ಆಸ್ಟ್ರೇಲಿಯಾದಲ್ಲಿ ಹೆಚ್ಚಾದ ಇಲಿಗಳ ಹಾವಳಿ: ಪ್ಲೇಗ್ ಭೀತಿ; ಭಾರತದಿಂದ ಪಾಷಾಣ ಆಮದಿಗೆ ಅಸ್ತು
Team Udayavani, May 30, 2021, 8:52 AM IST
ಮೆಲ್ಬರ್ನ್: ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ನಲ್ಲಿ ಎಲ್ಲೆಲ್ಲೂ ಇಲಿಗಳ ಹಾವಳಿ ಅಧಿಕವಾಗಿದ್ದು, ಅಲ್ಲಿ ಶತಮಾನಗಳ ಹಿಂದೆ ಬಂದು ಹೋಗಿದ್ದ ಪ್ಲೇಗ್ ರೋಗದ ಭೀತಿ ಆವರಿಸಿದೆ.
ನ್ಯೂಸೌತ್ ವೇಲ್ಸ್ನ ಗ್ರಾಮೀಣ ಪ್ರದೇಶಗಳಲ್ಲಿರುವ ರೈತರ ಮನೆಗಳಲ್ಲಿ, ಭತ್ತದ ಕಣಜಗಳಲ್ಲಿ, ಕೊಟ್ಟಿಗೆಗಳಲ್ಲಿ ಇಲಿಗಳು ಎಗ್ಗಿಲ್ಲದೆ ಓಡಾಡುತ್ತಿವೆ. ನೋಡನೋಡುತ್ತಲೇ ಅವುಗಳ ಸಂತತಿ ಹತ್ತಾರು ಪಟ್ಟು ಹೆಚ್ಚಾಗಿದೆ.
ಅವುಗಳ ಕಾಟದಿಂದ ಪಾರಾಗಲು ರೈತರು ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ. ಆ ಪ್ರಾಂತ್ಯದ ಆಸ್ಪತ್ರೆಗಳಲ್ಲೂ ಇಲಿಗಳ ಕಾಟ ಜೋರಾಗಿದೆ ಎಂದು ಹೇಳಲಾಗಿದೆ. ರೈತರು ಹಾಗೂ ಆಸ್ಪತ್ರೆಯ ರೋಗಿಗಳು ಇಲಿಗಳ ಕಡಿತಕ್ಕೆ ತುತ್ತಾಗುತ್ತಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಇದನ್ನೂ ಓದಿ: ಪ್ರೇಯಸಿಯ ಜೊತೆಗೆ ವಿವಾಹ ಬಂಧನಕ್ಕೆ ಒಳಗಾದ ಯುಕೆ ಪ್ರಧಾನಿ ಬೋರಿಸ್ ಜಾನ್ಸನ್
ಭಾರತದಿಂದ ಪಾಷಾಣ ಆಮದಿಗೆ ಅಸ್ತು: ಇಲಿಗಳ ನಿಯಂತ್ರಣಕ್ಕೆ ಮುಂದಾಗಿರುವ ನ್ಯೂವೇಲ್ಸ್ ಸರ್ಕಾರ, ಈ ಹಿಂದೆ ಅಲ್ಲಿ ನಿಷೇಧಿಸಲ್ಪಟ್ಟಿದ್ದ ಬ್ರೋಮೊಡಿಯೊಲೋನ್ ಎಂಬ ಪಾಷಾಣವನ್ನು ತರಿಸಲು ನಿರ್ಧರಿಸಿದೆ. ಇದಕ್ಕಾಗಿ ಭಾರತಕ್ಕೆ ಮನವಿ ಸಲ್ಲಿಸಿರುವ ಅಲ್ಲಿನ ಸರ್ಕಾರ, ಸುಮಾರು 5000 ಲೀಟರ್ಗಳಷ್ಟು ಬ್ರೋಮೊಡಿಯೊಲೋನ್ ಕಳಿಸುವಂತೆ ಕೇಳಿಕೊಂಡಿದೆ. ಬ್ರೋಮೊಡಿಯೊಲೋನ್ ಗಿಂತ ಉತ್ತಮವಾದ ಬೇರೊಂದು ಇಲಿ ಪಾಷಾಣ ಈ ಭೂಮಿಯಲ್ಲಿ ಸಿಗುವುದಿಲ್ಲ. ಹಾಗಾಗಿ, ಭಾರತದಿಂದ ಅದನ್ನು ಆಮದು ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ನ್ಯೂವೇಲ್ಸ್ನ ಆರೋಗ್ಯ ಸಚಿವ ಆ್ಯಡಮ್ ಮಾರ್ಷಲ್ ತಿಳಿಸಿದ್ದಾರೆ.
ಇದನ್ನೂ ಓದಿ: ಏಶ್ಯನ್ ಬಾಕ್ಸಿಂಗ್ ಚಾಂಪಿಯನ್ಶಿಪ್ : ಆರನೇ ಚಿನ್ನ ಗೆಲ್ಲುವತ್ತ ಮೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ
Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…
Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್ಗೆ ಟ್ರಂಪ್
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sulya: ಅವಾಚ್ಯ ಮಾತು: ಮಹಿಳೆಯಿಂದ ಪೊಲೀಸರಿಗೆ ದೂರು
Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.