![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 5, 2020, 6:04 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್-ಬಾಲ್ಟಿಸ್ತಾನಗಳಲ್ಲಿ ಸ್ಥಳೀಯ ಚುನಾವಣೆ ನಡೆಸಬೇಕು. ಈ ಬಗ್ಗೆ 2018ರ ಆದೇಶಕ್ಕೆ ತಿದ್ದುಪಡಿ ತರಬೇಕು ಎಂದು ಪಾಕಿಸ್ತಾನ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಕೇಂದ್ರ ಸರ್ಕಾರ ಸೋಮವಾರ ಪ್ರಬಲ ಆಕ್ಷೇಪ ಮಾಡಿದೆ.
ಪಾಕಿಸ್ತಾನ ಬಲವಂತವಾಗಿ ಆತಿಕ್ರಮಿಸಿಕೊಂಡಿರುವ ಪ್ರದೇಶಗಳಲ್ಲಿ ಮಾಡುತ್ತಿರುವ ಬದಲಾವಣೆ ಒಪ್ಪಿಕೊಳ್ಳಲಾಗುವುದಿಲ್ಲ ಎಂದು ಸ್ಪಷ್ಟವಾಗಿ ವಿದೇಶಾಂಗ ಇಲಾಖೆ ತಿಳಿಸಿದೆ.
ನವ ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್ ಕಚೇರಿಯ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ವಿದೇಶಾಂಗ ಸಚಿವಾಲಯಕ್ಕೆ ಕರೆಯಿಸಿಕೊಂಡು ಭಾರತದ ವತಿಯಿಂದ ಕಟು ಶಬ್ದಗಳ ಪ್ರತಿಭಟನೆ ವ್ಯಕ್ತಪಡಿಸಲಾಗಿದೆ.
‘ಗಿಲ್ಗಿಟ್ – ಬಾಲ್ಟಿಸ್ತಾನ, ಲಡಾಖ್, ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಹಲವು ಬಾರಿ ತಿಳಿಯಪಡಿಸಲಾಗಿದೆ. ಈ ಬಗ್ಗೆ 1994ರಲ್ಲಿ ಭಾರತೀಯ ಸಂಸತ್ತು ಸರ್ವಾನುಮತದಿಂದ ಅಂಗೀಕಾರ ಮಾಡಿದೆ. ಹೀಗಾಗಿ ಆಕ್ರಮಣಗೊಂಡಿರುವ ಪ್ರಾಂತ್ಯಗಳಲ್ಲಿ ಹಕ್ಕು ಚಲಾಯಿಸಲು ಪಾಕಿಸ್ತಾನದ ಸರ್ಕಾರಕ್ಕಾಗಲೀ, ಅಲ್ಲಿನ ನ್ಯಾಯಾಂಗಕ್ಕಾಗಲೀ ಅವಕಾಶವಿಲ್ಲ.
ಸದ್ಯ ಉಂಟಾಗಿರುವ ಬೆಳವಣಿಗೆಯನ್ನು ಕೇಂದ್ರ ಸರ್ಕಾರ ಖಂಡಿಸುತ್ತಿದೆ. ಅತಿಕ್ರಮಿಸಿರುವ ಪ್ರದೇಶಗಳಿಂದ ಪಾಕಿಸ್ತಾನ ಕೂಡಲೇ ಕಾಲ್ತೆಗೆಯಬೇಕು ಎಂದು ಆಗ್ರಹಿಸುತ್ತೇವೆ’ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
– ಅತಿಕ್ರಮಿಸಿರುವ ಪ್ರದೇಶಗಳಲ್ಲೇಕೆ ಬದಲಾವಣೆ?
– ಪಾಕ್ ಹೈಕಮಿಷನ್ ಅಧಿಕಾರಿ ಕರೆಯಿಸಿಕೊಂಡು ತರಾಟೆ
– ಗಿಲ್ಗಿಟ್ – ಬಾಲ್ಟಿಸ್ತಾನ್ ಭಾರತದ ಅವಿಭಾಜ್ಯ ಅಂಗ
– ಹಕ್ಕು ಚಲಾಯಿಸಲು ಪಾಕಿಸ್ತಾನ ಸರ್ಕಾರ, ನ್ಯಾಯಾಂಗಕ್ಕೆ ಅವಕಾಶವಿಲ್ಲ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.