Prime Modi ಉಕ್ರೇನ್ ನೊಂದಿಗೆ ಭಾರತವಿದೆ… : 4 ಒಪ್ಪಂದಗಳಿಗೆ ಸಹಿ

ಸಂಘರ್ಷ ವಿನಾಶಕಾರಿ... ರಷ್ಯಾ ಯಾವ ರೀತಿ ಪ್ರತಿಕ್ರಿಯಿಸುತ್ತದೆ ಎನ್ನುವ ಕುತೂಹಲ

Team Udayavani, Aug 23, 2024, 6:28 PM IST

1-I-U

ಕೀವ್ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಉಕ್ರೇನ್ ನಲ್ಲಿ ಶುಕ್ರವಾರ (ಆ 23) ಅಧ್ಯಕ್ಷ ವ್ಲಾದಿಮಿರ್ ಝೆಲೆನ್ಸ್ಕಿ ಅವರು ಸ್ವಾಗತಿಸಿದರು. ಭಾರತ ಮತ್ತು ಉಕ್ರೇನ್ ನಾಲ್ಕು ಒಪ್ಪಂದಗಳಿಗೆ ಸಹಿ ಹಾಕಿವೆ.

ಕೃಷಿ, ಆಹಾರೋದ್ಯಮ, ಔಷಧ, ಸಂಸ್ಕೃತಿ ಮತ್ತು ಮಾನವೀಯ ನೆರವು ಕ್ಷೇತ್ರಗಳಲ್ಲಿ ನಾಲ್ಕು ಒಪ್ಪಂದಗಳು ಸಹಕಾರ ಒದಗಿಸುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯುದ್ಧ ಪೀಡಿತ ದೇಶದಲ್ಲಿ ಪ್ರಧಾನಿ ಮೋದಿ ರಾಜಧಾನಿ ಕೀವ್ ಗೆ ಐತಿಹಾಸಿಕ ಭೇಟಿ ನೀಡಿದ್ದು ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. 1991 ರಲ್ಲಿ ಉಕ್ರೇನ್ ಸ್ವತಂತ್ರವಾದ ನಂತರ ಭಾರತದ ಪ್ರಧಾನಿಯೊಬ್ಬರು ಮೊದಲ ಬಾರಿಗೆ ಭೇಟಿ ನೀಡಿದಂತಾಗಿದೆ.ರಷ್ಯಾದ ಪಶ್ಚಿಮ ಕುರ್ಸ್ಕ್ ಪ್ರದೇಶದಲ್ಲಿ ಕೀವ್ ನಲ್ಲಿ ಮಿಲಿಟರಿ ಆಕ್ರಮಣದ ನಡುವೆ ಪ್ರಧಾನಿ ಮೋದಿ ಅವರು ಪ್ರವಾಸ ಕೈಗೊಂಡಿದ್ದಾರೆ. ಮೋದಿ ಅವರ ಭೇಟಿ ವೇಳೆ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.

”ನಾನು ಇಂದು ಕೀವ್ ನಲ್ಲಿ ಬಹಳ ಉತ್ಪಾದಕ ಚರ್ಚೆಗಳನ್ನು ನಡೆಸಿದ್ದೇನೆ. ಭಾರತವು ಉಕ್ರೇನ್‌ನೊಂದಿಗೆ ಆರ್ಥಿಕ ಸಂಬಂಧವನ್ನು ಗಾಢವಾಗಿಸಲು ಉತ್ಸುಕವಾಗಿದೆ. ಕೃಷಿ, ತಂತ್ರಜ್ಞಾನ, ಫಾರ್ಮಾ ಮತ್ತು ಅಂತಹ ಇತರ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಮಾರ್ಗಗಳನ್ನು ನಾವು ಚರ್ಚಿಸಿದ್ದೇವೆ. ನಾವು ಸಾಂಸ್ಕೃತಿಕ ಸಂಬಂಧಗಳನ್ನು ಮತ್ತಷ್ಟು ಗಟ್ಟಿಮಾಡಿಕೊಳ್ಳಲು ಸಹ ಒಪ್ಪಿಕೊಂಡಿದ್ದೇವೆ. ನಡೆಯುತ್ತಿರುವ ಸಂಘರ್ಷದ ಬಗ್ಗೆಯೂ ಚರ್ಚೆ ನಡೆಸಿದ್ದೇವೆ. ಶಾಂತಿ ಕಾಪಾಡುವುದು ಅತ್ಯಂತ ಮಹತ್ವದ್ದಾಗಿದೆ. ಸಂಘರ್ಷಕ್ಕೆ ಶಾಂತಿಯುತ ಪರಿಹಾರವು ಮಾನವೀಯತೆಗೆ ಉತ್ತಮ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಶಾಂತಿಗಾಗಿ ಭಾರತ ಕೆಲಸ ಮಾಡುತ್ತದೆ ಎಂದು ಪ್ರಧಾನಿ ಮೋದಿ ಈಗಾಗಲೇ ಹೇಳಿಕೆ ನೀಡಿದ್ದು, ಈ ಭೇಟಿಗೆ ಉಕ್ರೇನ್ ಮೇಲೆ ಸಮರ ನಡೆಸುತ್ತಿರುವ ರಷ್ಯಾ ಯಾವ ರೀತಿ ಪ್ರತಿಕ್ರಿಯಿಸುತ್ತದೆ ಎನ್ನುವ ಕುತೂಹಲ ಎಲ್ಲರದ್ದಾಗಿದೆ.

