ಚುನಾವಣೆ ಗೆಲ್ಲಲು ಚೀನ ನೆರವು ಕೇಳಿದ್ದ ಟ್ರಂಪ್‌!

ಅಮೆರಿಕದ ಮಾಜಿ ಎನ್‌ಎಸ್‌ಎ ಜಾನ್‌ ಬೋಲ್ಟನ್‌ ಕೃತಿಯಲ್ಲಿ ಮಹತ್ವದ ಅಂಶ ಉಲ್ಲೇಖ

Team Udayavani, Jun 20, 2020, 12:13 AM IST

ಚುನಾವಣೆ ಗೆಲ್ಲಲು ಚೀನ ನೆರವು ಕೇಳಿದ್ದ ಟ್ರಂಪ್‌!

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಈಗ ಹೆಜ್ಜೆ ಹೆಜ್ಜೆಗೂ ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಮೇಲೆ ಕಿಡಿಕಾರುತ್ತಿದ್ದಾರೆ.

ಆದರೆ, ಟ್ರಂಪ್‌ 2020ರ ಚುನಾ­ವಣೆಯಲ್ಲಿ ಗೆಲ್ಲಲು ಚೀನ ಅಧ್ಯಕ್ಷರ ನೆರವು ಕೋರಿದ್ದ ಅಂಶ ಬೆಳಕಿಗೆ ಬಂದಿದೆ.

2019ರಲ್ಲಿ ಜಪಾನ್‌ನಲ್ಲಿ ನಡೆದ ಜಿ-20 ಶೃಂಗಸಭೆ ವೇಳೆ ಕ್ಸಿ ಜಿನ್‌ಪಿಂಗ್‌ ಜೊತೆ ಟ್ರಂಪ್‌ ಈ ಮಾತುಕತೆ ನಡೆಸಿದ್ದಾರೆ. ‘ಚೀನ ಆರ್ಥಿಕ­ವಾಗಿ ಬೆಂಬಲಿಸಿದರೆ ಖಂಡಿತಾ ನಾನು 2020ರ ಚುನಾವಣೆಯಲ್ಲಿ ಮರು ಆಯ್ಕೆಯಾಗುತ್ತೇನೆ. ಚೀನವು ಅಮೆರಿಕದ ರೈತರಿಂದ ಹೆಚ್ಚೆಚ್ಚು ಗೋಧಿ ಮತ್ತು ಸೊಯಾಬೀನ್ಸ್‌ ಖರೀದಿಸಿದರೆ ಚುನಾ­ವಣೆ­ಯಲ್ಲಿ ಗೆಲ್ಲಲು ಅನುಕೂಲವಾಗು­ತ್ತದೆ. ರೈತರಿಂದ ನನಗೆ ಮತಗಳು ಬೀಳುತ್ತವೆ’ ಎಂದು ಟ್ರಂಪ್‌ ಅನಿಸಿಕೆ ಹಂಚಿಕೊಂಡಿದ್ದರಂತೆ. 2016ರ ಚುನಾವಣೆಯಲ್ಲೂ ರೈತರ ನಿರ್ಣಾ­ಯಕ ಮತಗಳಿಂದಲೇ ಟ್ರಂಪ್‌ ಗೆದ್ದಿದ್ದರು.

ಟ್ರಂಪ್‌ ಆಪ್ತರಾಗಿದ್ದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್‌ ಬೋಲ್ಟನ್‌ರ “ದಿ ರೂಮ್‌ ವೇರ್‌ ಇಟ್‌ ಹ್ಯಾಪನ್ಡ್’ ಎಂಬ ಕೃತಿಯಲ್ಲಿ ಈ ಸ್ಫೋಟಕ ಮಾಹಿತಿ ಉಲ್ಲೇಖವಾಗಿದೆ. “ನ್ಯೂಯಾರ್ಕ್‌ ಟೈಮ್ಸ್‌’ ಮತ್ತು “ವಾಷಿಂಗ್ಟನ್‌ ಪೋಸ್ಟ್‌’ ಪತ್ರಿಕೆಗಳು ಕೃತಿಯ ಆಯ್ದಭಾಗ ಪ್ರಕಟಿಸಿ ಟ್ರಂಪ್‌ಗೆ ಆಘಾತ ನೀಡಿವೆ.

