ಯುದ್ಧದ ಎಫೆಕ್ಟ್ : 4 ತಿಂಗಳಲ್ಲಿ 7.1 ಕೋಟಿ ಮಂದಿಗೆ ಬಡತನ!
ವಿಶ್ವದ ಶೇ. 9ರಷ್ಟು ಜನ ಬಡತನದ ವ್ಯಾಪ್ತಿಗೆ
Team Udayavani, Jul 8, 2022, 6:45 AM IST
ದುಬಾೖ : ರಷ್ಯಾ-ಉಕ್ರೇನ್ ಯುದ್ಧದಿಂದ ಆ ದೇಶಗಳು ಮಾತ್ರವಲ್ಲ, ಇಡೀ ಜಗತ್ತೇ ಒದ್ದಾಡುತ್ತಿದೆ! ಹಾಗೆಯೇ ರಷ್ಯಾ ಮೇಲೆ ಜಗತ್ತಿನ ಹಲವು ದೇಶಗಳು ನಿರ್ಬಂಧ ಹೇರಿದ್ದವು. ಅದರ ಪರಿಣಾಮ ಕೇವಲ ರಷ್ಯನ್ನರ ಮೇಲಾಗಿಲ್ಲ, ವಿಶ್ವದ ಇತರ ದೇಶಗಳ ಮೇಲೂ ಆಗಿವೆ. ಹಾಗಾಗಿ 7.1 ಕೋಟಿ ಮಂದಿ ಬಡವರ ಪಟ್ಟಿಗೆ ಸೇರಿಕೊಂಡಿದ್ದಾರೆ. ಇದಕ್ಕೆ ಮುಖ್ಯ ಕಾರಣ ಆಹಾರ ಪದಾರ್ಥಗಳು ಮತ್ತು ತೈಲದರ ದುಬಾರಿಯಾಗಿರುವುದು.
ಯುಎನ್ಡಿಪಿಯ (ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮಗಳು) ಅಂದಾಜಿನ ಪ್ರಕಾರ, ಯುದ್ಧಾರಂಭವಾದ 3 ತಿಂಗಳಿನಲ್ಲೇ 5.16 ಕೋಟಿ ಮಂದಿ ಬಡತನ ರೇಖೆಯ ವ್ಯಾಪ್ತಿಗೆ ಬಂದರು.
ಇವರು ದಿನವೊಂದಕ್ಕೆ ಕೇವಲ 1.90 ಡಾಲರನ್ನು ತಮ್ಮ ಜೀವನಕ್ಕಾಗಿ ವ್ಯಯಿಸುತ್ತಿದ್ದಾರೆ. ಅದಾದ ಮೇಲೆ ಮತ್ತೆ 2 ಕೋಟಿ ಮಂದಿ ಈ ಪಟ್ಟಿ ಸೇರಿಕೊಂಡರು. ಈ ಪಟ್ಟಿಗೆ ಸೇರಿದವರು ದಿನವೊಂದಕ್ಕೆ 3.20 ಡಾಲರ್ಗಳನ್ನು ವ್ಯಯಿಸುತ್ತಿದ್ದಾರೆ. ಒಟ್ಟಾರೆ ವಿಶ್ವದ ಜನಸಂಖ್ಯೆಯ ಶೇ. 9 ಮಂದಿ ಬಡತನದ ವ್ಯಾಪ್ತಿಗೆ ಬಂದಿದ್ದಾರೆ. ಉಕ್ರೇನಿನ ಬಂದರುಗಳನ್ನು ಮುಚ್ಚಲಾಗಿದ್ದು, ಧಾನ್ಯಗಳ ರಫ್ತು ನಿಂತಿದೆ. ಇದೂ ಜಾಗತಿಕ ಆರ್ಥಿಕತೆಗೆ ಹೊಡೆತ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel ಸರ್ಜಿಕಲ್ ಸ್ಟ್ರೈಕ್: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್ ಬಾಂಬ್!
India ವರ, ಇರಾಕ್, ಇರಾನ್ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್ ಪ್ರಧಾನಿ ನೆತನ್ಯಾಹು
Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ
Sheikh Hasina ಭಾರತದಿಂದ ಗಡೀಪಾರಿಗೆ ಬಾಂಗ್ಲಾದೇಶ ಪ್ರಯತ್ನ?
UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್ ಬೆಂಬಲ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್ ಆರೋಪ
Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ ಸಂಸದ ಯದುವೀರ್ ಭೇಟಿ
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ
MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ
Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.