ಕೀವ್ ನಲ್ಲಿ ಹುತಾತ್ಮರ ಸ್ಮಾರಕಕ್ಕೆ ಗೌರವಾರ್ಪಣೆ ಸಲ್ಲಿಸಿದ ಮೋದಿ ”ವ್ಲಾದಿಮಿರ್ ಝೆಲೆನ್ಸ್ಕಿ  ಜತೆ ನಾವಿದ್ದೇವೆ ಚಿಕ್ಕ ಮಕ್ಕಳಿಗೆ ಸಂಘರ್ಷವು ವಿಶೇಷವಾಗಿ ವಿನಾಶಕಾರಿಯಾಗಿದೆ. ಪ್ರಾಣ ಕಳೆದುಕೊಂಡ ಮಕ್ಕಳ ಕುಟುಂಬದ ಸದಸ್ಯರೊಂದಿಗೆ ನನ್ನ ಹೃದಯವಿದೆ ಮತ್ತು ಅವರ ದುಃಖವನ್ನು ಹೋಗಲಾಡಿಸುವ ಶಕ್ತಿ ಅವರಿಗೆ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಭಾವುಕ ಚಿತ್ರಗಳ ಸಹಿತ ಎಕ್ಸ್ ಪೋಸ್ಟ್ ಮಾಡಿದ್ದಾರೆ.

ಟಾಪ್ ನ್ಯೂಸ್

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ

Tulunadu-utsava

Mangaluru: ತುಳುನಾಡ ಉತ್ಸವ ಪಿಲಿಕುಳ ಕಂಬಳ: ಬೆಂಗಳೂರಿನಲ್ಲಿ ಸಭೆ

police

Udupi: ನಾಪತ್ತೆಯಾಗಿದ್ದ ಬಾಲಕನ ರಕ್ಷಣೆ, ಮಕ್ಕಳ ರಕ್ಷಣ ಘಟಕಕ್ಕೆ ಹಸ್ತಾಂತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Actor James Hollcroft: ಕೆಲ ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದ ನಟ ಶವವಾಗಿ ಪತ್ತೆ

PM Modi ಚೀನವನ್ನು ಸರಿಯಾಗಿ ನಿಭಾಯಿಸಿಲ್ಲ: ರಾಹುಲ್‌ ಗಾಂಧಿ

PM Modi ಚೀನವನ್ನು ಸರಿಯಾಗಿ ನಿಭಾಯಿಸಿಲ್ಲ: ರಾಹುಲ್‌ ಗಾಂಧಿ

Kamala Harris: ಪುಟಿನ್‌ ನಿಮ್ಮನ್ನೇ ತಿಂದು ತೇಗುತ್ತಿದ್ದರು: ಟ್ರಂಪ್‌ಗೆ ಕಮಲಾ ತಿರುಗೇಟು!

Kamala Harris: ಪುಟಿನ್‌ ನಿಮ್ಮನ್ನೇ ತಿಂದು ತೇಗುತ್ತಿದ್ದರು: ಟ್ರಂಪ್‌ಗೆ ಕಮಲಾ ತಿರುಗೇಟು!

1-ssss

US Presidential debate; ಟ್ರಂಪ್-ಕಮಲಾ ಮುಖಾಮುಖಿ: ಬಾಣಕ್ಕೆ ಪ್ರತಿಬಾಣ

Americaದಲ್ಲಿ ಭಾರತ ವಿರೋಧಿ Lawmaker ಇಲ್ಹಾನ್‌ ಭೇಟಿಯಾದ ರಾಹುಲ್-‌ ಯಾರೀಕೆ?

Americaದಲ್ಲಿ ಭಾರತ ವಿರೋಧಿ Lawmaker ಇಲ್ಹಾನ್‌ ಭೇಟಿಯಾದ ರಾಹುಲ್-‌ ಯಾರೀಕೆ?

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

congress

Haryana ಚುನಾವಣೆ: 89 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಕಣಕ್ಕೆ, ಸಿಪಿಎಂಗೆ 1 ಸ್ಥಾನ

suicide (2)

Kanpur:ಮಹಿಳೆಯ ಬೆತ್ತಲೆ, ರುಂಡವಿಲ್ಲದ ಮೃತದೇಹ ಪತ್ತೆ

1bbb

Baahubali; ನೆರೆ ನೀರಲ್ಲಿ ತಲೆ ಮೇಲೆ ಬೈಕ್‌ ಹೊತ್ತು ನಡೆದ ‘ಬಾಹುಬಲಿ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.