India ವರ, ಇರಾಕ್, ಇರಾನ್ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್ ಪ್ರಧಾನಿ ನೆತನ್ಯಾಹು
ನಕ್ಷೆಯಲ್ಲಿ ಪ್ಯಾಲೆಸ್ತೀನ್ ಇಲ್ಲವೇ ಇಲ್ಲ!
Team Udayavani, Sep 29, 2024, 6:54 AM IST
ವಿಶ್ವಸಂಸ್ಥೆ: ಹೆಜ್ಬುಲ್ಲಾ- ಇಸ್ರೇಲ್ ಕದನ ತೀವ್ರಗೊಂಡಿರುವ ನಡುವೆಯೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್, ಇರಾಕ್ ಅನ್ನು “ಶಾಪ’ವೆಂದೂ, ಭಾರತವನ್ನು “ವರ’ವೆಂದೂ ಬಣ್ಣಿಸಿರುವ ಘಟನೆ ನಡೆದಿದೆ.
ಶುಕ್ರವಾರ ನೆತನ್ಯಾಹು ಎರಡು ನಕ್ಷೆಗಳನ್ನು ತೋರಿಸುತ್ತಾ ನ್ಯೂಯಾರ್ಕ್ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನ ಉದ್ದೇಶಿಸಿ ಮಾತನಾಡಿದ್ದು ಕಂಡುಬಂತು. ಬಲಕೈಯ್ಯಲ್ಲಿ ಮಧ್ಯಪ್ರಾಚ್ಯ ರಾಷ್ಟ್ರಗಳ ಮ್ಯಾಪ್ ಇದ್ದು, ಅದರಲ್ಲಿ ಇರಾನ್, ಇರಾಕ್, ಸಿರಿಯಾ ಮತ್ತು ಯೆಮನ್ಗೆ ಕಪ್ಪು ಬಣ್ಣ ಬಳಿಯಲಾಗಿತ್ತು. ಜತೆಗೆ “ದಿ ಕರ್ಸ್'(ಶಾಪ) ಎಂದು ಬರೆಯಲಾಗಿತ್ತು. ಅದೇ ರೀತಿ, ಎಡಗೈಯ್ಯಲ್ಲಿ ಈಜಿಪ್ಟ್, ಸುಡಾನ್, ಸೌದಿ ಅರೇಬಿಯಾ ಮತ್ತು ಭಾರತದ ನಕ್ಷೆಗಳಿಗೆ ಹಸುರು ಬಣ್ಣ ಬಳಿದು, “ದಿ ಬ್ಲೆಸ್ಸಿಂಗ್'(ವರ) ಎಂದು ಶೀರ್ಷಿಕೆ ನೀಡಲಾಗಿತ್ತು. ಇರಾನ್ ಮತ್ತು ಅದರ ಮಿತ್ರರಾಷ್ಟ್ರಗಳೇ ಈಗ ನಡೆಯುತ್ತಿರುವ ಸಂಘರ್ಷಗಳಿಗೆ ಕಾರಣ ಎಂದು ನೆತನ್ಯಾಹು ಹೇಳಿದರು. ಲೆಬನಾನ್ನಲ್ಲಿ ಹೆಜ್ಬುಲ್ಲಾಗೆ, ಗಾಜಾದಲ್ಲಿ ಹಮಾಸ್ಗೆ ಮತ್ತು ಯೆಮೆನ್ನಲ್ಲಿ ಹೌತಿ ಉಗ್ರರಿಗೆ ಇರಾನ್ ಹಣಕಾಸಿನ ಮತ್ತು ಸೇನಾ ನೆರವು ನೀಡಿದ್ದರಿಂದಲೇ ಈ ಪ್ರದೇಶದಲ್ಲಿ ಈಗ ಅಸ್ಥಿರತೆ ಉಂಟಾಗಿದೆ ಎಂದರು.
ನಕ್ಷೆಯಲ್ಲಿ ಪ್ಯಾಲೆಸ್ತೀನ್ ಇಲ್ಲವೇ ಇಲ್ಲ!
ವಿಶೇಷವೆಂದರೆ, ವಿಶ್ವಸಂಸ್ಥೆಯಲ್ಲಿ ಇಸ್ರೇಲ್ನಲ್ಲಿ ನೆತನ್ಯಾಹು ಪ್ರದರ್ಶಿಸಿದ ಎರಡೂ ನಕ್ಷೆಯಲ್ಲೂ “ಪ್ಯಾಲೆಸ್ತೀನ್’ ಅನ್ನು ಸಂಪೂರ್ಣವಾಗಿ ಅಳಿಸಿಹಾಕಲಾಗಿತ್ತು. ಆ ಮೂಲಕ ಅಂಥದ್ದೊಂದು ದೇಶ ಅಸ್ತಿತ್ವದಲ್ಲೇ ಇಲ್ಲ ಎಂಬಂತೆ ಬಿಂಬಿಸುವ ಪ್ರಯತ್ನ ನಡೆಯಿತು. ಇಸ್ರೇಲ್ ಪ್ರಧಾನಿ ನೆತನ್ಯಾಹು ಭಾಷಣದ ವೇಳೆ ಹಲವು ರಾಜತಾಂತ್ರಿಕ ಅಧಿಕಾರಿಗಳು ಪ್ರತಿಭಟನಾರ್ಥವಾಗಿ ಸಭಾತ್ಯಾಗ ಮಾಡಿದ್ದು ಕಂಡುಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel ಸರ್ಜಿಕಲ್ ಸ್ಟ್ರೈಕ್: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್ ಬಾಂಬ್!
Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ
Sheikh Hasina ಭಾರತದಿಂದ ಗಡೀಪಾರಿಗೆ ಬಾಂಗ್ಲಾದೇಶ ಪ್ರಯತ್ನ?
UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್ ಬೆಂಬಲ
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.