![1-mangaluru](https://www.udayavani.com/wp-content/uploads/2024/07/1-mangaluru-415x268.jpg)
ಅಮೆರಿಕದಲ್ಲಿ ಭಾರತೀಯ ಮೂಲದ ಕುಟುಂಬದ ನಾಲ್ವರ ಶವ ಪತ್ತೆ… ಬಾತ್ರೂಮ್ನಲ್ಲಿ ಇತ್ತು ಗನ್
Team Udayavani, Feb 14, 2024, 4:30 PM IST
![ಅಮೆರಿಕದಲ್ಲಿ ಭಾರತೀಯ ಮೂಲದ ಕುಟುಂಬದ ನಾಲ್ವರ ಶವ ಪತ್ತೆ… ಬಾತ್ರೂಮ್ನಲ್ಲಿ ಇತ್ತು ಗನ್](https://www.udayavani.com/wp-content/uploads/2024/02/amerika-620x349.jpg)
ಕ್ಯಾಲಿಫೋರ್ನಿಯಾ: ಕೇರಳ ಮೂಲದ ಕುಟುಂಬವೊಂದು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿರುವ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮೃತರನ್ನು ಆನಂದ್ ಸುಜಿತ್ ಹೆನ್ರಿ(42), ಪತ್ನಿ ಆಲಿಸ್ ಪ್ರಿಯಾಂಕಾ(40), ಮತ್ತು ಅವರ 4 ವರ್ಷದ ಅವಳಿ ಮಕ್ಕಳಾದ ನೋಹ್ ಮತ್ತು ನೀಥಾನ್ ಎಂದು ಗುರುತಿಸಲಾಗಿದೆ.
ಕುಟುಂಬ ಸದಸ್ಯರೊಬ್ಬರು ಯೋಗಕ್ಷೇಮ ವಿಚಾರಿಸಲು ಕರೆ ಮಾಡಿದ ಸಂದರ್ಭ ಮನೆಯಲ್ಲಿ ಯಾರೂ ಕರೆ ಸ್ವೀಕರಿಸಲಿಲ್ಲ ಇದರಿಂದ ಅನುಮಾನಗೊಂಡ ಕುಟುಂಬ ಸದಸ್ಯರು ಕ್ಯಾಲಿಫೋರ್ನಿಯಾದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಪೊಲೀಸರು ಮನೆಯಾ ಬಳಿ ಬಂದು ಬೆಲ್ ಮಾಡಿದ ವೇಳೆ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ ಇದಾದ ಬಳಿಕ ಕಿಟಕಿಯ ಬಾಗಿಲು ತೆರೆದು ನೋಡಿದಾಗ ಮೃತದೇಹ ಪತ್ತೆಯಾಗಿದೆ.
ಬಳಿಕ ಬಾಗಿಲು ಒಡೆದು ಒಳ ಪ್ರವೇಶಿಸಿದ ಪೊಲೀಸರಿಗೆ ಇಬ್ಬರು ಅವಳಿ ಮಕ್ಕಳ ಮೃತದೇಹ ಬೆಡ್ ರೂಮ್ ನಲ್ಲಿ ಪತ್ತೆಯಾಗಿದ್ದು ಜೊತೆಗೆ ಪತಿ ಮತ್ತು ಪತ್ನಿಯ ಮೃತದೇಹ ಬಾತ್ ರೂಮ್ ನ ಒಳಗೆ ಪತ್ತೆಯಾಗಿದೆ. ಅಷ್ಟು ಮಾತ್ರವಲ್ಲದೆ ಬಾತ್ ರೂಮ್ ನಲ್ಲಿ ೯ ಎಂಎಂ ಪಿಸ್ತೂಲ್ ಪತ್ತೆಯಾಗಿದ್ದು ಕುಟುಂಬ ಸದಸ್ಯರ ಮೈಮೇಲೂ ಗುಂಡಿನ ಗಾಯಗಳು ಪತ್ತೆಯಾಗಿವೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಕುರಿತು ತನಿಖೆ ನಡೆಯುತ್ತಿದೆ. ಪರಿಶೀಲನೆ ನಡೆಸಿದ ಪೊಲೀಸರಿಗೆ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ ಅಲ್ಲದೆ ಮನೆಯೊಳಗೆ ಯಾರೂ ಪ್ರವೇಶಿಸಿದ ಗುರುತೂ ಇರಲಿಲ್ಲ ಮನೆಯ ಕಿಟಕಿ ಬಾಗಿಲೊಂದು ಮಾತ್ರ ತೆರೆದಿತ್ತು ಹಾಗಾಗಿ ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಅನುಮಾನ ಕಾದಿದ್ದು ಮರಣೋತ್ತರ ಪರೀಕ್ಷಾ ವರದಿ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.
ದಂಪತಿಗಳು 2020ರಲ್ಲಿ ಮನೆ ಖರೀಸಿದಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು ಜೊತೆಗೆ ನೆರೆ ಹೊರೆಯವರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು ಎಂದು ಹೇಳಲಾಗಿದೆ. ಸದ್ಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಇದನ್ನೂ ಓದಿ: Kaatera: ಓಟಿಟಿಯಲ್ಲಿ ರಿಲೀಸ್ ಆದ ಐದೇ ದಿನದಲ್ಲಿ ಹೊಸ ದಾಖಲೆ ಬರೆದ ʼಕಾಟೇರʼ
ಟಾಪ್ ನ್ಯೂಸ್
![1-mangaluru](https://www.udayavani.com/wp-content/uploads/2024/07/1-mangaluru-415x268.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
![10](https://www.udayavani.com/wp-content/uploads/2024/07/10-2-150x90.jpg)
ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-150x92.jpg)
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
![1-honnavara](https://www.udayavani.com/wp-content/uploads/2024/07/1-honnavara-150x90.jpg)
Honnavara: ಪಟ್ಟಣ ಪಂಚಾಯತ್ ನಲ್ಲಿ ಲೋಕಾಯುಕ್ತ ದಾಳಿ
![1-vijayendra](https://www.udayavani.com/wp-content/uploads/2024/07/1-vijayendra-150x100.jpg)
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.