆಸ್ತಿ ಪಾಸ್ತಿ ನಾಶ ಮಾಡಿದರು, ಭಾರತದಿಂದ ಬಲವಂತವಾಗಿ ಮುಸ್ಲಿಮರನ್ನು ಹೊರದೂಡಿದರು’ ಎಂದು ಬರೆಯಲಾಗಿದೆ. ಅಲ್ಲದೇ ಮುಸ್ಲಿಮರನ್ನು ಹೀನಾಯವಾಗಿ ನೋಡಿದ್ದರಿಂದಲೇ, ನಾವು ಪಾಕ್ ಅನ್ನು ರಚಿಸಿದೆವು ಎಂದು ಬರೆಯಲಾಗಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ

Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.