ದಬ್ಟಾಳಿಕೆ ತಡೆಗೆ ಮಸೂದೆಗೆ ಸಹಿ: ಮತ್ತೂಂ­ದೆಡೆ, ಚೀನದ ಕ್ಸಿನ್‌ಜಿಯಾಂಗ್‌ ಪ್ರದೇಶದಲ್ಲಿ ಉಯಿಘರ್‌ ಮುಸ್ಲಿಮರ ಮೇಲೆ ನಡೆಯು­ತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ತಡೆಗೆ ಅಮೆರಿಕ ಸಂಸತ್‌ ರೂಪಿಸಿರುವ ಮಸೂದೆಗೆ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸಹಿ ಹಾಕಿದ್ದಾರೆ. ತಪ್ಪಿತಸ್ಥ ಚೀನ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವುದಕ್ಕೆ ಈ ಕಾಯ್ದೆ ದಾರಿ ಮಾಡಿ­ಕೊಡುತ್ತದೆ.

ಚೀನದ ಉಯಿಘರ್‌ ಮುಸ್ಲಿಮರು ಸೇರಿದಂತೆ ಇತರ ಅಲ್ಪಸಂಖ್ಯಾತ ಧಾರ್ಮಿಕ ಸಮುದಾಯಗಳ ಜನಾಂಗೀಯ ಅಸ್ಮಿತೆ ಹಾಗೂ ಧಾರ್ಮಿಕ ಆಚರಣೆಗಳನ್ನು ನಿರ್ಮೂಲನೆ ಮಾಡಲು ಯತ್ನಿಸುವವರನ್ನು “ದಿ ಉಯಿಘರ್‌ ಮಾನವ ಹಕ್ಕು ಉಲ್ಲಂಘನೆ ಕಾಯ್ದೆ-2020’ರಡಿ ಶಿಕ್ಷೆಗೆ ಗುರಿಪಡಿಸ­ಬಹುದಾಗಿದೆ. ಉಯಿಘರ್‌ ಮುಸ್ಲಿಮರ ಮೇಲೆ ದಬ್ಟಾಳಿಕೆ ನಡೆಸುವ ಚೀನದ ಅಧಿಕಾರಿಗಳನ್ನು ಈ ಕಾಯ್ದೆ ಹೊಣೆಗಾ­ರ­ರನ್ನಾಗಿ ಮಾಡಲಿದೆ.

ಟ್ರಂಪ್‌ ಸಹಿ ಹಾಕುವುದಕ್ಕೂ ಮೊದಲು, ಅಮೆರಿಕದ ಸಂಸತ್‌ನಲ್ಲಿ ರಿಪಬ್ಲಿಕನ್‌ ಮತ್ತು ಡೆಮಾಕ್ರೆಟಿಕ್‌ ಸದಸ್ಯರ ಬೆಂಬಲದೊಂದಿಗೆ ಮಸೂದೆಯನ್ನು ಅಂಗೀಕರಿಸ­ಲಾಯಿತು. ಈ ಮಧ್ಯೆ, ಈ ಕಾಯ್ದೆಯನ್ನು ಟೀಕಿಸಿರುವ ಚೀನ, ಕ್ಸಿನ್‌ಜಿಯಾಂಗ್‌ ಪ್ರದೇಶದಲ್ಲಿ ತನ್ನ ನೀತಿಗಳ ಮೇಲೆ ಆಕ್ರಮಣ ಮಾಡುವ ಉದ್ದೇಶವನ್ನು ಈ ಕಾಯ್ದೆ ಹೊಂದಿದೆ. ಈ ನಿಟ್ಟಿನಲ್ಲಿ ಅಮೆರಿಕಕ್ಕೆ ತಿರುಗೇಟು ನೀಡಲಾಗುವುದು. ಮುಂದಾಗುವ ಪರಿಣಾಮ­ಗಳನ್ನು ಅಮೆರಿಕ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.